‘ಸಾಹೋ’ : ಆಗಸ್ಟ್ 15ಕ್ಕಲ್ಲ ; 30ಕ್ಕೆ ಬಿಡುಗಡೆ

ಬಾಹುಬಲಿಯ ಪ್ರಭಾಸ್‌ ರ ಹೊಸ ಥ್ರಿಲ್ಲರ್ ಚಿತ್ರ ಸಾಹೋ ಮೇಲೆ ಹೆಚ್ಚಿದ ನಿರೀಕ್ಷೆ

Team Udayavani, Aug 11, 2019, 8:20 PM IST

Saho-726

ಇಂಥದೊಂದು ಕುತೂಹಲ ಸಿನಿಮಾ ವೀಕ್ಷಕರಲ್ಲಿ ಹುಟ್ಟು ಹಾಕಿರುವುದಂತೂ ಸತ್ಯ. ಅದರಲ್ಲೂ ಪ್ರಭಾಸ್‌ ನ ಅಭಿಮಾನಿಗಳಲ್ಲಂತೂ ತವಕ ಹೆಚ್ಚಾಗತೊಡಗಿದೆ. ಶನಿವಾರವಷ್ಟೇ ಈ ಬಹುಭಾಷೆಯ ಚಿತ್ರದ ಟ್ರೇಲರ್‌ ಗಳನ್ನು ಮುಂಬಯಿಯಲ್ಲಿ ಬಿಡುಗಡೆ ಮಾಡಲಾಯಿತು. ಬಿಡುಗಡೆಗೊಂಡ ಒಂದೇ ದಿನದಲ್ಲಿ ‘ಸಾಹೋ’ ಟ್ರೇಲರನ್ನು ಮೂರೂ ಕಾಲು ಲಕ್ಷ ಜನ ವೀಕ್ಷಿಸಿದ್ದಾರೆ.

ಸುಜಿತ್‌ ನಿರ್ದೇಶಿಸಿರುವ ಈ ಚಿತ್ರ ಬಾಹುಬಲಿಗಿಂತ ಭಿನ್ನ. ಅದನ್ನು ಸ್ವತಃ ಪ್ರಭಾಸ್ ಅವರೇ ಟ್ರೇಲರ್‌ ಬಿಡುಗಡೆ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ. ಬಾಹುಬಲಿಯ ಬಳಿಕ ಪ್ರಭಾಸ್ ಮತ್ತೆ ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಮುಗಿಲು ಮುಟ್ಟಿದೆ. ಇಷ್ಟು ಮಾತ್ರವಲ್ಲದೇ ಈ ಚಿತ್ರ ಹಿಂದಿ, ಮಲಯಾಳಂ, ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆಗೊಳ್ಳುತ್ತಿದೆ. ಒಟ್ಟೂ ಬಜೆಟ್‌ ಲೆಕ್ಕಾಚಾರ ಮಾಡಿದರೆ 300 ಕೋಟಿಯ ಆಸುಪಾಸು.

ನನಗೂ ಕುತೂಹಲ
‘ಬಾಹುಬಲಿಯಿಂದ ಹೊರಬರುವುದೆಂದರೆ ಬಹಳ ಕಷ್ಟ. ಅಂದುಕೊಂಡಷ್ಟು ಸುಲಭವಲ್ಲ. ಆದರೂ ಪ್ರಯತ್ನಿಸಿದ್ದೇನೆ. ಸುಜಿತ್‌ ಈ ಸಿನಿಮಾವನ್ನು ತಮ್ಮ ಚಿತ್ರಕಥೆಯಿಂದಲೇ ಕಟ್ಟಿಕೊಡುತ್ತಿದ್ದಾರೆ. ನಿಜಕ್ಕೂ ಇದು ಚಿತ್ರಕಥೆಯ ಮೇಲೆಯೇ ನಿಂತ ಸಿನಿಮಾ. ಹಲವು ತಿರುವುಗಳನ್ನು ಒಳಗೊಂಡಿರುವ ಕಥೆಯಿದು. ನನ್ನ ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲ ನನ್ನಲ್ಲೂ ಇದೆ. ಸಾಹೋ ಚಿತ್ರದಲ್ಲಿ ನನ್ನ ಪಾತ್ರವನ್ನು ಪ್ರೇಕ್ಷಕರು ಸ್ವೀಕರಿಸಬಹುದು ಎಂಬ ನಂಬಿಕೆಯಿದೆ’ ಎಂದವರು ಪ್ರಭಾಸ್‌.

