ಟ್ರಕ್ ಪಲ್ಟಿಯಾಗಿ ಏಳು ಜನರ ದಾರುಣ ಸಾವು, ಐವರಿಗೆ ಗಾಯ
Team Udayavani, Aug 13, 2019, 8:40 AM IST
ಉತ್ತರ ಪ್ರದೇಶ: ಟ್ರಕ್ ಪಲ್ಟಿಯಾಗಿ ಏಳು ಜನ ಮೃತಪಟ್ಟು, ಕನಿಷ್ಠ ಐವರು ಗಾಯಗೊಂಡ ಘಟನೆ ಇಂದು ಮುಂಜಾನೆ ಉತ್ತರ ಪ್ರದೇಶದ ಬದೌನ್ ನಲ್ಲಿ ನಡೆದಿದೆ.
ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ಸೇರಿಸಲಾಗಿದೆ. ಟ್ರಕ್ ಚಾಲಕನ ಅತೀ ವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ.
ಗೋಧಿ ತುಂಬಿದ ಚೀಲಗಳನ್ನು ತುಂಬಿ ಬರುತ್ತಿದ್ದ ಟ್ರಕ್ ತಿರುವಿನಲ್ಲಿ ಪಲ್ಟಿಯಾಗಿದೆ. ಟರ್ನ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹತ್ತಿರದ ಚಹಾದಂಗಡಿಯ ಮೇಲೆ ಟ್ರಕ್ ಬಿದ್ದಿದೆ. ಚಹಾದಂಗಡಿಯ ಬಳಿ ನಿಂತಿದ್ದ ಜನರು ಅದರಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಸ್ಥಳಿಯ ಶಾಸಕ ರಾಜೀವ್ ಕುಮಾರ್ ಸಿಂಗ್ ಆಸ್ಪತ್ರೆಗೆ ದೌಡಾಯಿಸಿದ್ದು, ಸಿಎಂ ಯೋಗಿ ಆದಿತ್ಯನಾಥ್ ಪರವಾಗಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ, ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