ತಂದೆಯ ಸಾವು, ಕಾಮಿಡಿ ಹಿಂದಿನ ಗಣೇಶ್‌ ನೋವು

ಕಲಾವಿದನ ಕಷ್ಟ ಗೊತ್ತಾಗಿದ್ದು ಆಗಲೇ...

Team Udayavani, Aug 13, 2019, 3:05 AM IST

Ganesh

“ಒಬ್ಬ ಕಲಾವಿದನಿಗೆ ಆ್ಯಕ್ಟ್ ಮಾಡೋದು ಎಷ್ಟು ಕಷ್ಟ ಅಂತ ಗೊತ್ತಾಗಿದ್ದು, ಆವಾಗಲೇ…’ ಹೀಗೆ ಹೇಳುತ್ತಾ ಒಂದು ನಿಟ್ಟುಸಿರು ಬಿಟ್ಟರು ನಟ ಗಣೇಶ್‌. ಇಂಥದ್ದೊದು ಮಾತಿಗೆ ಕಾರಣವಾಗಿದ್ದು, ಗಣೇಶ್‌ ಅಭಿನಯಿಸುತ್ತಿರುವ “ಗಿಮಿಕ್‌’ ಚಿತ್ರ. ಅಂದಹಾಗೆ, ಈ ವಾರ ಗಣೇಶ್‌ ಅಭಿನಯದ “ಗಿಮಿಕ್‌’ ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿನ ಕಾಮಿಡಿ ಸನ್ನಿವೇಶದ ಹಿಂದಿನ ನೋವಿನ ಸಂಗತಿಗಳನ್ನು ಭಾವುಕರಾಗಿ ತೆರೆದಿಟ್ಟರು.

ಕಳೆದ ವರ್ಷ ಆಗಸ್ಟ್‌ 27ರಂದು ದೊಡ್ಡಬಳ್ಳಾಪುರದ ಹತ್ತಿರ ಮನೆಯೊಂದರಲ್ಲಿ “ಗಿಮಿಕ್‌’ ಚಿತ್ರದ ಚಿತ್ರೀಕರಣ ನಡೆಯುತ್ತಿರುತ್ತದೆ. ಇದೇ ದಿನ ಮಧ್ಯಾಹ್ನದ ಸುಮಾರಿಗೆ ಗಣೇಶ್‌ ಅವರಿಗೆ ಅವರ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರ ಬಗ್ಗೆ ಫೋನ್‌ ಬರುತ್ತದೆ. ಆದರೆ ಸೆಟ್‌ನಲ್ಲಿ ಅನೇಕ ಕಲಾವಿದರು, ತಂತ್ರಜ್ಞರು ಇದ್ದು, ಚಿತ್ರದಲ್ಲಿ ಬರುವ ಪ್ರಮುಖ ಭಾಗವೊಂದರ ಚಿತ್ರೀಕರಣ ನಡೆಯುತ್ತಿದ್ದರಿಂದ, ಇದ್ದಕ್ಕಿದ್ದಂತೆ ಶೂಟಿಂಗ್‌ ಬಿಟ್ಟು ಹೊರಟರೆ ಇಡೀ ಚಿತ್ರೀಕರಣ ನಿಲ್ಲಿಸಬೇಕಾಗುತ್ತದೆ.

ಅಲ್ಲದೆ ಇಡೀ ಚಿತ್ರತಂಡಕ್ಕೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಗಣೇಶ್‌ ಚಿತ್ರೀಕರಣ ಮುಂದುವರೆಸುತ್ತಾರೆ. ಬಳಿಕ ಮಧ್ಯಾಹ್ನ ಸುಮಾರು 3.30ರ ಹೊತ್ತಿಗೆ ಗಣೇಶ್‌ ತಂದೆ ನಿಧನರಾದ ಸುದ್ದಿ ಮೊದಲು ನಟ ರವಿಶಂಕರ್‌ ಅವರಿಗೆ ತಿಳಿಯುತ್ತದೆ. ಬಳಿಕ ಗಣೇಶ್‌ ಅವರಿಗೂ ಗೊತ್ತಾಗುತ್ತದೆ. ಆದರೆ ಈ ವಿಷಯವನ್ನು ನಿರ್ಮಾಪಕರಿಗೆ ತಿಳಿಸಿದ ಗಣೇಶ್‌, ನಿರ್ದೇಶಕರು ಸೇರಿದಂತೆ ಬೇರೆ ಯಾರಿಗೂ ಈ ವಿಷಯ ತಿಳಿಸದೆ ಚಿತ್ರೀಕರಣ ಮುಂದುವರೆಸುವಂತೆ ಹೇಳುತ್ತಾರೆ.

ಅದರಂತೆ ಸಂಜೆಯವರೆಗೆ ಚಿತ್ರೀಕರಣ ಪೂರ್ಣಗೊಂಡು, ಚಿತ್ರತಂಡ ಪ್ಯಾಕಪ್‌ ಹೇಳಿದ ಬಳಿಕ ಗಣೇಶ್‌ ತಮ್ಮ ತಂದೆಯ ಅಂತಿಮ ದರ್ಶನಕ್ಕೆ ತೆರಳುತ್ತಾರೆ. ಚಿತ್ರತಂಡವೂ ಸೇರಿದಂತೆ ಬಹುತೇಕರಿಗೆ ಗೊತ್ತಿರದ “ಗಿಮಿಕ್‌’ ಹಿಂದಿನ ನೋವಿನ ಸನ್ನಿವೇಶವನ್ನು ಮೊದಲು ತೆರೆದಿಟ್ಟವರು ನಿರ್ದೇಶಕ ನಾಗಣ್ಣ. ಈ ಬಗ್ಗೆ ಮಾತಿಗಿಳಿದ ಗಣೇಶ್‌, “ಅಂದು ನಾವು “ಗಿಮಿಕ್‌’ ಚಿತ್ರದಲ್ಲಿ ಬರುವ ಶ್ರೀಮಂತ ಮನೆಯ ಹೆಣ್ಣನ್ನು ಕೇಳಲು ಹೋಗುವ ಸಂದರ್ಭ ಅದು.

