ತಗ್ಗಿದ ಮಳೆ; ಹೆಚ್ಚಿದ ಭೂಗುಡ್ಡ ಕುಸಿತ!

ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ •ಜಲಾವೃತಗೊಂಡ ಗ್ರಾಮಗಳ ಜನರ ರಕ್ಷಣೆಗೆ ಮುಂದಾದ ಯೋಧರು

Team Udayavani, Aug 12, 2019, 11:25 AM IST

12-Agust-13

ಕೊಪ್ಪ: ಮರಿತೊಟ್ಟಲು ಗ್ರಾಪಂ ವ್ಯಾಪ್ತಿಯಲ್ಲಿ ಕೆರೆಯ ದಂಡೆ ಒಡೆದು ಹಾನಿಯಾದ ಪ್ರದೇಶಕ್ಕೆ ಮಾಜಿ ಸಚಿವ ಜೀವರಾಜ್‌ ಭೇಟಿ ನೀಡಿ ಪರಿಶೀಲಿಸಿದರು.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಳೆದ 1 ವಾರದಿಂದ ಎಡಬಿಡದೆ ಸುರಿಯುತ್ತಿದ್ದ ಮಳೆ ಭಾನುವಾರ ಸ್ವಲ್ಪ ಬಿಡುವು ನೀಡಿದೆ. ಮೂಡಿಗೆರೆ, ಕೊಪ್ಪ, ನರಸಿಂಹರಾಜಪುರ ಹಾಗೂ ಶೃಂಗೇರಿ ತಾಲೂಕುಗಳಲ್ಲಿ ಬೆಳಗಿನಿಂದ ಆಗಾಗ ಮಳೆಯಾಗುತ್ತಿತ್ತು. ಮಳೆ ನಿಂತರೂ ಸಹ ಹಾನಿ ಇನ್ನೂ ಮುಂದುವರಿದಿದೆ. ಭಾನುವಾರವೂ ಜಿಲ್ಲೆಯ ಕೆಲವೆಡೆಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ವರದಿಯಾಗಿವೆ.

ಮೂಡಿಗೆರೆ ತಾಲೂಕು ಕಳಸ ಸಮೀಪದ ಕಲ್ಮಕ್ಕಿ ಹಾಗೂ ಕುಕ್ಕೋಡು ಗ್ರಾಮದಲ್ಲಿ ಗುಡ್ಡ ಕುಸಿದಿದೆ. ಚಿಕ್ಕಮಗಳೂರು ತಾಲೂಕಿನ ಸಿರಿವಾಸೆ ಸಮೀಪದ ಅಡಲುಗದ್ದೆ ಗ್ರಾಮದಲ್ಲಿ ಗುಡ್ಡವು ಮನೆ ಹಾಗೂ ಕಾಫಿ ತೋಟದ ಮೇಲೆ ಬಿದ್ದಿದೆ. ನಿತೀಶ್‌ ಹಾಗೂ ನಂದೀಶ್‌ ಎಂಬುವವರ ಮನೆಯ ಮೇಲೆ ಗುಡ್ಡ ಕುಸಿದಿದೆ. ಗುಡ್ಡ ಕುಸಿದರೂ ಅದೃಷ್ಟವಶಾತ್‌ ಕುಟುಂಬದವರಿಗೆ ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ. ಗುಡ್ಡ ಕುಸಿತದಿಂದಾಗಿ ಸಿರಿವಾಸೆ ಅಡಲುಗದ್ದೆ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ. ಗುಡ್ಡ ಕುಸಿದು ಮಣ್ಣು ಕಾಫಿ ತೋಟಕ್ಕೆ ಬಿದ್ದಿದೆ. ಗುಡ್ಡ ಕುಸಿತದಿಂದಾಗಿ 4 ಎಕರೆಗೂ ಹೆಚ್ಚು ತೋಟ ಕೊಚ್ಚಿ ಹೋಗಿದೆ. ಗುಡ್ಡ ಕುಸಿತದಿಂದಾಗಿ ಭಯಗೊಂಡಿರುವ ಅಡಲುಗದ್ದೆ ಗ್ರಾಮಸ್ಥರು ಗ್ರಾಮವನ್ನು ತೊರೆದಿದ್ದಾರೆ. ಅಡಲುಗದ್ದೆ ಗ್ರಾಮಸ್ಥರಿಗಾಗಿ ಜಿಲ್ಲಾಡಳಿತವು ಸಿರಿವಾಸೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಿರಾಶ್ರಿತರ ಕೇಂದ್ರ ತೆರೆದಿದ್ದು, ಗ್ರಾಮಸ್ಥರು ಅಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಕಳಸ ಸಮೀಪದ ಜಕ್ಕಣ್ಣ ಗ್ರಾಮದಲ್ಲಿ 100ಕ್ಕೂ ಹೆಚ್ಚು ಗ್ರಾಮಸ್ಥರು ಇದ್ದಾರೆ. ಸತತ ಮಳೆಯಿಂದಾಗಿ ಭದ್ರಾ ನದಿಯ ನೀರು ಉಕ್ಕಿ ಹರಿಯುತ್ತಿದ್ದು, ಇಡೀ ಗ್ರಾಮವನ್ನು ನದಿಯ ನೀರು ಆವರಿಸಿದೆ. ಸದ್ಯಕ್ಕೆ ಗ್ರಾಮಸ್ಥರುಗಳಿಗೆ ಕಾಫಿ ಎಸ್ಟೇಟ್ ಒಂದರ ಮಾಲೀಕ ವಿಜಯೇಂದ್ರ ಆಶ್ರಯ ನೀಡಿದ್ದಾರೆ. ಕೂಡಲೆ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವಂತೆ ಗ್ರಾಮಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸುತ್ತಿದ್ದಾರೆ.

