ಜೆಡಿಎಸ್‌ನಿಂದ ಕಳಚಲಿದೆ ಇನ್ನೊಂದು ವಿಕೆಟ್‌?


Team Udayavani, Aug 14, 2019, 3:10 AM IST

jds-ninda

ಬೆಂಗಳೂರು: ಹಿರಿಯ ರಾಜಕಾರಣಿ ಎಚ್‌.ವಿಶ್ವನಾಥ್‌ ನಂತರ ಜೆಡಿಎಸ್‌ನ ಮೈಸೂರು ಭಾಗದ ಮತ್ತೊಬ್ಬ ಪ್ರಭಾವಿ ಮುಖಂಡ ಜಿ.ಟಿ.ದೇವೇಗೌಡರ ಸೆಳೆಯಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಮೈಸೂರು ಭಾಗದಲ್ಲಿ ರಾಜಕೀಯವಾಗಿ ನೆಲೆ ಕಲ್ಪಿಸಲು ಬಿ.ಎಸ್‌.ಯಡಿಯೂರಪ್ಪ ರೂಪಿಸಿರುವ ಕಾರ್ಯತಂತ್ರವಿದು ಎಂಬ ವ್ಯಾಖ್ಯಾನಗಳು ಕೇಳಿಬರುತ್ತಿವೆ.

ಎಚ್‌.ವಿಶ್ವನಾಥ್‌, ಜಿ.ಟಿ.ದೇವೇಗೌಡ, ವಿ.ಶ್ರೀನಿವಾಸಪ್ರಸಾದ್‌ ಅವರ ಬೆಂಬಲ ಇದ್ದರೆ ಮೈಸೂರು-ಚಾಮರಾಜನಗರ -ಮಂಡ್ಯ ಭಾಗದ ಕ್ಷೇತ್ರವೊಂದರಿಂದ ಪುತ್ರ ವಿಜಯೇಂದ್ರ ಅವರನ್ನು ವಿಧಾನಸಭೆ ಚುನಾವಣೆಗೆ ನಿಲ್ಲಿಸಿ ಆಯ್ಕೆ ಮಾಡುವುದು, ಆ ಭಾಗದ ನಾಯಕತ್ವ ವಹಿಸುವುದು ಯಡಿಯೂರಪ್ಪ ಅವರ ಉದ್ದೇಶ ಎಂದು ಮೂಲಗಳು ತಿಳಿಸಿವೆ. ಈ ನಡುವೆ ಜೆಡಿಎಸ್‌ ಸಹ ಬಿಜೆಪಿಯು ತಮ್ಮ ಪಕ್ಷದ ಸದಸ್ಯರನ್ನು ಸೆಳೆಯುತ್ತಿರುವ ಮಾಹಿತಿ ಪಡೆದಿದ್ದು, ಅಲ್ಲಿ ಪರ್ಯಾಯ ನಾಯಕರನ್ನು ಹುಡುಕಿ ಚುನಾವಣೆ ನಡೆದರೆ ತಿರುಗೇಟು ನೀಡಲು ಸಜ್ಜಾಗುತ್ತಿದೆ.

ಈ ಕಾರ್ಯತಂತ್ರದ ಭಾಗವಾಗಿ ಜಿ.ಟಿ.ದೇವೇಗೌಡರನ್ನು ಬಿಜೆಪಿಯತ್ತ ಸೆಳೆಯುವ ಯತ್ನ ನಡೆದಿದೆ. ಜಿ.ಟಿ.ದೇವೇಗೌಡರು ಬಿಜೆಪಿಯ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ. ಈಗಾಗಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿರುವ ಜಿ.ಟಿ.ದೇವೇಗೌಡರು ತಾವು ಹಿಂದೆ ಸರಿದು ಪುತ್ರ ಹರೀಶ್‌ಗೌಡ ರಾಜಕೀಯ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಿದ್ದಾರೆ.

ಎಚ್‌.ವಿಶ್ವನಾಥ್‌ ಮಧ್ಯಸ್ಥಿಕೆಯಲ್ಲೇ ಇಂತದ್ದೊಂದು ಮಾತುಕತೆ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಎರಡು ದಿನಗಳ ಹಿಂದೆ ಮೈಸೂರು ಹಾಲು ಒಕ್ಕೂಟದ ಚುನಾವಣೆ ನೆಪದಲ್ಲಿ ಎಚ್‌.ವಿಶ್ವನಾಥ್‌, ಎಸ್‌.ಟಿ.ಸೋಮಶೇಖರ್‌ ಸಮ್ಮುಖದಲ್ಲೇ ಜಿ.ಟಿ.ದೇವೇಗೌಡರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆವರನ್ನು ಭೇಟಿ ಮಾಡಿದಾಗ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಚರ್ಚಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಮತ್ತೆ ಆಪರೇಷನ್‌?: ಕಾಂಗ್ರೆಸ್‌ನ 12 ಹಾಗೂ ಜೆಡಿಎಸ್‌ ಇನ್ನೂ ಐವರು ಶಾಸಕರು ಬಿಜೆಪಿಗೆ ಬರಲು ಸಿದ್ಧವಾಗಿದ್ದಾರೆ. ಆದರೆ, ಬಿಜೆಪಿ ನಾಯಕರೇ ತಡೆಯುತ್ತಿದ್ದಾರೆ. ಈಗಾಗಲೇ ಓರ್ವ ಪಕ್ಷೇತರ ಹಾಗೂ 17 ಶಾಸಕರನ್ನು ಸೆಳೆದಿದ್ದು ಅವರಿಗೆ ಅಧಿಕಾರ ನೀಡುವುದು ಸವಾಲಾಗಿದೆ. ಬಿಜೆಪಿಯಲ್ಲೂ 105 ಶಾಸಕರಿದ್ದು ಅವರಿಗೂ ಅಸಮಾಧಾನ ಆಗದಂತೆ ನೋಡಿಕೊಳ್ಳಬೇಕಾಗಿದೆ. ಹೀಗಾಗಿ, ಎಲ್ಲರನ್ನೂ ಸೇರಿಸಿಕೊಳ್ಳುವುದಕ್ಕಿಂತ ತಮಗೆ ರಾಜಕೀಯವಾಗಿ ಅನುಕೂಲವಾಗುವವರನ್ನು ಮಾತ್ರ ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಉಪ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹುಣಸೂರಿನ ಎಚ್‌.ವಿಶ್ವನಾಥ್‌ , ಕೆ.ಆರ್‌. ಪೇಟೆಯ ನಾರಾಯಣಗೌಡ ಇಬ್ಬರೂ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಜಿ.ಟಿ.ದೇವೇಗೌಡರು ಒಂದೊಮ್ಮೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾ ದರೂ ಅವರೂ ರಾಜಕೀಯ ನಿವೃತ್ತಿ ಘೋಷಿಸಲಿದ್ದಾರೆ. ಪುತ್ರನಿಗೆ ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟುಕೊಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಟ್ಟಾರೆ, ಮೈಸೂರು-ಚಾಮ ರಾಜನಗರ ಭಾಗದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಭದ್ರಕೋಟೆ ಒಡೆದು ಶಕ್ತಿ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಆ ಭಾಗದ ಪ್ರಮುಖ ಸಮು ದಾಯದ ನಾಯಕರನ್ನು ಸೆಳೆದು ಚುನಾವಣೆಗೆ ತಮ್ಮದೇ ಅಭ್ಯರ್ಥಿಗಳನ್ನು ನಿಲ್ಲಿಸುವ ಕಾರ್ಯತಂತ್ರದಲ್ಲಿ ತೊಡಗಿದೆ.

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.