ಹಲವೆಡೆ ಬಸ್‌ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ


Team Udayavani, Aug 11, 2019, 3:06 AM IST

halavede-busd

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಕೆಲವೆಡೆ ರಸ್ತೆಗಳ ಮೇಲೆ ಭೂಕುಸಿತ ಉಂಟಾಗಿ, ಮರಗಳು ಉರುಳಿದ ಪರಿಣಾಮ ಆ ಮಾರ್ಗಗಳಲ್ಲಿನ ವಾಹನ ಸಂಚಾರವನ್ನು ಸಂಪೂರ್ಣ ಬಂದ್‌ ಮಾಡಲಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

ಉಡುಪಿ-ಬೆಂಗಳೂರಿನ ನಾಲ್ಕೂ ಮಾರ್ಗ ಬಂದ್‌: ಉಡುಪಿ – ಶಿವಮೊಗ್ಗ, ಬೆಂಗಳೂರು, ಮೈಸೂರು ಭಾಗಗಳಿಗೆ ಹೋಗುವ 40 ಬಸ್‌ಗಳು ಉಡುಪಿಯ ಕೆಸ್ಸಾರ್ಟಿಸಿ ಡಿಪೋದಲ್ಲಿ ನಿಲುಗಡೆಯಾಗಿವೆ. ಉಡುಪಿಯಿಂದ ಬೆಂಗಳೂರಿಗೆ ತೆರಳುವ ನಾಲ್ಕೂ ಮಾರ್ಗಗಳು ಬಂದ್‌ ಆಗಿದ್ದು, ಸದ್ಯಕ್ಕೆ ಕೊಲ್ಲೂರು – ಹೊಸನಗರ, ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತಲುಪುವಂತಹ ಒಂದೇ ಆಯ್ಕೆಯಿದೆ. ಉಳಿದಂತೆ ಯಲ್ಲಾಪುರ, ಚಾರ್ಮಾಡಿ, ಮೈಸೂರು, ವಿಜಯಪುರ, ಜಮಖಂಡಿ, ಹುಬ್ಬಳ್ಳಿ, ಧಾರವಾಡ ಮಾರ್ಗಗಳು ಸಂಪೂರ್ಣ ಬಂದ್‌ ಆಗಿವೆ.

ಕೊಡಗಿಗೆ ಸಂಚಾರ ಅಸ್ತವ್ಯಸ್ತ: ಮಡಿಕೇರಿ – ಕುಶಾಲನಗರ-ಹಾಸನ ರಾಜ್ಯ ಹೆದ್ದಾರಿ ಜಲಾವೃತ. ಹಾಸನ ಕಡೆಗೆ ತೆರಳುವ ಮತ್ತು ಹಾಸನದ ಕಡೆಯಿಂದ ಕೊಡಗಿಗೆ ಆಗಮಿಸುವವರು ಸಕಲೇಶಪುರ-ಶನಿವಾರಸಂತೆ-ಸೋಮವಾರಪೇಟೆ-ಸುಂಟಿಕೊಪ್ಪ ಮಾರ್ಗವಾಗಿ ಬಳಸು ದಾರಿಯಲ್ಲಿ ಸಂಚರಿಸಬೇಕಿದೆ. ತುರ್ತು ಕಾರ್ಯ ನಿಮಿತ್ತ ತೆರಳುವವರನ್ನು ಕುಶಾಲನಗರದಿಂದ ಕೊಪ್ಪದವರೆಗೆ ಬೋಟ್‌ಗಳಲ್ಲಿ ಒಯ್ದು, ಅಲ್ಲಿಂದ ವಾಹನಗಳಲ್ಲಿ ಕಳುಹಿಸಲಾಗುತ್ತಿದೆ. ಮಡಿಕೇರಿಯಿಂದ ಮೈಸೂರು-ಬೆಂಗಳೂರು ಕಡೆಗೆ ತೆರಳುವವರನ್ನು ಮಡಿಕೇರಿಯ ಸುದರ್ಶನ ವೃತ್ತದ ಬಳಿ ತಡೆದು ನಿಲ್ಲಿಸಲಾಗುತ್ತಿದೆ. ಇತ್ತ ಗುಡ್ಡೆಹೊಸೂರು ಬಳಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ವಾಹನಗಳನ್ನು ತಡೆದು ಹಾರಂಗಿ ಮಾರ್ಗವಾಗಿ ಕಳುಹಿಸಲಾಗುತ್ತಿದೆ.

