ಕೆರೆಯ ಕಟ್ಟೆ ಒಡೆದು ಕೊಚ್ಚಿ ಹೋದ ರಸ್ತೆ


Team Udayavani, Aug 14, 2019, 3:00 AM IST

kee-katte

ಹುಣಸೂರು: ನಾಗರಹೊಳೆ ಉದ್ಯಾನದೊಳಗಿನ ಕಲ್ಲಹಳ್ಳ ಕೆರೆಯ ಹೆಚ್ಚುವರಿ ನೀರು ಹರಿಯುವ ದೊಡ್ಡ ಮೋರಿ ಬಳಿಯ ರಸ್ತೆ ಕೊಚ್ಚಿ ಹೋಗಿದ್ದು, ಹುಣಸೂರು-ನಾಗರಹೊಳೆ-ಕೊಡಗಿನ ಕುಟ್ಟ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಉದ್ಯಾನದಲ್ಲಿ ಕಳೆದ 15 ದಿನಗಳಿಂದ ಬೀಳುತ್ತಿದ್ದ ಭಾರೀ ಮಳೆಯಿಂದ ಕಲ್ಲಹಳ್ಳ ಕೆರೆಗೆ ಅಪಾರ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಕೆರೆಗೆ ನಿರ್ಮಿಸಿದ್ದ ಔಟ್‌ಲೆಟ್‌(ಹೆಚ್ಚುವರಿ ನೀರು ಹರಿಯಲು ನಿರ್ಮಿಸಿದ್ದ ಕಟ್ಟೆ) 10 ಮೀಟರ್‌ ನಷ್ಟು ಒಡೆದು ರಭಸವಾಗಿ ಹರಿದ ನೀರು ಅರ್ಧ ರಸ್ತೆಯನ್ನೇ ಹೊತ್ತೂಯ್ದಿದೆ.

ಕಲ್ಲಹಳ್ಳ ವಲಯದ ರಸ್ತೆ ಬದಿಯಲ್ಲೇ ಇರುವ ಕಲ್ಲಹಳ್ಳ ದೊಡ್ಡಕೆರೆಯಲ್ಲಿ ನೀರು ಸಂಗ್ರಹಗೊಂಡು ವನ್ಯಜೀವಿಗಳಿಗೆ ವರ್ಷವಿಡೀ ನೀರಿನ ದಾಹ ಇಂಗಿಸುವ ಸಂಜೀವಿನಿ ಕೆರೆಯಾಗಿತ್ತು. ಆದರೆ, ಸತತ ಮಳೆಯಿಂದ ಎಲ್ಲಾ ಹಳ್ಳ-ಕೊಳ್ಳ, ತೋಡುಗಳಿಂದ ನೀರು ಒಮ್ಮೆಲೆ ಹರಿದು ಬಂದಿದ್ದರಿಂದ ಚಿಕ್ಕದಾಗಿರುವ ಮೋರಿಯ ಒಂದು ಪಾರ್ಶದ ರಸ್ತೆಯನ್ನು ಕೊರೆದು ಮುನ್ನುಗ್ಗಿದೆ. ಅಲ್ಲದೇ ಈ ಬಾರಿಯ ಮಹಾಮಳೆಯು ನಾಗರಹೊಳೆ ಉದ್ಯಾನದ ಎಲ್ಲಾ ವಲಯಗಳಲ್ಲೂ ಅಲ್ಲಲ್ಲಿ ಚೆಕ್‌ ಡ್ಯಾಂ, ಕೆರೆಏರಿ, ರಸ್ತೆಗಳಿಗೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿದೆ. ಇದು ವಿರಾಜಪೇಟೆ ತಾಲೂಕು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರಲಿದೆ.

ಸಂಚಾರ ಸ್ಥಗಿತ: ರಸ್ತೆ ಹಾಳಾಗಿರುವುದರಿಂದ ಮೈಸೂರು, ಹುಣಸೂರು, ಎಚ್‌.ಡಿ.ಕೋಟೆ ತಾಲೂಕುಗಳಿಂದ ಕೊಡಗಿನ ಕುಟ್ಟ, ಬಿರುನಾಣಿ, ಬಾಳೆಲೆ, ಕಾರ್ಮಾಡು, ಕಾನೂರು ಮತ್ತಿತರ ಕಡೆಗೆ ತೆರಳುತ್ತಿದ್ದ ಈ ಮಾರ್ಗದ ಎಲ್ಲಾ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಹುಣಸೂರು ತಾಲೂಕಿನಿಂದ ನಿತ್ಯ ಕೊಡಗಿನ ಎಸ್ಟೇಟ್‌ಗಳಿಗೆ ಸಹಸ್ರಾರು ಮಂದಿ ಕೂಲಿ ಕೆಲಸಕ್ಕೆ ತೆರಳುವವರಿಗೂ ತೊಂದರೆಯಾಗಿದ್ದು, ಶೀಘ್ರವೇ ರಸ್ತೆ ದುರಸ್ತಿ ಕಾರ್ಯ ನಡೆಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಾಗರಹೊಳೆ ಹುಲಿ ಯೋಜನೆ ಸಿಎಫ್ ನಾರಾಯಣಸ್ವಾಮಿ, ನಾಗರಹೊಳೆ ಉದ್ಯಾನದೊಳಗಿನ ಈ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಲಿದ್ದು, ರಸ್ತೆ ಹಾಳಾಗಿರುವ ಬಗ್ಗೆ ಮಾಹಿತಿ ನೀಡಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಕೋರಲಾಗಿದೆ ಎಂದರು.

ಹುಣಸೂರು-ನಾಗರಹೊಳೆ-ಕೊಡಗಿನ ಕುಟ್ಟ ಮುಖ್ಯ ರಸ್ತೆ ಹಾನಿಯಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಇಂದೇ (ಮಂಗಳವಾರ) ಸ್ಥಳಕ್ಕೆ ಎಂಜಿನಿಯರ್‌ಗಳನ್ನು ಕಳುಹಿಸಿ ವರದಿ ಪಡೆದು ಶೀಘ್ರ ದುರಸ್ತಿಕಾರ್ಯ ಕೈಗೆತ್ತಿಕೊಳ್ಳಲಾಗುವುದು.
-ಸುರೇಶ್‌, ವಿರಾಜಪೇಟೆ ತಾ.ಲೋಕೋಪಯೋಗಿ ಇಲಾಖೆ ಎಇಇ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.