ಮಳೆಗೆ ಶಾಲೆಗಳೂ ಶಿಥಿಲ

50 ಸಾವಿರಕ್ಕೂ ಅಧಿಕ ಕೊಠಡಿಗಳ ಸ್ಥಿತಿ ಶೋಚನೀಯ

Team Udayavani, Aug 12, 2019, 6:17 AM IST

school

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅನಾಹುತಕ್ಕೆ ಮನೆ, ತೋಟ, ಗದ್ದೆಗಳು ಮಾತ್ರವಲ್ಲದೆ ಶಾಲಾ ಕಟ್ಟಡಗಳೂ ನಾಶವಾಗಿವೆ. ಜತೆಗೆ ಜೀರ್ಣಾವಸ್ಥೆಯಲ್ಲಿದ್ದ ಸುಮಾರು 50 ಸಾವಿರಕ್ಕೂ ಅಧಿಕ ಶಾಲಾ ಕೊಠಡಿಗಳು ಇನ್ನಷ್ಟು ಶಿಥಿಲಗೊಂಡಿದ್ದು ವಿದ್ಯಾರ್ಥಿಗಳು, ಪಾಲಕರು, ಹೆತ್ತವರು ಹಾಗೂ ಶಿಕ್ಷಕರಲ್ಲಿ ಇನ್ನಷ್ಟು ಭಯ ಹುಟ್ಟಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಧಾರವಾಡ, ಯಾದಗಿರಿ, ಕೊಪ್ಪಳ, ರಾಯಚೂರು, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಸಹಿತ ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭೀಕರ ಪ್ರಕೃತಿ ವಿಕೋಪ ಸಂಭವಿಸಿದೆ. ಈ ಭೀಕರತೆಗೆ ಸಾವಿರಾರು ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಸಿಲುಕಿಕೊಂಡಿವೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ 2018-19ನೇ ಸಾಲಿನ ಶೈಕ್ಷಣಿಕ ವರದಿಯ ಪ್ರಕಾರ ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 2,08,681 ಕೊಠಡಿಗಳಿದ್ದು, ಅದರಲ್ಲಿ 1,37,392 ಉತ್ತಮ, 27,445 ಸಣ್ಣ ಪ್ರಮಾಣದ ದುರಸ್ತಿ ಹಾಗೂ 43,844 ಕೊಠಡಿಗಳಿಗೆ ದೊಡ್ಡ ಪ್ರಮಾಣದ ದುರಸ್ತಿ ಅಗತ್ಯವಿದೆ. ಪ್ರೌಢಶಾಲಾ ವಿಭಾಗದಲ್ಲಿ ಒಟ್ಟು 23,318 ಕೊಠಡಿಗಳಿದ್ದು, ಅದರಲ್ಲಿ 11,601 ಉತ್ತಮ, 1,727 ಸಣ್ಣ ಪ್ರಮಾಣದ ದುರಸ್ತಿ ಹಾಗೂ 9,990 ಕೊಠಡಿಗಳಿಗೆ ದೊಡ್ಡ ಪ್ರಮಾಣದ ದುರಸ್ತಿ ಅಗತ್ಯವಿದೆ ಎಂದು ಇಲಾಖೆ ಹೇಳಿದೆ.

ಸರಕಾರಿ ಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ, ಸ್ಥಳೀಯ ಸಂಸ್ಥೆಗಳ ಶಾಲೆ ಸಹಿತ ಒಟ್ಟು 3,73,107 ಶಾಲಾ ಕೊಠಡಿಗಳಲ್ಲಿ 2,86,324 ಉತ್ತಮ, 29,578 ಸಣ್ಣ ಪ್ರಮಾಣದ ದುರಸ್ತಿ ಹಾಗೂ 57,205 ಕೊಠಡಿಗಳಿಗೆ ದೊಡ್ಡ ಪ್ರಮಾಣದ ದುರಸ್ತಿ ಆಗಬೇಕಿದೆ. ಹಾಗೆಯೇ ಎಲ್ಲ ಪ್ರೌಢಶಾಲೆಗಳಲ್ಲಿ ಒಟ್ಟು 74,765 ಕೊಠಡಿಗಳಿದ್ದು ಅದರಲ್ಲಿ 48,649 ಉತ್ತಮ, 2,378 ಸಣ್ಣ ಪ್ರಮಾಣದ ದುರಸ್ತಿ ಹಾಗೂ 23,738 ಕೊಠಡಿಗಳಿಗೆ ದೊಡ್ಡ ಪ್ರಮಾಣದ ದುರಸ್ತಿ ಅಗತ್ಯವಿದೆ.

ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಹಲವು ಶಾಲೆಗಳ ಗೋಡೆ ಬಿರುಕುಬಿಟ್ಟಿವೆ. ಅಲ್ಲದೆ ಕೊಠಡಿಯ ಮೇಲ್ಛಾವಣಿ ಅಪಾಯದ ಮಟ್ಟದಲ್ಲಿದೆ. ಶಾಲೆಗಳ ಸ್ಥಿತಿ ಹೇಗಿದೆ ಎಂಬುದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರ ಮಟ್ಟದಲ್ಲಿ ಸಮೀಕ್ಷೆ ಆರಂಭಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶದ ಶಾಲಾ, ಕಾಲೇಜುಗಳ ಕೊಠಡಿ, ಕಟ್ಟಡ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಕುಳಿತುಕೊಳ್ಳಲು ಯೋಗ್ಯವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಪ್ರವಾಹದಿಂದ ಸಾಕಷ್ಟು ಶಾಲೆಗಳಿಗೆ ಹಾನಿಯಾಗಿದೆ. ಇದರ ವರದಿ ಪಡೆಯುತ್ತಿದ್ದೇವೆ. ದುರಸ್ತಿ ಕಾಮಗಾರಿಗಾಗಿ ಸರಕಾರದಿಂದ ಅನುದಾನ ಹೆಚ್ಚು ಕೇಳಲಿದ್ದೇವೆ. ವಿದ್ಯಾರ್ಥಿಗಳಿಗೆ ಯಾವುದೇ ಅಪಾಯ ಆಗದಂತೆ ಎಚ್ಚರ ವಹಿಸಿದ್ದೇವೆ. ಭೀಕರ ಪ್ರವಾಹ ಇರುವ ಜಿಲ್ಲೆಗಳಲ್ಲಿ ಅಧಿಕಾರಿಗಳು ಪರಿಶೀಲಿಸಿ, ಖಚಿತತೆ ನೀಡಿದ ಅನಂತರವೇ ಶೈಕ್ಷಣಿಕ ಚಟುವಟಿಕೆ ಆರಂಭವಾಗಲಿದೆ.

-ಉಮಾಶಂಕರ್‌, ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.