ವಾಸ್ತವ ಬದುಕಾಗಲಿ


Team Udayavani, Aug 12, 2019, 6:49 AM IST

vastava

ಭೂಮಿಯ ಸಕಲ ಜೀವರಾಶಿಗಳಲ್ಲಿ ಯೋಚಿಸಿ ಕಾರ್ಯರೂಪಿಸುವ ವರ ಮನುಷ್ಯನಿಗೆ ಮಾತ್ರವಂತೆ, ಆದರೆ ಅದರ ಬೆನ್ನಲ್ಲೆ ಚಿಂತೆ ಎಂಬ ಶಾಪವು ಅಂಟಿಕೊಂಡಿದೆ. ಯೋಚನೆ ಮತ್ತು ಚಿಂತೆ ಒಂದೇ ಅನಿಸಿದರು ಅವುಗಳ ಪರಿಣಾಮ ಬೆರೆಯದ್ದೆ ಆಗಿರುತ್ತದೆ. ಇಲ್ಲಿ ಯಾವುದೇ ಒಂದು ಕಾರ್ಯದ ಬಗ್ಗೆ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ಯೋಚನೆ ಎಂದರೆ, ಹಿಂದೆ ಘಟಿಸಿಹೋದ ಯಾವುದೋ ಒಂದು ನೋವು ವಿಫ‌ಲತೆಗಳನ್ನು ಸದಾ ಯೋಚನೆ ಮಾಡಿ ಕೊರಗುವುದನ್ನು ಚಿಂತೆ ಎಂದು ಹೇಳಬಹುದು.

ಯಾವುದೋ ಒಂದು ಮೂಲೆಯಲ್ಲಿ ಚಿಂತಿಸುತ್ತಾ ಕೂರುವುದನ್ನು ಬಿಟ್ಟು ಸುತ್ತಮುತ್ತಲಿನ ಜನರ ನಡುವೆ ಪ್ರಕೃತಿಯ ಸೊಬಗಿನ ಮಧ್ಯೆ ಬೆರೆತು ವಾಸ್ತವದಲ್ಲಿ ಜೀವಿಸಿದಾಗ ಮನಸ್ಸು, ದೇಹ ಎರಡೂ ಆರೋಗ್ಯವಾಗಿರುತ್ತವೆ.ಕಾಲಚಕ್ರದಲ್ಲಿ ಘಟಿಸಿಹೋದ ಘಟನೆಗಳನ್ನು ಪುನಃ ಹೋಗಿ ಸರಿಪಡಿಸಲು ಸಾಧ್ಯವಿಲ್ಲವೆಂದಾಗ ಅದನ್ನು ಚಿಂತಿಸುವುದಕ್ಕಿಂತ ಮುಂದಿನ ಜೀವನವನ್ನು ಯೋಚಿಸುವುದು ಒಳಿತು. ಏಕೆಂದರೆ ಈ ನೋವುಗಳು ಯಾರಿಗೆ ಇಲ್ಲ ಹೇಳಿ. ಕುಚೇಲನಿಂದ ಹಿಡಿದು ಕುಬೇರನವರೆಗೆ ಎಲ್ಲರೂ ಒಂದಲ್ಲ ಒಂದು ಕೊರಗಿನಲ್ಲಿ ಇರುವವರೇ, ಹಾಗೆಂದ ಮಾತ್ರಕ್ಕೆ ಜೀವನವೇ ಮುಗಿದು ಹೋಯಿತು ಎಂದು ಕೂರುವುದರಲ್ಲಿ ಯಾವುದೇ ಅರ್ಥವಿಲ್ಲ.

ಒಬ್ಬ ಬಸ್‌ ಚಾಲಕನನ್ನು ನೋಡಿ ಅವನು ಎಷ್ಟೇ ಚಿಂತೆಗಳಿದ್ದರೂ ವಾಸ್ತವದಲ್ಲೇ ವಾಹನ ಚಲಾಯಿಸುತ್ತಿರುತ್ತಾನೆ. ಏಕೆಂದರೆ ಅವನಿಗೆ ಚಲಿಸಿದ ದಾರಿಗಿಂತ ಮುಂದಿನ ದಾರಿಯಲ್ಲಿ ಯಾವುದೇ ಅನಾಹುತ ಆಗದಂತೆ ಚಲಿಸಿ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸುವುದೇ ಮುಖ್ಯವಾಗಿರುತ್ತದೆ. ನಮ್ಮ ನಿತ್ಯ ಜೀವನವು ಅಷ್ಟೆ ಕಳೆದು ಹೋದ ನೋವುಗಳಲ್ಲಿ ಜೀವನ ನಡೆಸುವುದಕ್ಕಿಂತ ಮುಂಬರುವ ಸನ್ನಿವೇಶಗಳನ್ನು ಎದುರಿಸಲು ಸಿದ್ಧವಾಗಿರಬೇಕು. ಯಾಕೆಂದರೆ ಸಾಧಿಸುವವನಿಗೆ ಆಯಸ್ಸು ತುಂಬಾ ಕಡಿಮೆ. ಮನುಷ್ಯ ಎಷ್ಟು ವರ್ಷ ಬದುಕಿದ ಎನ್ನುವುದಕ್ಕಿಂತ ಏನು ಮಾಡಿದ ಎನ್ನುವುದೇ ಇತಿಹಾಸ ಪುಟದಲ್ಲಿ ದಾಖಲಾಗುತ್ತದೆ. ಆದ್ದರಿಂದ ಸದಾ ಚಿಂತಿಸುವುದನ್ನು ಬಿಟ್ಟು ವಾಸ್ತವದಲ್ಲಿ ಜೀವಿಸಿ.

ಕೊನೆಯದಾಗಿ ಒಂದು ಮಾತು, ಚಿಂತೆ ಮತ್ತು ಚಿತೆಗಳೆರಡರ ಮಧ್ಯೆ ತುಂಬಾ ವ್ಯತ್ಯಾಸವೇನಿಲ್ಲ. ಚಿತೆ ಸತ್ತ ದೇಹವನ್ನು ಸುಟ್ಟರೆ ಚಿಂತೆ ಜೀವ ಇರುವ ಮನುಷ್ಯನನ್ನು ಸುಡುತ್ತದೆ.

– ಮೋಹನ್‌ ಕೋಟ್ಯಾನ್‌ ಪಡ್ಡಂದಡ್ಕ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.