ಸಚಿವೆ ನಿರ್ಮಲಾ ಎದುರು ಕಣ್ಣೀರಾದ ಸಂತ್ರಸ್ತರು


Team Udayavani, Aug 11, 2019, 3:07 AM IST

sachive-ni

ಬೆಳಗಾವಿ: ನಗರ ಸೇರಿ ವಿವಿಧೆಡೆ ಸುರಿದ ಧಾರಾ ಕಾರ ಮಳೆಯಿಂದ ಬೆಳಗಾವಿ ಜಿಲ್ಲೆ ತತ್ತರಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್‌ ಅವರ ಎದುರು ನೆರೆ ಪೀಡಿತ ಸಂತ್ರಸ್ತರು ನೋವು ತೋಡಿಕೊಂಡು ಕಣ್ಣೀರು ಸುರಿಸಿದರು.

ನಗರದ ವಡಗಾಂವಿ ಪ್ರದೇಶದ ಸಾಯಿಭವನದಲ್ಲಿ ಜಿಲ್ಲಾಡಳಿತ ಸ್ಥಾಪಿಸಿರುವ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಅಲ್ಲಿದ್ದ ಮಹಿಳೆಯರು, ಮಳೆ ಬಂದು ನಮ್ಮ ಬದುಕೇ ಕೊಚ್ಚಿಕೊಂಡು ಹೋಗಿದೆ. ಮನೆಯೂ ಇಲ್ಲ, ಉದ್ಯೋಗವೂ ಇಲ್ಲದಂತಾಗಿದೆ. ಸರ್ಕಾರ ನಮ್ಮ ನೆರವಿಗೆ ನಿಲ್ಲಬೇಕು ಎಂದು ಮನವಿ ಮಾಡಿಕೊಂಡರು.

ನೇಕಾರಿಕೆ ಮಾಡಿಕೊಂಡು ಹೊಟ್ಟೆ ತುಂಬಿಕೊಳ್ಳುತ್ತಿದ್ದೇವೆ. ಮಳೆಯಿಂದ ಮನೆ ಹಾಗೂ ನಮ್ಮ ಉದ್ಯೋಗಕ್ಕೆ ಆಸರೆಯಾಗಿದ್ದ ಮಗ್ಗಗಳೂ ನೀರು ಪಾಲಾಗಿವೆ. ಸೂಕ್ತ ಪುನರ್ವಸತಿ ಕಲ್ಪಿಸಿ ಮಗ್ಗಗಳನ್ನೂ ಕೊಡಿಸಬೇಕು ಎಂದು ಸಂತ್ರಸ್ತ ಮಹಿಳೆ ವಿದ್ಯಾರಾಣಿ ಮಕಾಟಿ ಕಣ್ಣೀರಿಡುತ್ತಿದ್ದಂತೆ ಸಚಿವೆಯ ಕಣ್ಣುಗಳೂ ಒದ್ದೆಯಾಗಿದ್ದವು. ಆಗ ಜಿಲ್ಲಾ ಧಿಕಾರಿ ಡಾ|ಎಸ್‌.ಬಿ. ಬೊಮ್ಮನಹಳ್ಳಿ ಅವರನ್ನು ಕರೆಯಿಸಿ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸುವಂತೆ ಸೂಚಿಸಿದರು. ಬಳಿಕ ಆ ಮಹಿಳೆಯನ್ನು ತಬ್ಬಿ ಸಂತೈಸಿ ಧೈರ್ಯ ನೀಡಿದರು.

ಚಪ್ಪಾಳೆಯ ಸ್ವಾಗತ: ಈ ಮಧ್ಯೆ ಪುನರ್ವಸತಿ ಕೇಂದ್ರಕ್ಕೆ ಸಚಿವೆ ನಿರ್ಮಲಾ ಆಗಮಿಸುತ್ತಿದ್ದಂತೆ ಸಂತ್ರಸ್ತರು ಚಪ್ಪಾಳೆ ಹೊಡೆದು ಸ್ವಾಗತಿಸಿದರು. ಖುದ್ದಾಗಿ ಪ್ರತಿ ಮಹಿಳೆಯ ಸಮಸ್ಯೆ ಆಲಿಸಿ ಸಾಂತ್ವನ ಹೇಳಿದರು. ಸಾಲಾಗಿ ಕುಳಿತಿದ್ದ ಸಂತ್ರಸ್ತರ ನೋವಿಗೆ ದನಿಯಾದರು. ಶಾಂತ ಚಿತ್ತದಿಂದ ಅವರ ಮಾತು ಕೇಳಿದರು. ಕೂಡಲೇ ಪರಿಹಾರ ಒದಗಿಸುವ ಭರವಸೆ ನೀಡಿದರು.

ಇದಕ್ಕೂ ಮುನ್ನ ಧಾಮಣೆ ರಸ್ತೆ ಹಾಗೂ ನೇಕಾರ ಕಾಲೋನಿಗೆ ಭೇಟಿ ನೀಡಿದ ಸಚಿವರು ಮನೆಗಳಿಗೆ ನೀರು ನುಗ್ಗಿದ ಪ್ರದೇಶವನ್ನು ವೀಕ್ಷಿಸಿದರು. ಬಳ್ಳಾರಿ ನಾಲಾದಿಂದ ಹಾನಿಗೊಳಗಾದ ನೇಕಾರ ಕುಟುಂಬದವರನ್ನು ಭೇಟಿಯಾಗಿ ಅಗತ್ಯ ಸೌಲಭ್ಯ ನೀಡುವುದಾಗಿ ತಿಳಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅ ಧಿಕಾರಿಗಳಿಂದ ಸಚಿವೆ ಜಿಲ್ಲೆಯ ಪ್ರವಾಹ ಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಇನ್ನೂ ಹೆಚ್ಚಿನ ಸೌಲಭ್ಯ ಬೇಕಾದರೆ ಕೊಡಲು ಸಿದ್ಧ.

ಸೇನೆಯ ಹೆಲಿಕಾಪ್ಟರ್‌ ಸೇರಿಯಾವುದೇ ಸಹಾಯ ಬೇಕಾದರೂ ನೀಡಲು ಕೇಂದ್ರ ಸರಕಾರ ಸಿದ್ಧವಿದೆ ಎಂದರು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಆಗಿರುವ ಹಾನಿಯ ತಾಲೂಕುವಾರು ಸಮಗ್ರ ಮಾಹಿತಿ ನೀಡಿದರು. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಸವಿಸ್ತಾರವಾಗಿ ಪ್ರವಾಹ ಕುರಿತು ಮಾಹಿತಿ ನೀಡಿದರು. ಸಂತ್ರಸ್ತರು ಕನ್ನಡದಲ್ಲಿ ಹೇಳುತ್ತಿರುವುದನ್ನು ಹಿಂದಿಯಲ್ಲಿ ಅನುವಾದಿಸಿ ತಿಳಿಸುತ್ತಿದ್ದರು.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.