#HappyBirthdayBeta ಟ್ರೆಂಡ್ ಆಯ್ತು ಪಾಕ್ ಗೆ ಭಾರತೀಯರ ಸ್ವಾತಂತ್ರ್ಯ ಶುಭಾಶಯ!


Team Udayavani, Aug 14, 2019, 6:30 PM IST

Indo-Pak-726

ನವದೆಹಲಿ: 1947ರಲ್ಲಿ ನಮ್ಮದೇ ಭೂಭಾಗದಿಂದ ಬೇರೆಯಾಗಿ ಹೊಸ ರಾಷ್ಟ್ರವಾಗಿ ಉದಯಿಸಿದ್ದ ಪಾಕಿಸ್ಥಾನಕ್ಕೆ ಇಂದು 73ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಕಳೆದ ಕೆಲವು ತಿಂಗಳುಗಳಿಂದ ಭಾರತ ಮತ್ತು ಪಾಕಿಸ್ಥಾನದ ಸಂಬಂಧ ಹದಗೆಟ್ಟಿದೆ. ಪಾಕಿಸ್ಥಾನವನ್ನು ಮತ್ತು ಪಾಕಿಸ್ಥಾನೀಯರನ್ನು ಕಾಲೆಳೆಯುವ ಯಾವ ಅವಕಾಶವನ್ನೂ ಭಾರತೀರು ಕಳೆದುಕೊಳ್ಳಲು ಬಯಸುವುದಿಲ್ಲ. ಹಾಗೆಯೇ ಪಾಕಿಸ್ಥಾನೀಯರೂ ಸಹ ಅವಕಾಶ ಸಿಕ್ಕಾಗಲೆಲ್ಲಾ ಭಾರತೀಯರ ಕಾಲೆಳೆಯುತ್ತಲೇ ಇರುತ್ತಾರೆ.

ವಿಷಯ ಹೀಗಿರುತ್ತಾ, ಭಾರತಕ್ಕಿಂತ ಒಂದು ದಿನ ಮುಂಚಿತವಾಗಿ ಸ್ವಾತಂತ್ರ್ಯೋತ್ಸವ ಆಚರಿಸಿಕೊಳ್ಳುತ್ತಿರುವ ಪಾಕಿಸ್ಥಾನಕ್ಕೆ ಭಾರತೀಯರು ಶುಭಾಶಯ ಕೋರುತ್ತಿದ್ದಾರೆ. ಆದರೆ ಅದರಲ್ಲೂ ಒಂದು ವಿಶೇಷತೆ ಇದೆ. #HappyBirthdayBeta ಎಂಬ ಹ್ಯಾಷ್ ಟ್ಯಾಗ್ ಬಳಸಿ ಟ್ವಿಟ್ಟರ್ ನಲ್ಲಿ ಪಾಕಿಸ್ಥಾನಕ್ಕೆ ಸ್ವಾತಂತ್ರ್ಯ ಶುಭಾಶಯ ಕೋರುವ ಸಂದೇಶಗಳು ಹರಿದಾಡುತ್ತಿವೆ. ವಿಶೇಷವೆಂದರೆ ಈ ಹ್ಯಾಷ್ ಟ್ಯಾಗ್ ದೇಶದ ಇಂದಿನ ಟ್ರೆಂಡಿಂಗ್ ಹ್ಯಾಷ್ ಟ್ಯಾಗ್ ಗಳಲ್ಲಿ ಐದನೇ ಸ್ಥಾನದಲ್ಲಿದೆ! ಈ ಹ್ಯಾಷ್ ಟ್ಯಾಗ್ ನಲ್ಲಿ ಇದುವರೆಗೆ 13 ಸಾವಿರಕ್ಕೂಹೆಚ್ಚು ಟ್ವೀಟ್ ಗಳು ಪೋಸ್ಟ್ ಆಗಲ್ಪಟ್ಟಿವೆ.

ಈ ಬಾರಿಯ ಸ್ವಾತಂತ್ರ್ಯ ದಿನವನ್ನು ಪಾಕಿಸ್ಥಾನದಲ್ಲಿ ‘ಕಾಶ್ಮೀರ ಸಾರ್ವಭೌಮತೆ’ ದಿನವನ್ನಾಗಿ ಆಚರಿಸಲಾಗುತ್ತಿದೆ. ಕಾಶ್ಮೀರಕ್ಕೆ ವಿಶೇಷ ಅಧಿಕಾರವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ಭಾರತ ಸರಕಾರ ರದ್ದುಗೊಳಿಸಿದ್ದನ್ನು ವಿರೋಧಿಸಿ ಪಾಕಿಸ್ಥಾನದಲ್ಲಿ ಕಾಶ್ಮೀರ ಬೆಂಬಲವಾಗಿ ಸಾರ್ವಭೌಮತಾ ದಿನಾಚರಣೆ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ‘ಕಾಶ್ಮೀರ್ ಬನೇಗಾ ಪಾಕಿಸ್ಥಾನ್’ (ಕಾಶ್ಮೀರ ಪಾಕಿಸ್ಥಾನಕ್ಕೆ ಸೇರುತ್ತದೆ) ಎಂಬ ತಲೆಬರಹವುಳ್ಳ ಬರಹಗಳನ್ನು ಇಂದಿನ ಸಾರ್ವಭಾಮತೆ ದಿನಾಚರಣೆಯ ಸಂದರ್ಭದಲ್ಲಿ ಬಳಸಲಾಗುತ್ತಿದೆ.

ಪಾಕಿಸ್ಥಾನದ ಈ ಅತಿರೇಕದ ವರ್ತನೆಗೂ ಟ್ವಿಟ್ಟರ್ ನಲ್ಲಿ ಭಾರತೀಯರು ಖಾರವಾದ ಪ್ರತಿಕ್ರಿಯೆ ನೀಡುತ್ತಿದ್ದಾರೆ. ‘ಹುಟ್ಟು ಹಬ್ಬದ ಶುಭಾಶಯಗಳು ಮಗನೇ, ನಮ್ಮಂತಹ ಅಪ್ಪನನ್ನು ಪಡೆಯಲು ನೀನು ಪುಣ್ಯ ಮಾಡಿರಬೇಕು’ ಎಂದು ಕೆಲವು ಟ್ವಿಟ್ಟರಿಗರು ಪಾಕಿಸ್ಥಾನಕ್ಕೆ ಸ್ವಾತಂತ್ರ್ಯದ ಶುಭಾಶಯ ಕೋರಿದ್ದಾರೆ.

ಇದಲ್ಲದೇ #BalochistanSolidarityDay ಮತ್ತು #14AugustBlackDay ಎಂಬ ಹ್ಯಾಷ್ ಟ್ಯಾಗ್ ಗಳೂ ಸಹ ಟ್ವಿಟ್ಟರ್ ನಲ್ಲಿ ಸದ್ದುಮಾಡುತ್ತಿವೆ. ಇವೆರಡೂ ಹ್ಯಾಷ್ ಟ್ಯಾಗ್ ಗಳಲ್ಲಿ ಇದುವರೆಗೂ ಕ್ರಮವಾಗಿ 1 ಲಕ್ಷ ಮತ್ತು 54 ಸಾವಿರ ಟ್ವೀಟ್ ಗಳು ಪೋಸ್ಟ್ ಮಾಡಲ್ಪಟ್ಟಿವೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.