ಜ್ಞಾನಭಾರತಿ ಆವರಣವಿನ್ನು ಮಾಡರ್ನ್


Team Udayavani, Aug 11, 2019, 3:08 AM IST

jnanabharati

ಬೆಂಗಳೂರು: ರಾಜ್ಯದ ಅತಿ ದೊಡ್ಡ ಕ್ಯಾಂಪಸ್‌ ಎಂಬ ಹೆಗ್ಗಳಿಕೆ ಹೊಂದಿರುವ ಬೆಂಗಳೂರು ವಿಶ್ವವಿದ್ಯಾಲಯದ “ಜ್ಞಾನಭಾರತಿ’ಯಲ್ಲಿ ಹಸಿರೀಕರಣ, ಸಿಸಿ ಕ್ಯಾಮೆರಾ ಅಳವಡಿಕೆ, ತಡೆಗೋಡೆ ನಿರ್ಮಾಣ, ಜಲಮೂಲಗಳ ಪುನಶ್ಚೇತನ ಸೇರಿ ಆಧುನಿಕ ಸ್ಪರ್ಶ ನೀಡಲು ಆಡಳಿತ ಮಂಡಳಿ ಮುಂದಾಗಿದೆ. ರೋಟರಿ ಕ್ಲಬ್‌ ಸಹಭಾಗಿತ್ವದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಜ್ಞಾನಭಾರತಿ ಆವರಣ “ಗ್ರೀನ್‌ ಹಾಗೂ ಸುಭದ್ರ ಕ್ಯಾಂಪಸ್‌’ ಆಗಲಿದೆ.

ಆ.11ರಂದು ಗ್ರೀನ್‌ ಕ್ಯಾಂಪಸ್‌ ಯೋಜನೆಗೆ ಅಧಿಕೃತ ಚಾಲನೆ ದೊರೆಯಲಿದ್ದು, 1300 ಎಕರೆ ವ್ಯಾಪ್ತಿಯ ಜ್ಞಾನಭಾರತಿ ಆವರಣದಲ್ಲಿ ಒಂದು ಲಕ್ಷ ಸಸಿ ನೆಡುವ ಉದ್ದೇಶವಿದೆ. ಇದಕ್ಕೆ ಪೂರಕವಾಗಿ ಈಗಾಗಲೇ ಹಲವು ಸಭೆಗಳನ್ನು ನಡೆಸಿರುವ ವಿವಿ ಆಡಳಿತ ಮಂಡಳಿ, ಸಸಿ ನೆಡಲು ಸ್ಥಳ ಗುರುತಿಸಲು ಡಿಜಿಟಲ್‌ ಸರ್ವೆ ನಡೆಸುತ್ತಿದೆ.

ಭದ್ರತೆಗೆ ವೀಕ್ಷಣಾ ಗೋಪುರ: ಈ ಮಧ್ಯೆ, ವಿವಿ ಆವರಣದಲ್ಲಿ ಶ್ರೀಗಂಧ, ತೇಗ ಸೆರಿ ಹಲವು ಬೆಲೆಬಾಳುವ ಮರಗಳಿವೆ. ಜತೆಗೆ, ನೂರಾರು ನವಿಲು, ಮೊಲ, ಮುಂಗಸಿಗಳಂತಹ ವನ್ಯ ಜೀವಿಗಳಿವೆ. ವಿವಿ ಆವರಣದಲ್ಲಿ ಅಪರಿಚಿತರು ವಿದ್ಯಾರ್ಥಿಗಳ ಮೊಬೈಲ್‌ ಕಸಿದು ಪರಾರಿಯಾದ ಘಟನೆಗಳು ಕೂಡ ನಡೆದಿವೆ. ಹಾಗಾಗಿ ಭದ್ರತೆ ದೃಷ್ಟಿಯಿಂದ ನಾಲ್ಕು ಮೂಲೆಗಳಲ್ಲಿ ವೀಕ್ಷಣಾ ಗೋಪುರಗಳನ್ನು ನಿರ್ಮಿಸುವುದು ಹಾಗೂ 100 ಸಿಸಿ ಕ್ಯಾಮೆರಾ ಅಳವಡಿಸುವುದು ಈ ಯೋಜನೆಯಲ್ಲಿ ಸೇರಿದೆ.

