ಪುನರ್ವಸತಿಯೇ ದೊಡ್ಡ ಸವಾಲು; ಶಾಶ್ವತ ನೆಲೆ ಒದಗಿಸಿ


Team Udayavani, Aug 14, 2019, 5:11 AM IST

s-27

ರಾಜ್ಯದ 17 ಜಿಲ್ಲೆಗಳ 86 ತಾಲೂಕುಗಳಲ್ಲಿ ಹಿಂದೆಂದೂ ಕಂಡರಿಯದ ಪ್ರವಾಹದಿಂದ 2217 ಗ್ರಾಮಗಳು ಮುಳುಗಡೆಯಾಗಿ 41,915 ಮನೆಗಳು ಕುಸಿದಿವೆ. ಇದೀಗ ರಾಜ್ಯ ಸರ್ಕಾರಕ್ಕೆ ಪುನರ್ವಸತಿ ದೊಡ್ಡ ಸವಾಲಾಗಿದೆ.

ತಕ್ಷಣಕ್ಕೆ 1224 ಆಶ್ರಯ ಕೇಂದ್ರ ತೆರೆದು 3,94,486 ಜನರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಡಲಾಗಿದೆಯಾದರೂ ಅವರಿಗೆ ಶಾಶ್ವತ ನೆಲೆ ಒದಗಿಸಿ ತಲೆ ಮೇಲೆ ಸೂರು ಕಲ್ಪಿಸಬೇಕಾಗಿದೆ.

ಕಳೆದ ವರ್ಷ ಕೊಡಗಿನಲ್ಲಿ ನಡೆದ ಭೂ ಕುಸಿತದಿಂದ ಮನೆ ಕಳೆದು ಕೊಂಡವರಿಗೆ 800 ಮನೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತಾದರೂ ಇನ್ನೂ ಪೂರ್ಣಗೊಂಡಿಲ್ಲ. ಮಾದರಿ ಮನೆ ನಿರ್ಮಾಣ ಮಾಡಿ ತೋರಿಸಿ ಒಂದು ವರ್ಷ ಅವಧಿಯಲ್ಲಿ ಶಾಶ್ವತ ಮನೆ ನಿರ್ಮಿಸಿಕೊಡುವುದಾಗಿ ಹೇಳಲಾಗಿತ್ತು. ಪ್ರತಿ ಮನೆಯ ವೆಚ್ಚ ಹತ್ತು ಲಕ್ಷ ರೂ. ಎಂದು ತಿಳಿಸಲಾಗಿತ್ತು. ಆದರೆ, ಇದುವರೆಗೂ ಪೂರ್ಣಗೊಂಡಿಲ್ಲ.

ಹೀಗಾಗಿ, ಇದೀಗ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾದ ಪ್ರಯತ್ನ ನಡೆಸಬೇಕಾಗಿದೆ. ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಿಳಿಸಿದ್ದಾರಾದರೂ ಅಷ್ಟು ಸುಲಭಕ್ಕೆ ಮನೆ ನಿರ್ಮಾಣವಾಗುವುದಿಲ್ಲ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳನ್ನು ಕ್ರೋಡೀಕರಿಸಿ ಅನುದಾನ ಒಟ್ಟುಗೂಡಿಸಿ ದಕ್ಷ ಹಾಗೂ ಕ್ರಿಯಾಶೀಲ ಅಧಿಕಾರಿಗಳ ತಂಡ ರಚಿಸಿ ವಸತಿ ವ್ಯವಸ್ಥೆ ಕಲ್ಪಿಸುವ ಹೊಣೆಗಾರಿಕೆ ನೀಡಬೇಕಾಗಿದೆ. ವಸತಿ ಕಾಮಗಾರಿಗೆ ಕೆಟಿಟಿಪಿ ಕಾಯ್ದೆಯಿಂದ ವಿನಾಯಿತಿ ಪಡೆದು ತ್ವರಿತಗತಿಯಲ್ಲಿ ಮನೆ ನಿರ್ಮಿಸಿಕೊಡಬೇಕು. ಅದಕ್ಕಾಗಿ ವಿಶೇಷ ಯೋಜನೆ ರೂಪಿಸಬೇಕಾಗಿದೆ. 2217 ಗ್ರಾಮಗಳಲ್ಲಿ ಕಂದಾಯ, ವಸತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಿ ಮನೆ ನಿರ್ಮಿಸುವ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ ಕಾರ್ಯಗತಗೊಳಿಸಬೇಕಾಗಿದೆ.

ಕೊಡಗು ವಿಚಾರದಲ್ಲಿ ಬದಲಿ ಸ್ಥಳದಲ್ಲಿ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಆದರೆ, ಇದೀಗ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಸ್ಥಳೀಯರು ಹೊಲ, ಗದ್ದೆ, ತೋಟ ಹೊಂದಿರುವುದರಿಂದ ಆಯಾ ಗ್ರಾಮಗಳಲ್ಲೇ ಮನೆಗಳ ನಿರ್ಮಾಣ ಆಗಬೇಕಾಗಿದೆ. ಇದು ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲಿನ ಕೆಲಸವೂ ಹೌದು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ ಸಂಪುಟ ವಿಸ್ತರಣೆಗೆ ಪ್ರವಾಹ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆವರು ಒಬ್ಬರೇ ಸ್ಥಳೀಯ ಶಾಸಕರು, ಸಂಸದರು, ಅಧಿಕಾರಿಗಳ ಜತೆಗೂಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಬಗ್ಗೆ ನಿಗಾ ವಹಿಸಿದ್ದಾರೆ. ನಿರಾಶ್ರಿತರಿಗೆ ತಾತ್ಕಾಲಿಕವಾಗಿ 1224 ಆಶ್ರಯ ಕೇಂದ್ರಗಳಲ್ಲಿ ವ್ಯವಸ್ಥೆಯನ್ನೂ ಮಾಡುವಲ್ಲಿ ಮುತುವರ್ಜಿ ವಹಿಸಿದ್ದಾರೆ.

ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ನೀಡಿ ನೀವೇ ಮನೆ ನಿರ್ಮಿಸಿಕೊಳ್ಳಿ ಎಂದರೆ ಈ ಸಂದರ್ಭದಲ್ಲಿ ಕಷ್ಟವಾಗಬಹುದು. ಜತೆಗೆ, ಸರ್ಕಾರದ ವತಿಯಿಂದ ನೀಡುವ ಹಣ ಫ‌ಲಾನುಭವಿಗೆ ತಲುಪುವಲ್ಲಿ ವ್ಯತ್ಯಾಸಗಳೂ ಆಗುವ ಸಾಧ್ಯತೆಯಿದೆ. ಹೀಗಾಗಿ, ಮುಖ್ಯಮಂತ್ರಿಯವರೇ ಖುದ್ದಾಗಿ ಈ ಬಗ್ಗೆ ಕಾಳಜಿ ವಹಿಸಿ ವಸತಿ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಅನುದಾನದಡಿ ಪಕ್ಕಾ ಮನೆ ನಿರ್ಮಿಸಿಕೊಡುವ ಬಗ್ಗೆ ಕ್ರಮ ಕೈಗೊಂಡರೆ ಸೂಕ್ತವಾಗಬಹುದು.

ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಿಳಿಸಿದ್ದಾರಾದರೂ ಅಷ್ಟು ಸುಲಭಕ್ಕೆ ಮನೆ ನಿರ್ಮಾಣವಾಗುವುದಿಲ್ಲ.

ಟಾಪ್ ನ್ಯೂಸ್

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.