ಕಳ್ದೋಗ್ಬುಟ್ಟವರ ಕಥೆ-ವ್ಯಥೆ

ಹೊಸಬರ ಮ್ಯೂಸಿಕ್‌ ಮ್ಯಾಜಿಕ್‌

Team Udayavani, Aug 14, 2019, 3:00 AM IST

Kaldogbutte-kane

ಕನ್ನಡದಲ್ಲಿ ಇತ್ತೀಚೆಗೆ ಮ್ಯೂಸಿಕ್‌ ವಿಡಿಯೋ ಆಲ್ಬಂ ಟ್ರೆಂಡ್‌ ನಿಧಾನವಾಗಿ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಚಿತ್ರರಂಗಕ್ಕೆ ಅಡಿಯಿಡಲು ಕನಸು ಕಾಣುತ್ತಿರುವವರು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಹುಡುಕುತ್ತಿರುವ ಹೊಸಬರಿಗೆ ಇಂತಹ ಮ್ಯೂಸಿಕ್‌ ಆಲ್ಬಂಗಳು ನಿಧಾನವಾಗಿ ಕೈ ಹಿಡಿಯುತ್ತಿವೆ. ಈಗ ಇಂಥದ್ದೇ ಒಂದು ಹೊಸಬರ ತಂಡ “ಕಳ್ದೋಗ್ಬುಟ್ಟೆ ಕಣೆ’ ಎನ್ನುವ ಮ್ಯೂಸಿಕ್‌ ವಿಡಿಯೋ ಆಲ್ಬಂ ಮೂಲಕ ಚಿತ್ರರಂಗಕ್ಕೆ ಅಡಿಯಿಡುವ ತಯಾರಿಯಲ್ಲಿದೆ.

ಸುಮಾರು 18 ವರ್ಷಗಳಿಂದ ಸಂಗೀತ ಮತ್ತು ನೃತ್ಯರಂಗದಲ್ಲಿ ಸಕ್ರಿಯವಾಗಿರುವ, “ಟೀಂ ಯುವಾಸ್‌ ಡ್ಯಾನ್ಸ್‌ ಕಂಪೆನಿ’ ಎಂಬ ಸುಮಾರು 40-50 ಜನರ ನೃತ್ಯ ತಂಡವನ್ನು ನಡೆಸಿಕೊಂಡು ಬರುತ್ತಿರುವ ಯುವರಾಜ್‌ ವೈ ಬುಲ್‌, “ವೈ ಬುಲ್‌’ ಮತ್ತು “ಕಳ್ದೋಗ್ಬುಟ್ಟೆ ಕಣೆ’ ಎನ್ನುವ ಮ್ಯೂಸಿಕ್‌ ಆಲ್ಬಂ ಅನ್ನು ಹೊರತಂದಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್‌ ಬಣಕಾರ್‌ ಸೇರಿದಂತೆ ಚಿತ್ರರಂಗದ ಹಲವು ಗಣ್ಯರ ಸಮ್ಮುಖದಲ್ಲಿ ತಂಡ, “ವೈ ಬುಲ್‌’ ಮತ್ತು “ಕಳ್ದೋಗ್ಬುಟ್ಟೆ ಕಣೆ’ ಮ್ಯೂಸಿಕ್‌ ಆಲ್ಬಂ ಅನ್ನು ಹೊರತಂದಿದೆ.