ಚಿತ್ರದ ತುಂಬಾ ಪ್ರಮುಖ ದೃಶ್ಯ ಅದು. ಚಿತ್ರದಲ್ಲಿ ಪ್ರೇಕ್ಷಕರಿಗೆ ತುಂಬಾ ನಗುತರಿಸುವ ಕಾಮಿಡಿ ಸೀನ್‌, ಕಾಮಿಡಿ ಡೈಲಾಗ್‌ ಅಲ್ಲಿದೆ. ಅದಕ್ಕಾಗಿ ಚಿತ್ರದ ಅನೇಕ ಕಲಾವಿದರ ಡೇಟ್ಸ್‌ ಹೊಂದಾಣಿಕೆ ಮಾಡಿಕೊಂಡು ಶೂಟಿಂಗ್‌ ಮಾಡಲಾಗುತ್ತಿತ್ತು. ಅನೇಕ ದೊಡ್ಡ ದೊಡ್ಡ ಕಲಾವಿದರು ಅಲ್ಲಿದ್ದರು. ಅಂದು ನಾನೇನಾದ್ರೂ ಶೂಟಿಂಗ್‌ ನಿಲ್ಲಿಸಿ ಹೊರಟಿದ್ದರೆ, ಮತ್ತೆ ಎಲ್ಲರ ಡೇಟ್ಸ್‌ ಹೊಂದಾಣಿಕೆ ಮಾಡಿಕೊಂಡು ಶೂಟಿಂಗ್‌ ಮಾಡೋದು ಎಲ್ಲರಿಗೂ ಕಷ್ಟವಾಗುತ್ತಿತ್ತು.

ಒಂದು ವೇಳೆ ಆ ಸೀನ್‌ ಶೂಟಿಂಗ್‌ ಮಿಸ್‌ ಆದ್ರೆ, ಮತ್ತೆ ಅದನ್ನು ಶೂಟ್‌ ಮಾಡುವುದು ಕಷ್ಟವಾಗಬಹುದು. ಇದರಿಂದ ನಿರ್ಮಾಪಕರು, ನಿರ್ದೇಶಕರಿಗೂ ತೊಂದರೆಯಾಗುತ್ತಿತ್ತು. ಹಾಗಾಗಿ ಆ ದಿನದ ಶೂಟಿಂಗ್‌ ಕಂಪ್ಲೀಟ್‌ ಮಾಡುವ ನಿರ್ಧಾರಕ್ಕೆ ಬಂದೆ. ಅದೂ ಕೂಡ “ಗಿಮಿಕ್‌’ ಚಿತ್ರದಲ್ಲಿ ಬರುವ ಕಾಮಿಡಿ ಸೀನ್‌ ಅದು. ಒಂದು ಕಡೆ ಅಪ್ಪನ ಅಗಲಿಕೆಯ ನೋವು, ಮತ್ತೂಂದು ಕಡೆ ಪ್ರೇಕ್ಷಕರನ್ನು ನಗಿಸುವ ಜವಾಬ್ದಾರಿ. ಒಬ್ಬ ಕಲಾವಿದನಿಗೆ ಆ್ಯಕ್ಟ್ ಮಾಡೋದು ಎಷ್ಟು ಕಷ್ಟ ಅಂತ ಗೊತ್ತಾಗಿದ್ದು, ಆವಾಗಲೇ…’ ಎಂದು “ಗಿಮಿಕ್‌’ ತೆರೆ ಹಿಂದಿನ ವೃತ್ತಾಂತ ತೆರೆದಿಟ್ಟರು.

“ಯಾವುದೇ ಸೀನ್‌ ಆದ್ರೂ ನಾನು ಅದನ್ನು ಖುಷಿಯಿಂದ ಮಾಡುತ್ತೇನೆ. ಆದ್ರೆ “ಗಿಮಿಕ್‌’ನಲ್ಲಿ ಪ್ರೇಕ್ಷಕರಿಗೆ ಖುಷಿಕೊಡುವ ಈ ಸೀನ್‌ ಅನ್ನು ದುಃಖದಲ್ಲಿಯೇ ಮಾಡಬೇಕಾಯಿತು. ನಿಜಕ್ಕೂ ಈ ಸಂದರ್ಭ ಕಲಾವಿದರ ಕಷ್ಟಗಳು ಏನು ಅಂಥ ನನಗೆ ಅರ್ಥ ಮಾಡಿಸಿತು. ಡಬ್ಬಿಂಗ್‌ ಮಾಡುವಾಗಲೂ, ಆ ಸೀನ್‌ ಬಂದಾಗ ಸಾಕಷ್ಟು ಭಾವುಕನಾದೆ. ಕೆಲ ಸಮಯ ತೆಗೆದುಕೊಂಡು ಡಬ್ಬಿಂಗ್‌ ಮುಂದುವರೆಸಬೇಕಾಯಿತು’ ಎನ್ನುತ್ತಾರೆ ಗಣೇಶ್‌.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.