ಕರ್ನಾಟಕ-ಕೇರಳ ಸಂಚಾರ ಬಂದ್‌: ಗುಂಡ್ಲುಪೇಟೆ – ಕೇರಳದ ವೈನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸುಲ್ತಾನ್‌ ಬತ್ತೇರಿ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ನೀರಿನ ಹರಿವು ಹೆಚ್ಚಿದ ಪರಿಣಾಮ ಎಲ್ಲಾ ವಾಹನಗಳನ್ನೂ ಕರ್ನಾಟಕ ಗಡಿ ಪ್ರದೇಶವಾದ ಮದ್ದೂರು ಚೆಕ್‌ ಪೋಸ್ಟ್‌ ಸಮೀಪ ತಡೆ ಹಿಡಿಯಲಾಗಿದೆ. ಇದರಿಂದಾಗಿ ಕರ್ನಾಟಕ ಮತ್ತು ಕೇರಳ ಸಂಪರ್ಕ ತಾತ್ಕಾಲಿಕವಾಗಿ ಬಂದ್‌ ಆಗಿದೆ. ಕೇರಳ ಗಡಿ ಭಾಗದಲ್ಲಿ ಹರಿಯುವ ಕಬಿನಿ ನೀರಿನ ರಭಸ ಹೆಚ್ಚಾದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಇದರಿಂದಾಗಿ ನಿಂತಿರುವ ವಾಹನಗಳ ಮೇಲೆಯೇ ನೀರು ಹರಿಯುತ್ತಿದ್ದು, ಕಾರು, ಲಾರಿ ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ. ಅಪಾಯದಲ್ಲಿ ಸಿಲುಕಿದ್ದವರನ್ನು ಪೊಲೀಸ್‌ ಸಿಬ್ಬಂದಿ ಬೋಟ್‌ನ ಮೂಲಕ ರಕ್ಷಿಸಿದರು.

ಮಹಾರಾಷ್ಟ್ರ ಸಂಪರ್ಕ ಕಡಿತ
* ಬೆಳಗಾವಿ-ಮಹಾರಾಷ್ಟ್ರದ ಕೊಲ್ಹಾಪುರ, ಮೀರಜ್‌, ಸಾಂಗ್ಲಿ, ಪುಣೆ, ರತ್ನಗಿರಿ, ಇಚಲಕರಂಜಿ ಪಟ್ಟಣಗಳಿಗೆ ತೆರಳುತ್ತಿದ್ದ ಬಸ್‌ಗಳ ಸಂಚಾರ ರದ್ದು.

* ನಿಪ್ಪಾಣಿ-ಕೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ-4, ಬೆಳಗಾವಿ-ಪಣಜಿ, ಕಾಗವಾಡ್‌-ಮೀರಜ್‌ ರಸ್ತೆ ಸಂಪರ್ಕ ಬಂದ್‌.

* ಧರ್ಮಸ್ಥಳಕ್ಕೆ ತೆರಳುವ ಬಸ್‌ಗಳ ಸಂಚಾರವೂ ರದ್ದು.

* ಮಲಪ್ರಭಾ ಪ್ರವಾಹ, ಹುಬ್ಬಳ್ಳಿ -ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಸಂಚಾರ ಸಂಪೂರ್ಣ ಸ್ಥಗಿತ.

* ಹುಬ್ಬಳ್ಳಿ-ಅಂಕೋಲಾ, ಯಲ್ಲಾಪುರ- ಮುಂಡಗೋಡ ರಸ್ತೆ ಸಂಚಾರ ಬಂದ್‌.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.