ಆನೆಶಂಕರ ದೇಗುಲಕ್ಕೆ ಬೇಕಿದೆ ಕಾಯಕಲ್ಪ

ಕ್ರಿ.ಶ. 1528ರಲ್ಲಿ ನಿರ್ಮಿಸಿದ ದೇವಸ್ಥಾನ • ಪುರಾತನ ಬಾವಿಗೆ ಬೇಕು ಪುನರುಜ್ಜೀವನ

Team Udayavani, Aug 12, 2019, 10:47 AM IST

12-Agust-7

ಸಿಂಧನೂರು: ಸಾಲಗುಂದಾದಲ್ಲಿ ಐತಿಹಾಸಿಕ ಪ್ರಸಿದ್ಧಿ ಹೊಂದಿದ ಆನೆಶಂಕರ ದೇವಸ್ಥಾನ.

ಚಂದ್ರಶೇಖರ ಯರದಿಹಾಳ
ಸಿಂಧನೂರು:
ತಾಲೂಕಿನ ಸಾಲಗುಂದಾ ಗ್ರಾಮದ ಚಿಕ್ಕಗುಡ್ಡದಲ್ಲಿರುವ ಐತಿಹಾಸಿಕ ಆನೆಶಂಕರ ದೇವಸ್ಥಾನಕ್ಕೆ ಪಾಳು ಬಿದ್ದಿದ್ದು ಕಾಯಕಲ್ಪ ನೀಡುವ ಕೆಲಸವಾಗಬೇಕಿದೆ.

ಆನೆಶಂಕರ ದೇವಸ್ಥಾನ ಐತಿಹಾಸಿಕ ಪ್ರಸಿದ್ಧಿ ಹೊಂದಿದೆ. ಇದನ್ನು ಕ್ರಿ.ಶ.1528ರಲ್ಲಿ ಇಟ್ಟಂಗಿ, ಗಚ್ಚು, ಬೆಣಚು ಕಲ್ಲುಗಳಿಂದ ನಿರ್ಮಿಸಲಾಗಿದೆ. ದಶಕಗಳ ಹಿಂದೆ ಉತ್ತಮ ಸ್ಥಿತಿಯಲ್ಲಿದ್ದ ಕಟ್ಟಡವು ಕಳೆದ ಕೆಲವು ವರ್ಷಗಳಿಂದ ಪಾಳು ಬಿದ್ದಿದೆ. ಬಾವಿ ಕುಸಿಯತೊಡಗಿದೆ. ಪ್ರಾಚ್ಯವಸ್ತು ಇಲಾಖೆಯವರೂ ಸಹ ಇದರಕಡೆಗೆ ಗಮನ ಹರಿಸುತ್ತಿಲ್ಲ. ಗ್ರಾಮದ ಜನರು ಹಾಗೂ ತಾಲೂಕಿನ ಜನಪ್ರತಿನಿಧಿಗಳು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ.

ಕಡಿದಾದ ಹೆಬ್ಬಂಡೆಯ ಮೇಲೆ ದೇವಸ್ಥಾನ ನಿರ್ಮಿಸಲಾಗಿದೆ. ವಿಜಯನಗರದ ಕೃಷ್ಣದೇವರಾಯ ಆಡಳಿತದಲ್ಲಿ ಅಬ್ಬರಾವು ಎನ್ನುವವರು ಮಾವನವರಾದ ಅಯ್ಯನಿಗೆ ಪುಣ್ಯ ಸಂಚಯವಾಗಲಿ ಎಂದು ಪ್ರಾರ್ಥಿಸಿ ನಿರ್ಮಿಸಿದ ದೇವಸ್ಥಾನ ಇದಾಗಿದೆ ಎಂದು ಗ್ರಾಮದ ಹಿರಿಯರು ಹೇಳುತ್ತಾರೆ. ಯಾವುದೇ ವ್ಯವಸ್ಥೆಗೆ ಒಳಪಡದ ದೇವಸ್ಥಾನವು ತಿರುಮಲ ವೆಂಕಟೇಶ್ವರ ದೇವಾಲಯವಾಗಿತ್ತು. ನಂತರದಲ್ಲಿ ಆನೆಶಂಕರ ದೇವಾಲಯವಾಗಿದ್ದು ಲಿಂಗ ಪ್ರತಿಷ್ಠಾಪಿಸಲಾಗಿದೆ.

ಮುಕ್ಕುಂದ ನದಿ ತೀರದ ಪಾಪನಾಶೇಶ್ವರ ದೇವಾಲಯದಂತೆ ಇದು ಕೂಡ ಸಣ್ಣಪೆಟ್ಟಿಗೆಯಂತೆ ಇದೆ. ಸರಳವಾಗಿ ನಿರ್ಮಿಸಿದ ದೇವಾಲಯಕ್ಕೆ ಗರ್ಭಗೃಹ ತೊರೆದ ಸುಕನಾಶಿ, ನವರಂಗಗಳಿಗೆ ನಾಲ್ಕು ಚಪ್ಪಟೆಯಾದ ಕಂಬಗಳನ್ನು ಬಳಸಲಾಗಿದೆ. ಇದರ ಸುತ್ತಲೂ ಸುಂದರವಾದ ಗೋಡೆ, ಕಂಬಗಳಿವೆ. ಗೋಪುರವಿಲ್ಲದ ದೇವಾಲಯ ಚೌಕಾಕಾರದ ಕಂಬಗಳ ರಚನೆ ಇದೆ.

ಪುರಾತನ ಬಾವಿ: ನೀಲಕಂಠೇಶ್ವರ ದೇವಸ್ಥಾನ ಮುಂಭಾಗದಲ್ಲಿರುವ ಬಹಳ ವರ್ಷದ ಹಿಂದಿನ ಕಾಲದಿಂದಿರುವ ಜಕ್ಕಮ್ಮನ ಬಾವಿ ಕೂಡ ಐತಿಹಾಸಿಕ ಪ್ರಸಿದ್ದಿ ಹೊಂದಿದೆ. ಎಂತಹ ಬರಗಾಲ ಬಂದರೂ ಬಾವಿಯಲ್ಲಿ ಸದಾ ನೀರು ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಬಾವಿ ಜೀರ್ಣೋದ್ಧಾರ ಕಾರ್ಯವಾಗಿದ್ದು, ಕಾಂಪೌಂಡ್‌ ಕಾಮಗಾರಿ ಅರ್ಧಕ್ಕೆ ನಿಂತಿದೆ. ಬಾವಿಯ ನೀರಿನಿಂದಲೇ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ನಡೆಯುತ್ತಿದ್ದವು. ಇಂತಹ ಇತಿಹಾಸ ಹೊಂದಿದ ದೇವಸ್ಥಾನದ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಮತ್ತು ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.