ಕೊಲ್ಲೂರು-ಹೊಸನಗರ ಸಂಪರ್ಕ ಕಡಿತ?


Team Udayavani, Aug 14, 2019, 6:30 AM IST

kollur

ಕೊಲ್ಲೂರು: ನಾಗೋಡಿಯ ಬಳಿ ಭೂ ಕುಸಿತದಿಂದ ರಾ. ಹೆದ್ದಾರಿಯ ಕಾಂಕ್ರಿಟ್ ರಸ್ತೆಯ ಅಡಿ ಭಾಗವು ಕುಸಿದಿದ್ದು ಈ ಮಾರ್ಗವಾಗಿ ಘನ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

ಮುಖ್ಯರಸ್ತೆಯ ತಿರುವಿನ ಒಂದು ಪಾರ್ಶ್ವದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯು ಬಹುತೇಕ ಕುಸಿದಿದ್ದು ಇದೇ ರೀತಿ ಮಳೆ ಮುಂದುವರಿದಲ್ಲಿ ಸಂಪೂರ್ಣ ಕುಸಿಯುವ ಭೀತಿ ಇದೆ. ಕೊಲ್ಲೂರು ಹಾಗೂ ಶಿವಮೊಗ್ಗ ನಡುವಿನ ನೇರ ಸಂಪರ್ಕದ ಈ ಮಾರ್ಗದಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದೆ. ಶಿವಮೊಗ್ಗ ಸಹಿತ ಇನ್ನಿತರ ಕಡೆಗಳಿಂದ ತರಕಾರಿ ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದು ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವುದು ಸುತ್ತಿಬಳಸಿ ಸಾಗಬೇಕಾದ ಸಂದಿಗ್ಧ ಪರಿಸ್ಥಿತಿಗೆ ಬಂದು ಮುಟ್ಟಿದೆ.

ಭಾರೀ ಮಳೆಯಿಂದ ರಸ್ತೆ ದುರಸ್ತಿಗೆ ಅಡ್ಡಿ

ಕಳೆದ 10 ದಿನಗಳಿಂದ ಕೊಲ್ಲೂರು ಸಹಿತ ನಾಗೋಡಿ, ನಿಟ್ಟೂರು ಪ್ರದೇಶಗಳಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿರುವುದರಿಂದ ರಸ್ತೆ ದುರಸ್ಥಿ ಕಾರ್ಯ ಇಲಾಖೆಗೆ ಸವಾಲಾಗಿದೆ. ಕೊಲ್ಲೂರು ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬಸ್ಸು ಸಂಚಾರದ ನಿರ್ಬಂಧ ದಿಂದಾಗಿ ಇತರ ಸಂಪರ್ಕ ಮಾರ್ಗಗಳನ್ನು ಮೊರೆ ಹೋಗಬೇಕಾಗಿದೆ.

ಕೊಲ್ಲೂರು-ನಾಗೋಡಿ ಮುಖ್ಯರಸ್ತೆ ಸಂಪರ್ಕ ಕೊಂಡಿ ಕಡಿತ ?

ದಿನೇ ದಿನೇ ಹೆಚ್ಚುತ್ತಿರುವ ಮಳೆ ಯಿಂದಾಗಿ ಒಂದೆಡೆ ಮೊಡ್ಡೋಡಿ ರಸ್ತೆಯು ಕುಸಿದಿದ್ದು ಆ ಮಾರ್ಗವಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿರುವ ಈ ದಿಸೆಯಲ್ಲಿ ನಾಗೋಡಿ ಬಳಿ ರಸ್ತೆ ಕುಸಿತ ವಾಗಿರುವುದು ನಿತ್ಯ ಪ್ರಯಾಣಿಕರಿಗೆ ಒಂದು ರೀತಿಯ ಗೋಳಾಗಿದೆ. ನಾಗೋಡಿ ಬಳಿ ಬಸ್ಸಿನಿಂದ ಇಳಿದು ಕುಸಿದ ರಸ್ತೆಯನ್ನು ದಾಟಿ ಶಿವಮೊಗ್ಗ ಕಡೆ ಹೋಗುವ ಬಸ್ಸನ್ನು ಏರಿ ಸಾಗಬೇಕಾದ ಪರಿಸ್ಥಿತಿ ಕಿರಿಕಿರಿ ಉಂಟುಮಾಡಿದೆ.

ತಾಂತ್ರಿಕವಾಗಿ ಕೊಲ್ಲೂರು ಸೀಮಾ ರೇಖೆಯವರೆಗೆ ಲೋಕೋಪಯೋಗಿ ಇಲಾಖೆಯ ಸುಪರ್ದಿಯಲ್ಲಿರುವ ಮುಖ್ಯರಸ್ತೆಯು ಅನಂತರ ರಾ. ಹೆದ್ದಾರಿ ಇಲಾಖೆಗೆ ಸೇರ್ಪಡೆ ಗೊಂಡಿರುವುದರಿಂದ ಕೊಲ್ಲೂರು ಪೊಲೀಸರು ಲೋಕೋಪಯೋಗಿ ಸಹಿತ ರಾ. ಹೆದ್ದಾರಿ ವಿಭಾಗಕ್ಕೆ ಮನವಿ ಸಲ್ಲಿಸಿದ್ದು ಕುಸಿದ ರಸ್ತೆಯ ದುರಸ್ತಿಗೊಳಿಸುವಂತೆ ಗಮನಸೆಳೆದಿದ್ದಾರೆ. ಹೊಸನಗರ ಹಾಗೂ ಕೊಲ್ಲೂರು ಪೊಲೀಸರು ಕುಸಿದ ರಸ್ತೆಯ 2 ಪ್ರತ್ಯೇಕ ಕಡೆಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದು ದ್ವಿಚಕ್ರವಾಹನ ಸಹಿತ ಕಾರುಗಳ ಸಂಚಾರಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಅನುಮತಿ ನೀಡಿದ್ದಾರೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.