ಕೆಎಸ್‌ಆರ್‌ಟಿಸಿಗೆ 8 ದಿನದಲ್ಲಿ 5.40ಕೋಟಿ ರೂಪಾಯಿ ನಷ್ಟ


Team Udayavani, Aug 13, 2019, 3:00 AM IST

Udayavani Kannada Newspaper

ಬೆಂಗಳೂರು: ಎಂಟು ದಿನಗಳ ಅಂತರದಲ್ಲಿ 2,702 ಅನುಸೂಚಿಗಳು ಮತ್ತು 15 ಲಕ್ಷ ಕಿ.ಮೀ. ಸಂಚಾರ ರದ್ದು. ಸಾವಿರಾರು ಪ್ರಯಾಣಿಕರು ಪರದಾಟ. ಒಟ್ಟಾರೆ ಕೆಎಸ್‌ಆರ್‌ಟಿಸಿಗಾದ ನಷ್ಟ 5.40 ಕೋಟಿ ರೂ.!   ಇದು ರಾಜ್ಯದಲ್ಲಿ ಉಂಟಾದ ನೆರೆ ಹಾವಳಿ ಎಫೆಕ್ಟ್. ಉತ್ತರ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಕಳೆದ ಏಳೆಂಟು ದಿನಗಳಿಂದ ಉಂಟಾದ ನೆರೆ ಹಾವಳಿಯಿಂದ ಹತ್ತಾರು ಜನ-ಜಾನುವಾರುಗಳು ಬಲಿ, ಬೆಳೆ ಹಾನಿ ಜತೆಗೆ ಕೆಎಸ್‌ಆರ್‌ಟಿಸಿಗೆ ಆರ್ಥಿಕವಾಗಿ ಸಾಕಷ್ಟು ನಷ್ಟವಾಗಿದೆ.

ಆಗಸ್ಟ್‌ 4ರಿಂದ 12ರವರೆಗೆ ಒಟ್ಟಾರೆ ನಿಗಮದ ವ್ಯಾಪ್ತಿಯಲ್ಲಿ 2,702 ಅನುಸೂಚಿಗಳು ಸಂಪೂರ್ಣವಾಗಿ ರದ್ದಾಗಿದ್ದರೆ, 4,060 ಅನುಸೂಚಿಗಳು ಭಾಗಶಃ ಸ್ಥಗಿತಗೊಂಡವು. ಇದರಿಂದ 5,40 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸ ಲಾಗಿದೆ. ಸಂಪೂರ್ಣ ರದ್ದಾಗಿರುವ ಸೇವೆಗಳಲ್ಲಿ ಮಂಗಳೂರು, ಪುತ್ತೂರು, ಚಿಕ್ಕಮಗ ಳೂರು, ಮೈಸೂರು, ಶಿವಮೊಗ್ಗ ಮಾರ್ಗಗಳು ಹೆಚ್ಚಿವೆ.

ಇಲ್ಲಿ ಕ್ರಮವಾಗಿ 414, 324, 323, 232, 226 ಬಸ್‌ ಸೇವೆಗಳು ರದ್ದಾಗಿವೆ. ಅದೇ ರೀತಿ, ಭಾಗಶಃ ಬಸ್‌ ಸೇವೆಗಳು ಸ್ಥಗಿತಗೊಂಡಿದ್ದು ಕೂಡ ಇದೇ ಮಾರ್ಗದಲ್ಲಿ ಬರುತ್ತವೆ. ಇನ್ನು ಸೇವೆ ವ್ಯತ್ಯಯಗೊಂಡ ಹಿನ್ನೆಲೆಯಲ್ಲಿ ಇದೇ ಅವಧಿಯಲ್ಲಿ 45,233 ಟಿಕೆಟ್‌ಗಳು ರದ್ದಾಗಿದ್ದು, 2.67 ಕೋಟಿ ರೂ. ಪ್ರಯಾಣಿಕರಿಗೆ ಹಿಂಪಾವತಿ ಮಾಡಲಾಗಿದೆ ಎಂದು ನಿಗಮದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಮಧ್ಯೆ ಮಳೆ ಇಳಿಮುಖವಾಗಿದ್ದು, ನೆರೆ ಹಾವಳಿ ಕೂಡ ತಗ್ಗಿದ ಪರಿಣಾಮ ಸೋಮವಾರದಿಂದ ಕೆಲವು ರಸ್ತೆಗಳಲ್ಲಿ ಬಸ್‌ ಸಂಚಾರ ಪುನಾರಂಭಗೊಂಡಿದೆ. ಬೆಂಗಳೂರು-ಮಂಗಳೂರು ನಡುವೆ ಕಡಿತಗೊಂಡಿದ್ದ ರಸ್ತೆ ಸಂಪರ್ಕ ಕೊಂಡಿ ಪುನಃ ಬೆಸೆದಿದ್ದು, ಹಗಲು ಈ ಮಾರ್ಗದಲ್ಲಿ ಶಿರಾಡಿ ಘಾಟ್‌ ಮೂಲಕ ಹಾಗೂ ರಾತ್ರಿ ಮಡಿಕೇರಿ ಮೂಲಕ ಬಸ್‌ ಕಾರ್ಯಾಚರಣೆ ಮಾಡಲಾಗುತ್ತಿದೆ.

ಅದೇ ರೀತಿ, ಬೆಂಗಳೂರು-ಕೇರಳ, ಶಿವಮೊಗ್ಗ-ಮಂಗಳೂರು-ಧರ್ಮಸ್ಥಳ, ಬೆಂಗಳೂರು-ಉಡುಪಿ (ರಾತ್ರಿ ಸೇವೆಗೆ ಅನುಮತಿ ಇಲ್ಲ), ಚಿಕ್ಕಮಗಳೂರು-ಉಡುಪಿ (ಶೃಂಗೇರಿ ಮೂಲಕ), ಮೈಸೂರಿನಿಂದ ಕುಶಾಲನಗರ, ನಂಜನಗೂಡು, ಎಚ್‌.ಡಿ. ಕೋಟೆ ಮತ್ತಿತರ ಮಾರ್ಗಗಳಲ್ಲಿ ಸೇವೆ ಮತ್ತೆ ಆರಂಭಗೊಂಡಿದೆ ಎಂದು ನಿಗಮದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.