ವಾರದಲ್ಲೇ ಸುರಿದ ಮಳೆಗಾಲದ ಮಳೆ


Team Udayavani, Aug 13, 2019, 6:00 AM IST

r-42

ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಈವರೆಗೆ ಇಡೀ ರಾಜ್ಯದಲ್ಲಿ ಸುರಿಯಬೇಕಾದ ಮಳೆ, ಏಳು ಜಿಲ್ಲೆಗಳಲ್ಲಿ ಕೇವಲ ಏಳು ದಿನಗಳಲ್ಲೇ ಸುರಿದಿದೆ! ಮಲೆನಾಡಿನ ನಾಲ್ಕು ಮತ್ತು ಉತ್ತರ ಕರ್ನಾಟಕದ
ಮೂರು ಜಿಲ್ಲೆಗಳಲ್ಲಿ ಕಳೆದ ಏಳು ದಿನಗಳಲ್ಲಿ ಸರಾಸರಿ 516 ಮಿ.ಮೀ. ಮಳೆ ಸುರಿದಿದೆ. ಇದು ಇಡೀ ರಾಜ್ಯದಲ್ಲಿ ಈವರೆಗಿನ ಮುಂಗಾರು ಹಂಗಾಮಿನಲ್ಲಿ (ಜೂನ್‌ನಿಂದ ಆಗಸ್ಟ್‌ 12ರವರೆಗೆ) ಸುರಿಯುವ
ವಾಡಿಕೆ ಮಳೆಗೆ ಸರಿಸಮ.

ಬೆಳಗಾವಿ, ಧಾರವಾಡ, ಹಾವೇರಿ ಸುತ್ತಲಿನ ಪ್ರದೇಶ ಹಾಗೂ ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸುತ್ತಲಿನ ಭಾಗಗಳಿಗೆ ಸರಾಸರಿ ವಾಡಿಕೆ ಲೆಕ್ಕಹಾಕಿದರೆ, ಪ್ರಸಕ್ತ ಮುಂಗಾರಿನಲ್ಲಿ ಇದುವರೆಗೆ 107 ಮಿ.ಮೀ. ಮಳೆ ಬೀಳಬೇಕಾಗಿತ್ತು.
ಆದರೆ, ಐದುಪಟ್ಟು ಸುರಿದಿದೆ. ಇದೇ ಅವಧಿಯಲ್ಲಿ ಒಟ್ಟಾರೆ ರಾಜ್ಯದಲ್ಲಿ ಸುರಿಯಬೇಕಾದ ಮಳೆಗೆ (560 ಮಿ.ಮೀ.) ಹೆಚ್ಚು-ಕಡಿಮೆ ಸರಿಸಮವಾಗಿದೆ ಎಂದು ಹವಾಮಾನ ಇಲಾಖೆ ಅಂಕಿ-ಸಂಖ್ಯೆಗಳು
ಸ್ಪಷ್ಟಪಡಿಸುತ್ತವೆ.

ಹತ್ತು ದಿನಗಳಲ್ಲಿ!: ವಿಚಿತ್ರವೆಂದರೆ ರಾಜ್ಯದ ಮುಂಗಾರು ಹಂಗಾಮು ಜೂನ್‌ 1ರಿಂದ ಸೆಪ್ಟೆಂಬರ್‌ ಅಂತ್ಯದವರೆಗೆ ಸುರಿಯುವ ವಾಡಿಕೆ ಮಳೆ 832.3 ಮಿ.ಮೀ. ಈ ಪೈಕಿ ಶೇ. 62ರಷ್ಟು ಮಳೆ ಬರೀ ಈ 7 ಜಿಲ್ಲೆಗಳಲ್ಲಿ 7ದಿನಗಳಲ್ಲಿ ಸುರಿದಿದೆ. ಆ. 1ರಿಂದ 11- 578 ಮಿ.ಮೀ. ಅಂದರೆ
ಶೇ. 70ರಷ್ಟು ಮಳೆ ಬಿದ್ದಿದೆ! ಇದರರ್ಥ 30 ಜಿಲ್ಲೆಗಳ ಭೌಗೋಳಿಕ ಪ್ರದೇಶದಲ್ಲಿ ಸುರಿಯುವ ವಾಡಿಕೆ ಮಳೆ ಕೇವಲ ಏಳು ಜಿಲ್ಲೆಗಳ
ಭೌಗೋಳಿಕ ವ್ಯಾಪ್ತಿಯಲ್ಲಿ ಬಿದ್ದಿದೆ.

ರಾಜ್ಯದ ಮಳೆ ಜಿಲ್ಲೆಗೆ ಸೀಮಿತ: ರಾಜ್ಯಾದ್ಯಂತ ಹಂಚಿಕೆ ಆಗಬೇಕಾದ ಮಳೆ ಕೆಲವೇ ಪ್ರದೇಶಗಳಿಗೆ ಸೀಮಿತವಾಗಿದೆ. ಅದರ ಪ್ರಮಾಣ ರಾಜ್ಯದ ಪ್ರಸಕ್ತ ಮುಂಗಾರಿನ ವಾಡಿಕೆ ಮಳೆಗೆ ಹತ್ತಿರದಲ್ಲಿದ್ದರೂ ಅಚ್ಚರಿ ಇಲ್ಲ. ಇನ್ನು ಹೆಚ್ಚು ಮಳೆ ಬಿದ್ದ ಕಡೆಗಳಲ್ಲೆಲ್ಲಾ ಬೆಟ್ಟ ಗುಡ್ಡಗಳು ಇರುವುದನ್ನು
ಕಾಣಬಹುದು. ಅವು ಮಾರುತ ಗಳನ್ನು ತಡೆದು, ಅಧಿಕ ಮಳೆ ಸುರಿಸುತ್ತವೆ. ಇದರ ಜತೆಗೆ ಮಹಾರಾಷ್ಟ್ರದ ಜಲಾಶಯದಿಂದಲೂ ನೀರನ್ನು ಬಿಡುಗಡೆ ಮಾಡಲಾಯಿತು. ಇವೆರಡೂ ಕಾರಣದಿಂದ ಕರ್ನಾಟ
ಕವು ಮತ್ತೂಮ್ಮೆ ನೆರೆಗೆ ತುತ್ತಾಗಬೇಕಾಯಿತು ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಪ್ರಭಾರ ನಿರ್ದೇಶಕ ಸಿ.ಎಸ್‌. ಪಾಟೀಲ “ಉದಯವಾಣಿ’ಗೆ ತಿಳಿಸಿದರು.

ಎಲ್ಲೆಲ್ಲಿ ಎಷ್ಟು ಮಳೆ?
ಆ. 5ರಿಂದ 11ರವರೆಗೆ ಆಯ್ದ 7 ಜಿಲ್ಲೆಗಳಲ್ಲಿ ಸುರಿದ
ಮಳೆ ಪ್ರಮಾಣ ಹೀಗಿದೆ (ಮಿ.ಮೀ.ಗಳಲ್ಲಿ).
ಜಿಲ್ಲೆ                   ಮಳೆ
ಬೆಳಗಾವಿ           382.1
ಹಾವೇರಿ            313.3
ಧಾರವಾಡ         266
ಕೊಡಗು            893.8
ಚಿಕ್ಕಮಗಳೂರು  718
ಶಿವಮೊಗ್ಗ           729.4
ಹಾಸನ              312.4

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.