ಕಾವೇರಿ, ಅಣೆಕಟ್ಟು ಸುರಕ್ಷತೆ ಬಗ್ಗೆ ಚರ್ಚೆ ನಡೆಸಿರುವೆ
Team Udayavani, Aug 12, 2019, 3:06 AM IST
ಮಂಡ್ಯ: “ಮೊದಲ ಬಾರಿಗೆ ಸಂಸತ್ ಅಧಿವೇಶನದಲ್ಲಿ ಭಾಗವಹಿಸಿ ಹಲವಾರು ವಿಷಯಗಳ ಕುರಿತು ಮಾತ ನಾಡಿದ್ದು ಒಂದು ರೋಚಕ ಅನುಭವ. ಅದನ್ನು ಅರಗಿಸಿಕೊಳ್ಳಲು ನನಗೆ ಇನ್ನೂ ಹಲವು ದಿನಗಳು ಬೇಕು’ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆಆರ್ಎಸ್ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಸಂಸತ್ನಲ್ಲಿ ಧ್ವನಿ ಎತ್ತಿದ್ದೇನೆ. ಅಣೆಕಟ್ಟು ಸುರಕ್ಷತೆ ಮಸೂದೆ ವಿಷಯ ಪ್ರಸ್ತಾಪಕ್ಕೆ ಬಂದ ಸಮಯದಲ್ಲಿ ಕೆಆರ್ಎಸ್ ವಿಚಾರವನ್ನು ಮಂಡಿಸಿ ವಾಸ್ತವಾಂಶವನ್ನು ಗಮನಕ್ಕೆ ತಂದಿದ್ದೇನೆ. ಮುಂದೆ ಗಣಿ ಮತ್ತು ಭೂ ವಿಜ್ಞಾನ ಸಚಿವರು ಇದರ ಬಗ್ಗೆ ಗಮನ ಹರಿಸಿ ನಂತರದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಕೆರೆಗಳ ಸಂರಕ್ಷಣೆ, ನೀರು ತುಂಬಿಸುವುದು, ಅದರ ಬಳಕೆ ಎಲ್ಲವೂ ಕೇಂದ್ರದ ಕೈಯ್ಯಲ್ಲೂ ಇಲ್ಲ. ರಾಜ್ಯದ ಕೈಯ್ಯಲ್ಲೂ ಇಲ್ಲ. ಅದೆಲ್ಲವೂ ಪ್ರಾಧಿಕಾರದ ಹಿಡಿತದಲ್ಲಿದೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದೇನೆ. ಮುಂದೆ ನಮಗೂ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್
Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ
Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ
MUST WATCH
ಹೊಸ ಸೇರ್ಪಡೆ
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