ಐಎಂಎ: ರೋಷನ್‌ ಬೇಗ್‌ ಮತ್ತೊಮ್ಮೆ ವಿಚಾರಣೆಗೆ ಗೈರು


Team Udayavani, Aug 14, 2019, 3:07 AM IST

Roshan Baig

ಬೆಂಗಳೂರು: ಅನರ್ಹಗೊಂಡಿರುವ ಶಾಸಕ ಆರ್‌.ರೋಷನ್‌ ಬೇಗ್‌ ಬಹುಕೋಟಿ ಐಎಂಎ ವಂಚನೆ ಪ್ರಕರಣ ತನಿಖೆ ಮಂಗಳವಾರ ಮತ್ತೊಮ್ಮೆ ವಿಚಾರಣೆಗೆ ಗೈರಾಗಿದ್ದಾರೆ. ಪ್ರಕರಣ ಸಂಬಂಧ ಎಸ್‌ಐಟಿ ಜು. 31ರಂದು ನೋಟಿಸ್‌ ಜಾರಿ ಆ.13ರಂದು ಹಾಜರಾಗುವಂತೆ ಸೂಚಿಸಿತ್ತು. ಆದರೆ, ರೋಷನ್‌ ಬೇಗ್‌ ಗೈರಾಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕವನ್ನು ಸದ್ಯದಲ್ಲೇ ನಿಗದಿ ಪಡಿಸಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ರೋಷನ್‌ ಬೇಗ್‌ ಅವರಿಗೆ 400 ಕೋಟಿ ರೂ. ಕೊಟ್ಟಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ ತಾನೇ ಬಿಡುಗಡೆ ಮಾಡಿದ ಆಡಿಯೋ ಮತ್ತು ವಿಡಿಯೋಗಳಲ್ಲಿ ಆರೋಪಿಸಿದ್ದ. ಈ ಸಂಬಂಧ ಎಸ್‌ಐಟಿ ಜು. 9ರಂದು ಮೊದಲ ಬಾರಿಗೆ ನೋಟಿಸ್‌ ಕೊಟ್ಟು, 11ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ, ಅನಾರೋಗ್ಯ ಸಮಸ್ಯೆ, ಹಜ್‌ ಯಾತ್ರೆ ಕಾರಣ ಹೇಳಿ ಗೈರಾಗಿದ್ದರು. ಹೀಗಾಗಿ ಎರಡನೇ ಬಾರಿ ನೋಟಿಸ್‌ ಜಾರಿ ಮಾಡಿ ಜು.17ಕ್ಕೆ ಸಮಯ ನಿಗದಿ ಮಾಡಿತ್ತು.

ಜು. 16ರ ತಡರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು, ಒಂದು ದಿನ ವಿಚಾರಣೆ ನಡೆಸಿ, ಮೂರನೇ ನೋಟಿಸ್‌ ಕೊಟ್ಟು ಜು. 19ಕ್ಕೆ ಬರಲು ಸೂಚಿಸಿದ್ದರು. ಅಂದೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ನಾಲ್ಕನೇ ನೋಟಿಸ್‌ ಕೊಟ್ಟ ಜು.29ಕ್ಕೆ ಹಾಜರಲು ಸೂಚಿಸಿತ್ತು. ಆದರೆ, ಬಿ.ಎಸ್‌.ಯಡಿಯೂರಪ್ಪ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಎರಡು ದಿನಗಳ ವಿನಾಯಿತಿ ನೀಡಿದ್ದ ಎಸ್‌ಐಟಿ ಜುಲೈ 31ರಂದು ಹಾಜರಾಗವಂತೆ ಹೇಳಿತ್ತು. ಆದರೆ, ಈ ವೇಳೆ ಅನಾರೋಗ್ಯ ಕಾರಣ ಹೇಳಿ ಗೈರಾಗಿದ್ದ ರೋಷನ್‌ ಬೇಗ್‌ ಎರಡು ವಾರಗಳ ಗಡುವು ಕೇಳಿದ್ದರು. ಐದನೇ ಬಾರಿಗೆ ನೋಟಿಸ್‌ ಜಾರಿ ಮಾಡಿ ಆ.13ರಕ್ಕೆ ನಿಗದಿ ಮಾಡಿತ್ತು. ಆದರೂ ಗೈರಾಗಿದ್ದಾರೆ ಎಂದು ಎಸ್‌ಐಟಿ ತಿಳಿಸಿದೆ.

ಮನ್ಸೂರ್‌ ಖಾನ್‌ಗೆ ಚಿಕಿತ್ಸೆ: ಮನ್ಸೂರ್‌ ಖಾನ್‌ ಆ.16ರವರೆಗೆ ಎಸ್‌ಐಟಿ ವಶದಲ್ಲಿದ್ದು, ಆತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಕೊಡಿಸಬೇಕಾಗಿದೆ. ಹೀಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ಹಿರಿಯ ವೈದ್ಯರನ್ನು ನೇಮಿಸಲಾಗಿದ್ದು, ಪ್ರತಿನಿತ್ಯ ಆತನಿಗೆ ಚಿಕಿತ್ಸೆ ಕೊಡುತ್ತಿದ್ದಾರೆ. ಜತೆಗೆ ಒಬ್ಬ ವೈದ್ಯರನ್ನು ಆತನ ಬಳಿಯೇ ಇರಿಸಿಕೊಳ್ಳಲಾಗಿದೆ ಎಂದು ಎಸ್‌ಐಟಿ ಪೊಲೀಸರು ಹೇಳಿದರು.

