ಸಂಘದ ಸದಸ್ಯತ್ವ ಹೆಚ್ಚಿಸಲು ಕ್ರಿಯಾಶೀಲರಾಗೋಣ: ಜಿ. ಟಿ. ಪೂಜಾರಿ

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ ಇದರ 74ನೇ ವಾರ್ಷಿಕ ಮಹಾಸಭೆ

Team Udayavani, Aug 13, 2019, 11:07 AM IST

mumbai-tdy-1

ಮುಂಬಯಿ, ಆ. 12: ಎಪ್ಪತ್ತನಾಲ್ಕು ವರ್ಷಗಳ ಹಿಂದೆ ಚಿತ್ರಾಪು ಬಿಲ್ಲವ ಸಮುದಾಯದ ಹಿರಿಯರು ಬಹಳ ಪರಿಶ್ರಮದಿಂದ ಈ ಸಂಘವನ್ನು ಕಟ್ಟಿದ್ದು, ನಾವಿಂದು ಅವರನ್ನು ನೆನಪಿಸಬೇಕಾಗಿದೆ. ಮಹಿಳೆಯರು ಬಹಳ ಸಂಖ್ಯೆಯಲ್ಲಿ ಇಂದು ಇಲ್ಲಿದ್ದು ಮುಂದೆ ಇದು ಹಲವು ಪಟ್ಟು ಹೆಚ್ಚಾಗಲಿ. ನಮ್ಮವರ ಮನೆಯಲ್ಲಿನ ಮಹಿಳೆಯರನ್ನು ಹಾಗೂ ಮಕ್ಕಳನ್ನು ಮಾತ್ರವಲ್ಲದೆ ಸಮಾಜ ಬಾಂಧವರನ್ನು ಚಿತ್ರಾಪು ಬಿಲ್ಲವರ ಸಂಘದ ಸದಸ್ಯರಾಗಿ ಮಾಡುವುದರೊಂದಿಗೆ ಸಂಘದ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸೋಣ ಎಂದು ಚಿತ್ರಾಪು ಬಿಲ್ಲವರ ಸಂಘದ ಅಧ್ಯಕ್ಷರಾದ ಜಿ. ಟಿ. ಪೂಜಾರಿ ನುಡಿದರು.

ಆ. 11ರಂದು ನಗರದ ಬಿಲ್ಲವ ಭವನ, ನಾರಾಯಣ ಗುರು ಮಾರ್ಗ, ಸಾಂತಾಕ್ರೂಸ್‌ ಪೂರ್ವ ಇಲ್ಲಿ ಜರಗಿದ ಚಿತ್ರಾಪು ಬಿಲ್ಲವರ ಸಂಘ ಮುಂಬಯಿ ಇದರ 74ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಯುವಕರು ಮುಂದೆ ಬಂದು ನಮ್ಮ ಈ ಸಂಘವನ್ನು ಉನ್ನತ ಮಟ್ಟಕ್ಕೇರಿಸಬೇಕು ಎಂದು ಶ್ರೀ ವಿಠೊಭ ದೇವರ ಆಶೀರ್ವಾದದಿಂದ ನಮಗೆ ಎಲ್ಲರ ಬೆಂಬಲವಿದೆ ಎಂದರು.

ಅಧ್ಯಕ್ಷರಾದ ಜಿ. ಟಿ. ಪೂಜಾರಿಅವರು ವೇದಿಕೆಯಲ್ಲಿದ್ದ ಇತರ ಪದಾಧಿಕಾರಿಗಳೊಂದಿಗೆ ಶ್ರೀ ವಿಠೊಭ ದೇವರ ಭಾವಚಿತ್ರಕ್ಕೆ ಮೊದಲು ದೀಪ ಬೆಳಗಿಸಿ ಮಹಾಸಭೆಗೆ ಚಾಲನೆಯಿತ್ತು ಎಲ್ಲ ಸದಸ್ಯರನ್ನು ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಉಮೇಶ್‌ ಜಿ. ಕೋಟ್ಯಾನ್‌ ಗತ ಸಭೆಯ ವರದಿಯನ್ನು ಸಭೆಯ ಮುಂದಿಟ್ಟರೆ ಗೌರವ ಕೋಶಾಧಿಕಾರಿ ಸೋಮನಾಥ ಪಿ. ಪೂಜಾರಿಯವರು ಲೆಕ್ಕ ಪತ್ರವನ್ನು ಸಭೆಯಲ್ಲಿ ಮಂಡಿಸಿದರು.

ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಜಿ. ಟಿ. ಪೂಜಾರಿ ಅವರು ಅಧ್ಯಕ್ಷರಾಗಿ ಪುನರಾಯ್ಕೆಯಾದರು. ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್‌ ಜಿ. ಕೋಟ್ಯಾನ್‌, ಗೌರವ ಕೋಶಾಧಿಕಾರಿಯಾಗಿ ಸೋಮನಾಥ ಪಿ. ಪೂಜಾರಿ, ಉಪಾಧ್ಯಕ್ಷರಾಗಿ ರಾಜು ಎಸ್‌. ಪೂಜಾರಿ, ಜತೆ ಕಾರ್ಯದರ್ಶಿಗಳಾಗಿ ನಿಶಿತ್‌ ಎಸ್‌. ಕೋಟ್ಯಾನ್‌ ಮತ್ತು ಮಧುಕರ್‌ ಆರ್‌. ಕೋಟ್ಯಾನ್‌, ಜತೆ ಕೋಶಾಧಿಕಾರಿಯಾಗಿ ಕಿಶೋರ್‌ ಎಸ್‌. ಕರ್ಕೇರ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸುರೇಶ್‌ ಎಂ. ಕೋಟ್ಯಾನ್‌, ಪದ್ಮನಾಭ ಜೆ. ಪೂಜಾರಿ, ಜಯಶೀಲ ಕೋಟ್ಯಾನ್‌, ರಮೇಶ್‌ ಕೆ. ಕುಂದರ್‌, ವಿ. ಸಿ. ಸಾಲ್ಯಾನ್‌, ನವೀಶ್‌ ಜೆ. ಬಂಗೇರ, ಗಣೇಶ್‌ ಸಾಲ್ಯಾನ್‌, ಆಂತರಿಕ ಲೆಕ್ಕ ಪರಿಶೋಧಕರಾಗಿ ಶೇಖರ ಜೆ. ಚಿತ್ರಾಪು ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಿಧನರಾದ ಚಿತ್ರಾಪು ಬಿಲ್ಲವರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಟಿ. ಕುಕ್ಯಾನ್‌ ಅವರಿಗೆ ಸಂತಾಪ ಸೂಚಿಸಲಾಯಿತು. ಸಭಿಕರ ಪರವಾಗಿ ಮಾತನಾಡಿದ ಸುಂದರ ಸುವರ್ಣ, ಭಾಸ್ಕರ ಎಸ್‌. ಕೋಟ್ಯಾನ್‌, ಸುರೇಶ್‌ ಎಂ. ಕೋಟ್ಯಾನ್‌, ಉಮೇಶ್‌ ಕೋಟ್ಯಾನ್‌, ರವಿ ಸನಿಲ್, ಸೋಮನಾಥ ಪಿ. ಪೂಜಾರಿ ಅವರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದಿ. ರಾಮಚಂದ್ರ ಟಿ. ಕುಕ್ಯಾನ್‌ ಅವರ ಸೇವೆಯನ್ನು ಸ್ಮರಿಸಿದರು. ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಸಂಘದ ಸಾಧಕರಾದ ಸುರೇಶ್‌ ಎಂ. ಕೋಟ್ಯಾನ್‌, ರಾಧಾ, ಪದ್ಮನಾಭ ಜೆ. ಪೂಜಾರಿ ದಂಪತಿಯನ್ನು ಸಮ್ಮಾನಿಸಲಾಯಿತು. ಸಂಘದ ಹಿರಿಯ ಸದಸ್ಯರನ್ನು ಈ ಸಭೆಯಲ್ಲಿ ಗೌರವಿಸಲಾಯಿತು. ಚಿತ್ರಾಪು ಬಿಲ್ಲವರ ಸಂಘದ ನೂತನ ಗೌರವ ಪ್ರಧಾನ ಕಾರ್ಯದರ್ಶಿ ಉಮೇಶ್‌ ಜಿ. ಕೋಟ್ಯಾನ್‌ ವಂದಿಸಿದರು.

 

ಚಿತ್ರ-ವರದಿ: ಈಶ್ವರ ಎಂ. ಐಲ್

ಟಾಪ್ ನ್ಯೂಸ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.