ಬಾಳು ಸಂಗೀತದಂತೆ…

ವಾದ್ಯ ರಿಪೇರಿಯೇ ಜೀವನಕೆ ದಾರಿ

Team Udayavani, Aug 14, 2019, 5:26 AM IST

s-4

ಇರುವುದು ಆರು ಅಡಿ ಅಗಲ, ಹತ್ತು ಅಡಿ ಉದ್ದದ ಪುಟ್ಟ ಅಂಗಡಿ. ಸುತ್ತಲೂ ಗೋಡೆಗೆ ಆವರಿಸಿದ ಥರಹೇವಾರಿ ಸಂಗೀತ ವಾದ್ಯಗಳನ್ನು ನೋಡಿದರೆ ಇಡೀ ಸಂಗೀತ ಲೋಕವೇ ಇಲ್ಲಿದೆಯೇನೋ ಎಂದು ಭಾಸವಾಗುತ್ತದೆ. ಕೊಠಡಿಯ ಪುಟ್ಟ ಜಾಗದಲ್ಲಿ ಕುಳಿತು ವಾದ್ಯಗಳ ರಿಪೇರಿ ಮಾಡುತ್ತಿರುತ್ತಾರೆ 45 ರ ಹರೆಯದ ಮಲ್ಲಮ್ಮ ಬಗರಿಕಾರ. ಸತತ 15 ವರ್ಷಗಳಿಂದ ಅವರ ಹೊಟ್ಟೆ ತುಂಬಿಸುತ್ತಿರುವುದು ತೊಗಲು ವಾದ್ಯಗಳ ರಿಪೇರಿ ಕಾಯಕವೇ!

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಸ್‌ ನಿಲ್ದಾಣದ ಹತ್ತಿರ ಇರುವ ಗಾಯತ್ರಿ ಮ್ಯೂಸಿಕಲ್‌ ವರ್ಕ್ಸ್ ಎಂಬ ವಾದ್ಯಗಳ ಅಂಗಡಿ ನಡೆಸುತ್ತಿದ್ದಾರೆ ಮಲ್ಲಮ್ಮ. ಇದು ಅವರ ಸ್ವಂತ ಕೊಠಡಿಯಲ್ಲ. ಬಾಡಿಗೆಯ ಜಾಗದಲ್ಲಿ ಅಂಗಡಿ ನಡೆಸುತ್ತಾ, ಜೀವನದ ತಂತಿಯನ್ನು ಮೀಟುತ್ತಿದ್ದಾರೆ. ತಬಲಾ, ಡಗ್ಗಾ, ಡೋಲಕ್‌, ಮೃದಂಗ, ನಗಾರಿ, ರಣ ಹಲಗೆ, ಸಮಳ, ಚೌಡಕಿ, ಜಗ್ಗಲಗಿ ಹೀಗೆ ಅನೇಕ ವಾದ್ಯಗಳನ್ನು ಮಲ್ಲಮ್ಮನವರೇ ತಯಾರಿಸಿ, ಮಾರಾಟ ಮಾಡುತ್ತಾರೆ.

ಚರ್ಮವಾದ್ಯ ಪ್ರವೀಣೆ
ಇವರಿಗೆ ನಾಟಕ ಕಂಪನಿಯವರು, ಭಜನಾ ಸಂಘದವರು ಡೊಳ್ಳಿನ ಸಂಘದವರೇ ಗ್ರಾಹಕರು. ಯಾವ ವಾದ್ಯ ಬೇಕೆಂದು ಗ್ರಾಹಕರು ಬೇಡಿಕೆ ಇಡುತ್ತಾರೋ, ಆ ವಾದ್ಯವನ್ನು ಮಲ್ಲಮ್ಮ ತಯಾರಿಸುತ್ತಾರೆ. ಚರ್ಮ ವಾದ್ಯಗಳನ್ನು ತಯಾರಿಸಿಟ್ಟುಕೊಂಡು ಗ್ರಾಹಕರಿಗಾಗಿ ಕಾಯುವುದೂ ಉಂಟು. ಯಾವ ವಾದ್ಯದ ಮೇಲೆ ಯಾವ ಕಲಾವಿದರ‌ ಋಣವಿರುತ್ತದೋ ಯಾರಿಗೆ ಗೊತ್ತು ಎಂದು ಹೇಳುತ್ತಾರೆ ಮಲ್ಲಮ್ಮ ಬಗರಿಕಾರ.

