ಸಂತ್ರಸ್ತರ ನೆರವಿಗೆ ಬನ್ನಿ
ಗವಿಶ್ರೀಗಳಿಂದ ನಿಧಿ ಸಂಗ್ರಹ•ನೊಂದವರಿಗೆ ಧೈರ್ಯ ತುಂಬಿ•ನೆರವಿಗೆ ಮುಂದಾಗಿ
Team Udayavani, Aug 12, 2019, 1:31 PM IST
ಕೊಪ್ಪಳ: ನೆರವು ಸಂಗ್ರಹ ಕಾರ್ಯಕ್ಕೆ ಶ್ರೀ ಗವಿಸಿದ್ದೇಶ್ವರ ಮಹಾ ಸ್ವಾಮಿಗಳು ಚಾಲನೆ ನೀಡಿದರು.
ಕೊಪ್ಪಳ: ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿದ ಮಳೆಯಿಂದಾಗಿ ಲಕ್ಷಾಂತರ ಜನರು ಸಂತ್ರಸ್ರರಾಗಿದ್ದಾರೆ. ಅವರೆಲ್ಲರೂ ನಮ್ಮವರೇ, ಅವರಿಗೆ ನಾವೇ ನೆರವಿನ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಮನವಿ ಮಾಡಿದರು.
ಭಾರತೀಯ ರೆಡ್ಕ್ರಾಸ್ ಜಿಲ್ಲಾ ಶಾಖೆ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಭಾಗ್ಯನಗರದಲ್ಲಿ ನೆರವು ಸಂಗ್ರಹ ಕಾರ್ಯಕ್ರಮಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾರಾಷ್ಟ್ರ ಸೇರಿದಂತೆ ಕರಾವಳಿ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯ ಆರ್ಭಟಕ್ಕೆ ಜನ ಜೀವನ ತತ್ತರಿಸಿದೆ. ಮಳೆಯಿಂದ ಹಲವು ಮನೆಗಳು ಹಾನಿಯಾಗಿವೆ. ಇನ್ನೂ ನದಿಯ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೀಗಾಗಿ ಸರ್ಕಾರ ಅವರಿಗೆ ನಿರಾಶ್ರಿತ ಕೇಂದ್ರಗಳನ್ನು ಆರಂಭಿಸಿ ತಾತ್ಕಾಲಿಕ ನೆರವು ನೀಡುತ್ತಿದೆ. ಮಳೆಯ ಅಬ್ಬರಕ್ಕೆ ತತ್ತರಿಸಿದವರು ನಮ್ಮೊವರೇ ಆಗಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಅವರಿಗೆ ಸಹಾಯ, ಸಹಕಾರ ನೀಡಬೇಕಾಗಿದೆ. ಸರ್ಕಾರವೂ ಈಗಾಗಲೇ ನೆರವಿಗೆ ಮನವಿ ಮಾಡಿದೆ. ನಾವೂ ಕೈಲಾದಷ್ಟು ನೆರವು ನೀಡೋಣ ಎಂದರು.
ಈಗಾಗಲೇ ಜಿಲ್ಲೆಯ ಜನರು ವಿವಿಧ ಹಂತದಲ್ಲಿ ನೆರವು ಸಂಗ್ರಹ ಮಾಡಿ ನೆರೆ ಸಂತ್ರಸ್ತರು ನೆಲೆಸಿದ ಸ್ಥಳಕ್ಕೆ ಸಾಮಗ್ರಿ ತೆಗೆದುಕೊಂಡು ಹೋಗಿ ತಲುಪಿಸುತ್ತಿದ್ದಾರೆ. ಇನ್ನೂ ಕೆಲವರು ಜಿಲ್ಲಾಡಳಿತಕ್ಕೆ ತಂದು ಕೊಡುತ್ತಿದ್ದಾರೆ. ಜಿಲ್ಲಾಡಳಿತ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಎಲ್ಲರೂ ಸಹಕಾರ ನೀಡಿ ಅವರೊಟ್ಟಿಗೆ ನಾವಿರುವ ಕುರಿತು ಧೈರ್ಯ ಹೇಳ್ಳೋಣ ಎಂದರು.
ಗವಿಸಿದ್ದೇಶ್ವರ ಮಹಾ ಸ್ವಾಮಿಗಳು ನೆರೆ ಸಂತ್ರಸ್ತರಿಗೆ ನೆರವು ಸಂಗ್ರಹಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಜನರು ನೆರವು ನೀಡುವಂತೆ ಮನವಿ ಮಾಡಿದರು. ಭಾಗ್ಯನಗರದ ರಸ್ತೆಯುದ್ಧಕ್ಕೂ ಸಂಚಾರ ನಡೆಸಿ ಅಂಗಡಿ, ಮುಂಗಟ್ಟಿನ ಸ್ಥಳದಲ್ಲಿ ನೆರವು ಸಂಗ್ರಹಿಸಿದರು. ಈ ವೇಳೆ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರೇ ದೇಣಿಗೆ ಪೆಟ್ಟಿಗೆ ಹಿಡಿದು ಅಂಗಡಿಗಳಿಗೆ ತೆರಳಿ ನೆರವು ಕೇಳಿ ಜನರಿಂದ ಹಣ ಸೇರಿದಂತೆ ಇತರೆ ಸಾಮಗ್ರಿ ಪಡೆದರು. ಇನ್ನೂ ಕೆಲವು ವಿದ್ಯಾರ್ಥಿಗಳು ಇದಕ್ಕೆ ಕೈ ಜೋಡಿಸಿ ಅವರೊಟ್ಟಿಗೆ ಹೆಜ್ಜೆ ಹಾಕಿದರು. ಅಲ್ಲದೇ, ತಮ್ಮ ಮನೆಯಲ್ಲಿ ನಿತ್ಯವೂ ಸಂಗ್ರಹಿಸಿಟ್ಟಿದ್ದ ಹಣವನ್ನು ವಿದ್ಯಾರ್ಥಿನಿ ಶ್ರೀಗಳಿಗೆ ತಂದು ಕೊಟ್ಟಿದ್ದು ಎಲ್ಲರ ಗಮನ ಸೆಳೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