ಪ್ರವಾಹ ಬಂದ್‌ ಬೆಳೆ ಹಾಳಾಗ್‌ ಹೋಯ್ತ

ಗದ್ದೆಗಳಲ್ಲಿಯನ ಬೆಳೆಗಳು ಸಂಪೂರ್ಣ ಜಲಾವೃತ •ಕುಡಿವ ನೀರಿಗೂ ಜನರ ಪರದಾಟ

Team Udayavani, Aug 12, 2019, 12:45 PM IST

12-Agust-24

ರಾಮದುರ್ಗ: ಮಲಪ್ರಭಾ ನದಿ ಪ್ರವಾಹದಿಂದಾಗಿ ನದಿ ಪಾತ್ರದ ಗ್ರಾಮಗಳಲ್ಲಿನ ಬೆಳೆ ಸಂಪೂರ್ಣ ನೀರಿನಲ್ಲಿ ಮುಳುಗಿದೆ.

ರಾಮದುರ್ಗ: ಹೊಲ್ದಾಗ ಇನ್ನೇನೈತಿ ಅಂತ ಜೀವನ ಮಾಡುದುರ್ರಿ ಸಾಕಷ್ಟ ಸಾಲ ಸೂಲಮಾಡಿ ಕಿಮ್ಮತ್ತಿನ ಬೀಜ ತಂದ ಹಾಕಿದ್ವಿ ಏನೋ ಸ್ವಲ್ಪ ಮಳೆಯಾದ ಮ್ಯಾಲ ಏನೋ ಬೆಳೆ ಬರತೈತಿ ಅಂತ ಮಾಡಿದ್ವಿ, ಈಗ ಸಿಕ್ಕಾಪಟ್ಟಿ ನೀರ ಬಂದ್‌ ಬೆಳೆ ಹಾಳಾಗಿ ಹೋಗೈತಿ ಕೈಗೆ ಬಂದ ತುತ್ತ ಬಾಯಿಗೆ ಬರದಂಗಾಗೈತಿ ಎಂಬುದು ಪ್ರವಾಹದಿಂದ ಫಸಲು ಕಳೆದುಕೊಂಡವರ ಗೋಳಿದು.

ತಾಲೂಕಿನಲ್ಲಿ ಎಷ್ಟೋ ವರ್ಷಗಳಿಂದ ಸಮರ್ಪಕ ಮಳೆಯಾಗದೆ ಸಾಕಷ್ಟು ರೈತರು ಸಂಕಷ್ಟು ಅನುಭವಿಸುತ್ತಿರುವ ಸಮಯದಲ್ಲಿಯೇ, ಇತ್ತೀಚೆಗೆ ಸುರಿದ ಅಲ್ಪಸ್ವಲ್ಪ ಮಳೆ ನಂಬಿಕೊಂಡು ನದಿಯ ಪಕ್ಕದ ರೈತರು ಸಾಲಸೂಲ ಮಾಡಿ ಬೀಜವನ್ನು ಹಾಕಿ ಬೆಳೆದ ಬೆಳೆ ಇಂದು ಮಲಪ್ರಭೆ ಪ್ರವಾಹಕ್ಕೆ ಸಿಕ್ಕಿಕೊಂಡು ರೈತರ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಒಂದೆಡೆ ಪ್ರವಾಹದ ಕೂಪಕ್ಕೆ ತುತ್ತಾಗಿ ಹೊಲ ಗದ್ದೆಗಳಲ್ಲಿಯ ಬೆಳೆಗಳು ಸಂಪೂರ್ಣ ಹಾಳಾಗಿ ಹೊಗಿವೆ. ಆದರೆ ಇನ್ನೊಳಿದ ಕೆಲ ಭಾಗದಲ್ಲಿ ಮಳೆಯಾಗದೆ ಭೂಮಿಯಲ್ಲಾ ಬರಡಾಗಿ ರೈತರು ದನಕರುಗಳಿಗೆ ಮೇವಿಗಾಗಿ ಪರಿತಪಿಸಿದರೆ ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ.

ಮುಖ್ಯವಾಗಿ ಈಗಿನ ಪರಸ್ಥಿತಿಯಲ್ಲಿ ನೆರೆ ಪೀಡಿತ ಪ್ರದೇಶಗಳಲ್ಲಿ ಜನ ಜೀವನ ಸಾಗಿಸುವುದು ತುಂಬಾ ದುಸ್ಥರವಾಗಿದೆ. ಎಷ್ಟೊ ಜನರು ನಿತ್ಯದ ಬದುಕಿಗಾಗಿ ಕೃಷಿ ಕೂಲಿಯನ್ನು ನಂಬಿಕೊಂಡಿದ್ದು. ಈಗ ಅದೆಲ್ಲಾ ವ್ಯರ್ಥವಾಗಿ ಹೊಟ್ಟೆಯ ಮೇಲೆ ತಣ್ಣಿರಿನ ಬಟ್ಟೆ ಹಾಕಿಕೊಳ್ಳುವಂತ ಪರಿಸ್ಥಿತಿ ಬಂದೊದಗಿದೆ.

ಈ ಮೊದಲು ಅಲ್ಪ ಸ್ವಲ್ಪ ಮುಂಗಾರು ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಸಂತಸಗೊಂಡ ರೈತರು ಸಾವಿರಾರು ಹಣ ಖರ್ಚು ಮಾಡಿ ಭೂಮಿಗೆ ಕಾಳು ಊರಿ ಶ್ರಮಪಟ್ಟು ಹುಲುಸಾಗಿ ಬೆಳೆಸಿದ್ದ. ಕೈಗೆ ಬಂದಿದ್ದ ಬೆಳೆಗಳೆಲ್ಲವೂ ಇಂದು ಪ್ರವಾಹದ ಕೂಪಕ್ಕೆ ಸಿಲುಕಿ ನಾಶಹೊಂದಿ ರೈತರು ದಿಕ್ಕು ತೊಚದೆ ಕಂಗಾಲಾಗಿದ್ದಾರೆ.

ಈ ಹಿಂದೆ ನದಿಗೆ ನೀರು ಬಿಡಿ ನಮಗೆ ಕುಡಿಲಿಕ್ಕೂ ನೀರಿಲ್ಲಾ ಎಂದು ಗೊಗೆರೆದರು ಅಧಿಕಾರಿಗಳು ಹನಿ ನೀರು ಬಿಡಲಿಲ್ಲ. ಆದರೆ ಈಗ ಏಕಾಏಕಿ ನೀರು ಬಿಟ್ಟು ನಮ್ಮ ಜೀವನದೊಂದಿಗೆ ಚಲ್ಲಾಟ ಮಾಡುತ್ತಿದ್ದಾರೆ ಎಂದು ನೊಂದ ರೈತರು ದೂರುತ್ತಾರೆ. ಇನ್ನೂ ಪ್ರವಾಹ ಕಡಿಮೆಯಾಗುವ ಲಕ್ಷಣ ಕಾಣದ ಕಾರಣ ಹೊಲಗದ್ದೆಗಳಲ್ಲಿನ ನೀರಿನಿಂದ ಬೆಳೆಯಲ್ಲಾ ನಾಶವಾಗಿದೆ

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.