ಕ್ಯಾಪಸ್‌ನಲ್ಲಿದ್ದ 12 ಬೋರ್‌ವೆಲ್‌ಗ‌ಳಲ್ಲಿ ಅಂತರ್ಜಲ ಬತ್ತಿದೆ. ಹೀಗಾಗಿ, ಈ ಜಲಮೂಲಗಳ ಪುನರುಜ್ಜೀವನ, 20 ಹೊಸ ಎಕೋ ಪಾಂಡ್‌ಗಳ ನಿರ್ಮಾಣ, 10 ಹೊಸ ಚೆಕ್‌ ಡ್ಯಾಂ ನಿರ್ಮಾಣ ಕೂಡ ನಡೆಯಲಿದೆ. ಒತ್ತುವರಿ ತಡೆಯಲು ಕಾಂಪೌಂಡ್‌ ಇಲ್ಲದ ಗಡಿ ಗುರುತಿಸಿ ತಡೆಗೋಡೆ ನಿರ್ಮಿಸಲು ತೀರ್ಮಾನಿಸಿದೆ. ಏಕೆಂದರೆ, ಪ್ರಸ್ತುತ 1300 ಎಕರೆ ವ್ಯಾಪ್ತಿಯ ಜ್ಞಾನಭಾರತಿ ಕ್ಯಾಂಪಸ್‌ ಆವರಣ ಶೇ.60ರಷ್ಟು ಭಾಗ ಕಾಂಪೌಂಡ್‌ ಹೊಂದಿದೆ. ಬಾಕಿ 5 ಕಿ.ಮೀ ಗಡಿಗೆ ಕಾಂಪೌಂಡ್‌ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ.

ಇದರೊಂದಿಗೆ ಎರಡು ತ್ಯಾಜ್ಯ ನೀರು ಸಂಸ್ಕರಣೆ ಘಟಕ ನಿರ್ಮಿಸಲಿದ್ದು, ಪ್ರತಿ ಘಟಕದಲ್ಲಿ ಒಂದು ದಶಲಕ್ಷ ಲೀ. ತ್ಯಾಜ್ಯ ನೀರು ಸಂಸ್ಕರಣೆ ಮಾಡಿ, ಈ ನೀರನ್ನು ಎರಡು ಓವರ್‌ ಹೆಡ್‌ ಟ್ಯಾಂಕ್‌ಗಳಲ್ಲಿ ಶೇಖರಿಸಿ, ಕ್ಯಾಂಪಸ್‌ನಲ್ಲಿ ನೆಡುವ ಗಿಡಗಳಿಗೆ ಪೂರೈಸಲು ಯೋಜನೆ ರೂಪಿಸಲಾಗಿದೆ.

ವಿವಿಯನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸುವ ದೃಷ್ಟಿಯಿಂದ ಹಲವಾರು ಮಹತ್ವದ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಎಲ್ಲಾ ಯೋಜನೆಗಳಿಗೆ ಸಿಂಡಿಕೇಟ್‌ ಅನುಮೋದನೆ ದೊರೆತಿದ್ದು, ಯೋಜನಾ ವೆಚ್ಚ 25 ಕೋಟಿ ರೂ.ಗಳನ್ನು ರೋಟರಿ ಸಂಸ್ಥೆ ಭರಿಸುತ್ತಿದೆ.
-ಡಾ.ಕೆ.ಆರ್‌.ವೇಣುಗೋಪಾಲ್‌, ಕುಲಪತಿ

ಕ್ಯಾಂಪಸ್‌ ಅಭಿವೃದ್ಧಿಗೆ ರೋಟರಿ ಸಂಸ್ಥೆ ಕೈಜೋಡಿಸಿದ್ದು, ಎರಡು ವರ್ಷಗಳಲ್ಲಿ ಕ್ಯಾಂಪಸ್‌ನ ಸ್ವರೂಪವನ್ನೇ ಬದಲಿಸುವ ಉದ್ದೇಶವಿದೆ. ಜ್ಞಾನಭಾರತಿಯನ್ನು ಪರಿಸರ ಸ್ನೇಹಿ ಕ್ಯಾಂಪಸ್‌ ಮಾಡುವ ಜತೆಗೆ ಅಂತರ್ಜಲ ವೃದ್ಧಿಗೆ ಆದ್ಯತೆ ನೀಡಲಾಗುವುದು.
-ಡಾ. ಕೆ.ಸಿ.ಜಯರಾಮು, ಬೆಂಗಳೂರು ಜಿಲ್ಲಾ ರೋಟರಿ ಅಧ್ಯಕ್ಷ

* ಲೋಕೇಶ್‌ ರಾಮ್‌

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.