ಆತಂಕ ಬದಿಗೊತ್ತಿ ಬದುಕು ರೂಪಿಸಿ: ಹೆಗ್ಗಡೆ
Team Udayavani, Aug 12, 2019, 3:06 AM IST
ಬೆಳ್ತಂಗಡಿ: ತಾಲೂಕಿನಲ್ಲಿ ಪ್ರಕೃತಿ ವಿಕೋಪದಿಂದ ಭಾರೀ ಪ್ರಮಾಣದಲ್ಲಿ ಅನಾಹುತವಾಗಿದ್ದು, ಅಪಾರ ಕಷ್ಟ-ನಷ್ಟಗಳಾಗಿವೆ. ಆದರೆ, ಸಂತ್ರಸ್ತರು ಆತಂಕ ಪಡಬೇಕಾಗಿಲ್ಲ. ಮಂಜುನಾಥಸ್ವಾಮಿ ನಮ್ಮನ್ನು ರಕ್ಷಿಸಿದ್ದಾನೆ. ಆತಂಕ ಬಂದಾಗ ಆಪತ್ತು ಸಹಜ. ಮುಂದಿನ ಭವಿಷ್ಯ ರೂಪಿಸಲು ಸನ್ನದ್ಧರಾಗಿ ಎಂದು ಧರ್ಮ ಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಂತ್ರಸ್ತರಿಗಾಗಿ ತಾತ್ಕಾಲಿಕ ಕಾಳಜಿ ಕೇಂದ್ರದಲ್ಲಿರುವ ನಿರಾಶ್ರಿತರಿಗೆ ಅಭಯದ ಮಾತುಗಳನ್ನಾಡಿದರು. ಹಗಲು ಹೊತ್ತು ಈ ಅನಾಹುತ ಸಂಭವಿಸಿರುವುದರಿಂದ ಯಾವುದೇ ಜೀವ ಹಾನಿ ಆಗದಿರುವುದು ನೆಮ್ಮದಿ ಕಂಡಿದೆ. ಇಲ್ಲವಾದಲ್ಲಿ ಅದೆಷ್ಟೋ ಜೀವ ಹಾನಿಯಾಗುವ ಲಕ್ಷಣವಿತ್ತು.
ಭೂಮಿ ದೇವ, ವಾಯು ದೇವ, ಅಗ್ನಿದೇವ ಎಂದು ಪ್ರಾರ್ಥಿಸುತ್ತಿರುವ ನಮಗೆ ಭಗವಂತನೇ ರಕ್ಷಕ ಎಂದರು. ಈಗಾಗಲೇ ಕಾಳಜಿ ಕೇಂದ್ರವನ್ನು ರಚಿಸಿ ಸಂತ್ರಸ್ತರಿಗೆ ಊಟೋಪಹಾರ ನೀಡುವಲ್ಲಿ ಸರಕಾರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿವಿಧ ಸಂಘ ಸಂಸ್ಥೆಗಳು ಮುಂದಾಗುತ್ತಿವೆ. ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಹಾಗೂ ಕಾರ್ಯಕರ್ತರು ಪ್ರವಾಹ ಪ್ರದೇಶಗಳ ನಷ್ಟದ ಅಂದಾಜು ಸಂಗ್ರಹಿಸುತ್ತಿವೆ. ಶೀಘ್ರವೇ ಯೋಜನೆಯಿಂದ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್