ಮೂಡಿಗೆರೆ ತಾಲೂಕಿನ ಆಲೆಖಾನ್‌ ಹೊರಟ್ಟಿ ಗ್ರಾಮದಲ್ಲಿ ಸಿಲುಕಿದ್ದ 76 ಜನರನ್ನು ಯೋಧರ ತಂಡ ಭಾನುವಾರ ರಕ್ಷಿಸಿದೆಯಾದರೂ ಇನ್ನೂ ನೂರಾರು ಜನ ಬೇರೆ ಬೇರೆ ಗ್ರಾಮಗಳಲ್ಲಿ ನಡಗದ್ದೆಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸಲು ಈವರೆಗೂ ಸಾಧ್ಯವಾಗಿಲ್ಲ. ತಾಲೂಕಿನ ಹಿರೇಬೈಲು, ಇಡಕಣಿ ಹಾಗೂ ದುರ್ಗದಹಳ್ಳಿ ಗ್ರಾಮಗಳಲ್ಲಿ ನಡುಗದ್ದೆಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಜಿಲ್ಲಾಡಳಿತವು ಹೆಲಿಕಾಪ್ಟರ್‌ನ್ನು ಕರೆಸಿತ್ತು. ಭಾನುವಾರ ಬೆಳಗ್ಗೆ ಈ ಪ್ರದೇಶಗಳಿಗೆ ತೆರಳಿದ ಹೆಲಿಕಾಪ್ಟರ್‌ ಹವಾಮಾನ ವೈಪರೀತ್ಯದಿಂದಾಗಿ ಇಳಿಸಲು ಸಾಧ್ಯವಾಗದೆ ವಾಪಸ್ಸಾಗಿದೆ. ಈ ಗ್ರಾಮಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಇನ್ನೂ ಸಾಧ್ಯವಾಗಿಲ್ಲ. ಉಳಿದಂತೆ ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳಲ್ಲಿ ತುಂಗಾ, ಭದ್ರಾ ನದಿಗಳ ನೀರು ಇನ್ನೂ ಉಕ್ಕಿ ಹರಿಯುತ್ತಿದೆ. ಈಗಲೂ ಸಹ ಮಲೆನಾಡು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.