ಬಾಹುಬಲಿಯೇ ಬೇರೆ, ಸಾಹೋವೇ ಬೇರೆ ಎರಡನ್ನೂ ಒಟ್ಟಿಗೆ ಇಟ್ಟು ಹೋಲಿಸಬೇಡಿ. ಬಾಹುಬಲಿ ಇತಿಹಾಸ ನಿರ್ಮಿಸಲೆಂದು ಮಾಡಿದ್ದು. ಸಾಹೋ ಸಂಪೂರ್ಣವಾಗಿ ಸಿನಿ ಪ್ರೇಕ್ಷಕರನ್ನು ಮತ್ತು ಅಭಿಮಾನಿಗಳನ್ನು ರಂಜಿಸಲು, ಖುಷಿಕೊಡಲು ಮಾಡಿದ್ದು ಎಂದು ಹೇಳಿದರು ಪ್ರಭಾಸ್.

ಸುಮಾರು ಎರಡು ವರ್ಷ ಈ ಚಿತ್ರದಲ್ಲಿ ಪ್ರಭಾಸ್ ತೊಡಗಿಸಿಕೊಂಡಿದ್ದಾರೆ. ಆಸ್ಟ್ರಿಯಾ, ದುಬಾಯಿ, ಹೈದರಾಬಾದ್‌, ಮುಂಬಯಿ, ಅಬುಧಾಬಿ ಮತ್ತಿತರ ಕಡೆ ಚಿತ್ರೀಕರಣ ನಡೆದಿದೆ. ಪ್ರಭಾಸ್ ಜತೆ ಶ್ರದ್ಧಾ ಕಪೂರ್‌, ಜಾಕಿಶ್ರಾಫ್, ನೀಲ್‌ ನಿತಿನ್ ಮುಕೇಶ್, ಚುಂಕಿಪಾಂಡೆ, ಪ್ರಕಾಶ್‌ ಬೆಳವಾಡಿ, ಅರುಣ್‌ ವಿಜಯ್‌, ಜಾಕ್ವೆಲಿನ್‌ ಫೆರ್ನಾಂಡಿಸ್‌ ಎಲ್ಲರೂ ನಟಿಸಿದ್ದಾರೆ.

ಆಗಸ್ಟ್‌ 30 ಕ್ಕೆ ಬಿಡುಗಡೆ
ಮೊದಲ ಲೆಕ್ಕಾಚಾರದಂತೆ ಆಗಸ್ಟ್‌ 15 ರಂದು ಈ ಚಿತ್ರ ಸಿನಿಮಾ ಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ಅದೇ ದಿನ ಅಕ್ಷಯ್‌ ಕುಮಾರ್‌ ರ ‘ಮಿಶನ್‌ ಮಂಗಲ್’ ಹಾಗೂ ಜಾನ್‌ ಅಬ್ರಹಾಂರ ‘ಬಾಟ್ಲಾ ಹೌಸ್‌’ ಬಿಡುಗಡೆಯಾಗುತ್ತಿದೆ. ಇದರ ಮಧ್ಯೆ ತಮ್ಮ ಚಿತ್ರ ಬೇಡ ಎಂದು ‘ಸಾಹೋ’ ನಿರ್ಮಾಪಕರು ಆಗಸ್ಟ್‌ 30 ಕ್ಕೆ ದಿನಾಂಕ ನಿಗದಿಪಡಿಸಿದ್ದಾರೆ.

ಪ್ರಭಾಸ್‌ ಅಭಿಮಾನಿಗಳು ಬಾಹುಬಲಿ ಗುಂಗಿನಿಂದ ಹೊರಬಂದು ಈ ಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲ ಎಲ್ಲೆಡೆ ಇದೆ. ಹಾಗೆಯೇ ಪ್ರಭಾಸ್‌ ಮೇಲೆ ನಿರೀಕ್ಷೆಯೂ ಹೆಚ್ಚಾಗಿದೆ.

– ಅಮೃತಾ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.