ರನ್ ವೇನಲ್ಲಿ ಬೀದಿನಾಯಿಗಳನ್ನು ಕಂಡು ಪೈಲಟ್ ಕಂಗಾಲು! ಮುಂದೇನಾಯ್ತು?


Team Udayavani, Aug 14, 2019, 8:29 AM IST

Street-Dogs-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪಣಜಿ: ಬೀದಿನಾಯಿಗಳಿಂದ ವಾಹನ ಸವಾರರು ಪಡುವ ಪಾಡು ಅಷ್ಟಿಷ್ಟಲ್ಲ. ಅದರಲ್ಲೂ ಕತ್ತಲೆಯ ಸಮಯದಲ್ಲಿ ಏಕಾಏಕಿ ರಸ್ತೆಗೆ ನುಗ್ಗುವ ಬೀದಿನಾಯಿಗಳ ಕಾಟದಿಂದ ಅದೆಷ್ಟೋ ಅಪಘಾತಗಳು ನಮ್ಮಲ್ಲಿ ಪ್ರತಿನಿತ್ಯ ಸಂಭವಿಸುತ್ತಿರುತ್ತದೆ.

ಆದರೆ ಈ ಬೀದಿ ನಾಯಿಗಳು ಆಗಸದಲ್ಲಿ ಹಾರುವ ವಿಮಾನಕ್ಕೂ ಕಾಟಕೊಡುತ್ತವೆಂದರೆ ನೀವು ನಂಬುತ್ತೀರಾ? ಇಂತಹದ್ದೊಂದು ವಿಚಿತ್ರ ಘಟನೆ ಗೋವಾದ ಡಾಬೋಲಿಮ್ ವಿಮಾನ ನಿಲ್ದಾಣದಲ್ಲಿ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಎಐ 033 ವಿಮಾನವು ಮುಂಬಯಿಂದ ಆಗಮಿಸಿ ಇನ್ನೇನು ಗೋವಾದ ಡಾಬೋಲಿಮ್ ವಿಮಾನ ನಿಲ್ದಾಣದ ರನ್ ವೇನಲ್ಲಿ ಇಳಿಯಬೇಕಿತ್ತು. ಆದರೆ ಅಷ್ಟರಲ್ಲಿ ವಿಮಾನದ ಪೈಲಟ್ ಗೆ ರನ್ ವೇನಲ್ಲಿ ಬೀದಿ ನಾಯಿಗಳ ಒಂದು ಹಿಂಡು ಕಾಣಿಸುತ್ತದೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲಟ್ ವಿಮಾನವನ್ನು ಇಳಿಸದೆ ಸುಮಾರು 15 ನಿಮಿಷಗಳ ಕಾಲ ಆಗಸದಲ್ಲೇ ಹಾರಾಡಿಸುತ್ತಾರೆ ಮತ್ತು ನಿಲ್ದಾಣದ ನಿಯಂತ್ರಣ ಕೊಠಡಿಗೆ ಈ ಕುರಿತಾಗಿ ಮಾಹಿತಿಯನ್ನು ನೀಡುತ್ತಾರೆ.

ತಕ್ಷಣವೇ ನಿಲ್ದಾಣದ ಅಧಿಕಾರಿಗಳು ಬೀದಿ ನಾಯಿಗಳನ್ನು ರನ್ ವೇ ಪರಿಸರದಿಂದ ಓಡಿಸಿ ವಿಮಾನ ಇಳಿಯಲು ಅವಕಾಶ ಮಾಡಿಕೊಡುತ್ತಾರೆ. ಇಷ್ಟೆಲ್ಲಾ ರಾಮಾಯಣ ಮುಗಿಯುವಾಗ ಸುಮಾರು 15 ನಿಮಿಷಗಳು ಕಳೆದುಹೋಗಿತ್ತು!

ಅಂತೂ 15 ನಿಮಿಷಗಳ ಕಾಲ ವಿಮಾನದಲ್ಲಿದ್ದ ಪ್ರಯಾಣಿಕರು ಏನಾಗಿರಬಹುದೆಂಬ ಆತಂಕದಲ್ಲಿ ಸಮಯಕಳೆದರೆ, ಇತ್ತ ಈ ಬೀದಿನಾಯಿಗಳು ನಾವು ಆಕಾಶದಲ್ಲಿ ಹಾರಾಡುವ ವಿಮಾನಕ್ಕೇ ಕಾಟ ಕೊಟ್ಟೆವು ಎಂದು ಹಲ್ಲು ಕಿರಿಯುತ್ತಾ ಹೋಗಿರಬಹುದು ಅಲ್ವಾ?

ಈ ಎಲ್ಲಾ ವಿಚಾರವನ್ನು ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ತಮ್ಮ ಫೇಸ್ಬುಕ್ ಪೋಸ್ಟ್ ಮೂಲಕ ಹಾಕಿಕೊಂಡಿದ್ದಾರೆ. ಮತ್ತು ಈ ಪೋಸ್ಟ್ ನ ಸ್ಕ್ರೀನ್ ಶಾಟ್ ಅನ್ನು ಗೋವಾದ ಮಾಜೀ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ದಿಗಂಬರ ಕಾಮತ್ ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದು, ವಿಮಾನಯಾನ ಮಹಾನಿರ್ದೇಶಕರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ವಿಮಾನ ಪ್ರಯಾಣಿಕರ ಸುರಕ್ಷತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದು ಕಾಮತ್ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.