ಐಎಂಎ ಉದ್ಯೋಗಿಗಳಿಗೆ ದಾಖಲೆಗಳ ವಿತರಣೆ: ಐಎಂಎ ಸಂಸ್ಥೆಯ ಶಿವಾಜಿನಗರ, ಜಯನಗರ ಸೇರಿ ವಿವಿಧ ಶಾಖೆಗಳಲ್ಲಿ ಕೆಲಸ ಮಾಡುತ್ತಿದ್ದ ನೂರಾರು ಮಂದಿ ನೌಕರರ ಅಂಕಪಟ್ಟಿ ಸೇರಿ ಕೆಲ ಮೂಲ ದಾಖಲೆಗಳನ್ನು ಆರೋಪಿ ಮನ್ಸೂರ್‌ ಖಾನ್‌ ತನ್ನ ಬಳಿಯೇ ಇಟ್ಟುಕೊಂಡಿದ್ದ. ಪ್ರಕರಣ ಬೆಳಕಿಗೆ ಬಂದ ನಂತರ ಸಂಸ್ಥೆಯ ಕಚೇರಿಗಳ ಮೇಲೆ ದಾಳಿ ನಡೆಸಿದ ಎಸ್‌ಐಟಿ ಅಧಿಕಾರಿಗಳು ಎಲ್ಲ ನೌಕರರ ದಾಖಲೆಗಳನ್ನು ಜಪ್ತಿ ಮಾಡಿತ್ತು.

ಈ ವೇಳೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ದಾಖಲೆಗಳನ್ನು ಹಿಂದಿರುಗಿಸುವಂತೆ ಸಂಸ್ಥೆಯ ಸಿಬ್ಬಂದಿ ತನಿಖಾಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್‌ ಅನುಮತಿ ಪಡೆದು, ಎಲ್ಲ ಸಿಬ್ಬಂದಿಯ ಅಂಕಪಟ್ಟಿ ಹಾಗೂ ಇತರೆ ಮೂಲ ದಾಖಲೆಗಳನ್ನು ವಾಪಸ್‌ ಕೊಡಲಾಗುತ್ತಿದೆ. ಅದಕ್ಕಾಗಿ ಡಿವೈಎಸ್‌ಪಿ ದರ್ಜೆಯ ಅಧಿಕಾರಿಯೊಬ್ಬರನ್ನು ನೇಮಿಸಿದ್ದು, ದೃಢೀಕೃತ ದಾಖಲೆ ಪರಿಶೀಲಿಸಿ ವಿತರಣೆ ಮಾಡಲಾಗುತ್ತಿದೆ ಎಸ್‌ಐಟಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

19-mng

Mangaluru: ಮೂಗುತಿ ರಿಪೇರಿಗೆ ಬಂದಾಕೆ ಚಿನ್ನ ಎಗರಿಸಿದಳು

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

CM, ಡಿಸಿಎಂ ಇಬ್ಬರೇ ನಿರ್ಧಾರ ತೆಗೆದುಕೊಳ್ಳಬಾರದು: ಡಾ.ಜಿ. ಪರಮೇಶ್ವರ್‌

CM, ಡಿಸಿಎಂ ಇಬ್ಬರೇ ನಿರ್ಧಾರ ತೆಗೆದುಕೊಳ್ಳಬಾರದು: ಡಾ.ಜಿ. ಪರಮೇಶ್ವರ್‌

18

Puttur: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Violation of road rules: ಸದಾಶಿವನಗರಠಾಣೆ ವ್ಯಾಪ್ತಿಯಲ್ಲೇ 5 ತಿಂಗಳಲ್ಲಿ 1 ಲಕ್ಷ ಕೇಸ್‌!

Bengaluru: ನಟ ಧ್ರುವ ಸರ್ಜಾ ಜಿಮ್‌ ತರಬೇತುದಾರನ ಮೇಲೆ ಹಲ್ಲೆ

Bengaluru: ನಟ ಧ್ರುವ ಸರ್ಜಾ ಜಿಮ್‌ ತರಬೇತುದಾರನ ಮೇಲೆ ಹಲ್ಲೆ

10

Rave party: ನಟಿ ಹೇಮಾ ಸೇರಿ 8 ಮಂದಿ ವಿಚಾರಣೆಗೆ ಗೈರು

Arrested: ಹಿಟ್‌ ಆ್ಯಂಡ್‌ ರನ್‌ ಕೇಸ್‌; 4 ತಿಂಗಳ ಬಳಿಕ ಆರೋಪಿಗಳ ಸೆರೆ

Arrested: ಹಿಟ್‌ ಆ್ಯಂಡ್‌ ರನ್‌ ಕೇಸ್‌; 4 ತಿಂಗಳ ಬಳಿಕ ಆರೋಪಿಗಳ ಸೆರೆ

7

Bengaluru: ಮೊಬೈಲ್‌ ದೋಚುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qewqewqe

Bagalkote; ಬಾಗಿಲು ತೆರೆಯದ‌ ಮಹಿಳೆ: ಆ್ಯಸಿಡ್ ಎರಚಿದ ಪ್ರೇಮಿ!

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

19-mng

Mangaluru: ಮೂಗುತಿ ರಿಪೇರಿಗೆ ಬಂದಾಕೆ ಚಿನ್ನ ಎಗರಿಸಿದಳು

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

Parameshwara ಮಾತು ಕೇಳಿಯೇ ತೀರ್ಮಾನ ಮಾಡುತ್ತೇವೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.