ಶೃತಿ ಜ್ಞಾನವೂ ಇದೆ
ತಬಲಾ ತಯಾರಿಕೆಗೆ ಚರ್ಮ, ಗಟ್ಟಿ, ಪಡಗ, ಕರಣಿ, ಚರ್ಮದ ದಾರ ಬೇಕಾಗುತ್ತದೆ. ತಯಾರಿಸಿದ ನಂತರ ವಾದ್ಯವನ್ನು ನುಡಿಸಿ, ನಾದ ಸರಿಯಾಗಿ ಹೊಮ್ಮುತ್ತಿದೆಯೇ ಎಂದು ಪರೀಕ್ಷಿಸಿ, ಹೊಮ್ಮದಿದ್ದರೆ ಮತ್ತೆ ಚರ್ಮದ ದಾರವನ್ನು ಬಿಗಿಗೊಳಿಸಿ ಅಪಶ್ರುತಿ ಬರದ ಹಾಗೆ ಸರಿ ಮಾಡಬೇಕು. ಹಾಗಾಗಿ ವಾದ್ಯ ತಯಾರಿಕರಿಗೂ ಶೃತಿಜ್ಞಾನ ಅಗತ್ಯವಾಗಿ ಇರಬೇಕು. ಈ ವಿಷಯದಲ್ಲಿ ಮಲ್ಲಮ್ಮ, ಯಾವ ಸಂಗೀತಗಾರರಿಗೂ ಕಡಿಮೆಯಿಲ್ಲ.

ಫೈಬರ್‌ ವಾದ್ಯದಿಂದ ಪೆಟ್ಟು
ಆರು ತಿಂಗಳಿಗೊಮ್ಮೆ ಮೀರಜ್‌, ಕೊಲ್ಲಾಪುರ, ದಾವಣಗೆರೆಗೆ ಹೋಗಿ ಚರ್ಮವಾದ್ಯಗಳಿಗೆ ಬೇಕಾದ ಕಚ್ಚಾವಸ್ತುಗಳನ್ನು ತರುತ್ತಾರೆ. ನಂತರ ವಾದ್ಯಗಳನ್ನು ಸಿದ್ಧಪಡಿಸಿ ಮಾರಾಟ ಮಾಡುತ್ತಾರೆ. ಒಂದು ನಗಾರಿಯನ್ನು ತಯಾರಿಸಲು ಕನಿಷ್ಠ ಒಂದು ವಾರ ಸಮಯ ಬೇಕಾಗುತ್ತದೆ. ಫೈಬರ್‌ ವಾದ್ಯಗಳ ಭರಾಟೆಯಲ್ಲಿ ಚರ್ಮವಾದ್ಯಗಳನ್ನು ಕೇಳುವವರು ತೀರ ಕಡಿಮೆಯಾದರೂ ಕುಲ ಕಸುಬು ಬಿಡುವ ಹಾಗಿಲ್ಲ. ತಯಾರಿ ಇಲ್ಲದ ದಿನಗಳಲ್ಲಿ, ರಿಪೇರಿಗೆ ಬಂದ ವಾದ್ಯಗಳನ್ನು ಸರಿಪಡಿಸಿ, ಅವುಗಳಿಗೆ ಜೀವ ತುಂಬುವುದು ಮಲ್ಲಮ್ಮನ ಕಾಯಕ.

ಮಲ್ಲಮ್ಮ ಬಗರಿಕಾರ ಅವರಿಗೆ ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಪತಿ ತೀರಿಕೊಂಡ ಬಳಿಕ ಸಂಸಾರದ ನೊಗ ಇವರ ಹೆಗಲಿಗೆ ಬಿತ್ತು. ಒಬ್ಬ ಮಗಳಿಗೆ ವಿವಾಹವಾಗಿದೆ. ಮಗ, ಬೀಡಾ ಅಂಗಡಿ ನಡೆಸುತ್ತಿದ್ದರೆ, ಇನ್ನೊಬ್ಬ ಮಗಳು ಈಗ ಹೈಸ್ಕೂಲ್‌ ಓದುತ್ತಿದ್ದಾಳೆ. ಬಡತನವೇ ಹಾಸಿ ಹೊದ್ದು ಮಲಗಿರುವ ಮಲ್ಲಮ್ಮನ ಕುಟುಂಬಕ್ಕೆ ಕಲಾಸೇವೆಯೇ ಶ್ರೀರಕ್ಷೆ.

ತಯಾರಿಸಿದ ವಾದ್ಯದಿಂದ ನಾದ ಸರಿಯಾಗಿ ಹೊಮ್ಮುತ್ತಿದೆಯೇ ಅಂತ ಪರೀಕ್ಷಿಸಿ, ಅಪಸ್ವರ ಹೊರಡುತ್ತಿದ್ದರೆ ಚರ್ಮದ ದಾರವನ್ನು ಪುನಃ ಬಿಗಿಗೊಳಿಸಬೇಕಾಗುತ್ತೆ. ಹಾಗಾಗಿ ವಾದ್ಯ ತಯಾರಿಕರಿಗೂ ಶೃತಿಜ್ಞಾನ ಅಗತ್ಯ.
– ಮಲ್ಲಮ್ಮ

-ಟಿ. ಶಿವಕುಮಾರ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.