ಇದೇ ವೇಳೆ ಮಾತನಾಡಿದ ಮ್ಯೂಸಿಕ್‌ ಆಲ್ಬಂನ ರೂವಾರಿ ಯುವರಾಜ್‌, “ಮೊದಲಿನಿಂದಲೂ ಚಿತ್ರರಂಗದಲ್ಲಿ ಏನಾದರೂ ಸಾಧಿಸಬೇಕು ಎಂಬ ಕನಸಿನಿಂದ ಇಲ್ಲೇ ಕೆಲಸ ಮಾಡುತ್ತಿದ್ದೇನೆ. ಆದರೆ ಅನೇಕ ನಿರ್ಮಾಪಕರು ಮತ್ತು ನಿರ್ದೇಶಕರ ಬಳಿ ಅವಕಾಶ ಕೇಳಿಕೊಂಡು ಹೋದರೂ, ಸಿಗದಿದ್ದಾಗ ನಾವೇ ಯಾಕೆ ಒಂದು ಮ್ಯೂಸಿಕ್‌ ಆಲ್ಬಂ ಮಾಡಬಾರದು ಎಂಬ ಯೋಚನೆ ಬಂತು. ನಂತರ ನಮ್ಮ ಒಂದಷ್ಟು ಜನ ಸ್ನೇಹಿತರ ಜೊತೆ ಸೇರಿಕೊಂಡು “ಕಳ್ದೋಗ್ಬುಟ್ಟೆ ಕಣೆ’ ಎನ್ನುವ ಮ್ಯೂಸಿಕ್‌ ಆಲ್ಬಂ ಮಾಡಲು ಮುಂದಾದೆವು.

ಇದು ನಮ್ಮ ಪ್ರತಿಭೆಯನ್ನು ಚಿತ್ರರಂಗಕ್ಕೆ ಮತ್ತು ಜನರ ಮುಂದೆ ತೋರಿಸುವ ಸಣ್ಣ ಪ್ರಯತ್ನ. ಮುಂದೆ ಇದೇ ರೀತಿ ಚಿತ್ರಗಳನ್ನು ಮಾಡುವ ಯೋಚನೆ ಇದೆ’ ಎಂದು ತಮ್ಮ ಕನಸುಗಳನ್ನು ತೆರೆದಿಟ್ಟರು. ಇನ್ನು “ವೈ ಬುಲ್‌’ ಮತ್ತು “ಕಳ್ದೋಗ್ಬುಟ್ಟೆ ಕಣೆ’ ಎರಡೂ ಮ್ಯೂಸಿಕ್‌ ವಿಡಿಯೋ ಆಲ್ಬಂನಲ್ಲಿ ಯುವರಾಜ್‌ ಅವರೇ ತೆರೆಮೇಲೆ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ “ವೈ ಬುಲ್‌’ ವಿಡಿಯೋ ಆಲ್ಬಂ ಸಾಂಗ್‌ ಯೂ-ಟ್ಯೂಬ್‌ನಲ್ಲಿ ಸುಮಾರು 60 ಲಕ್ಷ ಜನ ವೀಕ್ಷಿಸಿ, ಮೆಚ್ಚುಗೆಯನ್ನು ಸೂಚಿಸಿದ್ದಾರೆ.

“ಕಳ್ದೋಗ್ಬುಟ್ಟೆ ಕಣೆ’ ಮ್ಯೂಸಿಕ್‌ ಆಲ್ಬಂನಲ್ಲಿ ಯುವರಾಜ್‌ ಅವರಿಗೆ “ರನ್‌ ಆ್ಯಂಟನಿ’ ಚಿತ್ರದ ಖ್ಯಾತಿಯ ಸುಶ್ಮಿತಾ ಜೋಶಿ ನಾಯಕಿಯಾಗಿ ಹೆಜ್ಜೆ ಹಾಕಿದ್ದಾರೆ. ಸದ್ಯ “ಕಳ್ದೋಗ್ಬುಟ್ಟೆ ಕಣೆ’ ಮ್ಯೂಸಿಕ್‌ ಆಲ್ಬಂ ಸಂಗೀತ ಪ್ರಿಯರನ್ನು ನಿಧಾನವಾಗಿ ಸೆಳೆಯುತ್ತಿದ್ದು, ಹೊಸಬರ ಪ್ರಯತ್ನಕ್ಕೆ ಪ್ರಶಂಸೆ ಸಿಗುತ್ತಿದೆ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.