ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Aug 15, 2019, 5:35 AM IST

Crime-545

ಹಲ್ಲೆಮಾಡಿ ದರೋಡೆ ಪ್ರಕರಣ : ಇನ್ನೋರ್ವನ ಬಂಧನ
ಕಾಸರಗೋಡು: ಖಾಸಗಿ ಬಸ್‌ ಸಿಬಂದಿ, ಮಧೂರು ಪಟ್ಲ ರಸ್ತೆ ಬಳಿ ನಿವಾಸಿ ನವೀನ್‌ ಕುಮಾರ್‌(26) ಅವರಿಗೆ ಹಲ್ಲೆ ಮಾಡಿ 5,000 ಸಾವಿರ ರೂ. ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿಯತ್ತಡ್ಕ ನ್ಯಾಶನಲ್‌ ನಗರದ ಮೊಹಮ್ಮದ್‌ ಸುಹೈಲ್‌ ಯಾನೆ ಇಕ್ಕು(22) ನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಈ ಹಿಂದೆಯೇ ಬಂಧಿಸಲಾಗಿತ್ತು.

ಜಾನುವಾರು ಸಾಗಾಟಗಾರರ ದರೋಡೆ ಪ್ರಕರಣ : ಇಬ್ಬರ ಬಂಧನ
ಬದಿಯಡ್ಕ: ಜಾನುವಾರು ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ತಡೆದು ನಿಲ್ಲಿಸಿ 50 ಸಾವಿರ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಯನಡ್ಕ ನಿವಾಸಿಗಳಾದ ಗಣೇಶ್‌(25) ಮತ್ತು ರಾಗೇಶ್‌(21)ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

2019ರ ಜೂನ್‌ 24ರಂದು ಪಿಕ್‌ಅಪ್‌ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪುತ್ತೂರು ನಿವಾಸಿ ಹಂಸ ಹಾಗು ಸಂಬಂಧಿಕ ಅಲ್ತಾಫ್‌ ಅವರನ್ನು ಅಡ್ಯನಡ್ಕ ಮಂಜನಡ್ಕದಲ್ಲಿ ತಡೆದು ನಿಲ್ಲಿಸಿ ಅವರ ಕೈಯಲ್ಲಿದ್ದ 50 ಸಾವಿರ ರೂ. ದರೋಡೆಗೈದು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದರೆಂದು ದೂರು ನೀಡಲಾಗಿತ್ತು. ಅದರಂತೆ ಬಂಧಿಸಲಾಗಿದೆ.

ವಂಚನೆ ಪ್ರಕರಣ : ಬಂಧನ
ಕಾಸರಗೋಡು: ಖ್ಯಾತ ಕಂಪೆನಿಗಳ ಇಲೆಕ್ಟೊÅàನಿಕ್ಸ್‌ ಸಾಮಾಗ್ರಿಗಳನ್ನು ಕಡಿಮೆ ಬೆಲೆಗೆ ತಲುಪಿಸುವುದಾಗಿ ನಂಬಿಸಿ ಹಲವರಿಂದ ಮುಂಗಡ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಚಿತ್ತಾರಿಕ್ಕಲ್‌ ಮಾನಂತವಾಡಿ ಕಾಪಾಟ್‌ಮಲೆ ನಿವಾಸಿ ಬೆನ್ನಿ(38)ಯನ್ನು ಚಿತ್ತಾರಿಕ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಹಲವರಿಂದ 500 ರೂ.ಯಿಂದ 2000 ರೂ. ತನಕ ಪಡೆದು ವಂಚಿಸಿದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.

ಮದ್ದು ಗುಂಡು ಪತ್ತೆಯಾದ ಮನೆ ಮಾಲಕನಿಗಾಗಿ ಶೋಧ
ಮಂಜೇಶ್ವರ: ಬದಿಯಡ್ಕ ಸಮೀಪದ ಚರ್ಲಡ್ಕ ಗೋಳಿಯಡಿ ನಿವಾಸಿ ಅಬ್ದುಲ್ಲ ಅವರ ಪುತ್ರ ಸಿರಾಜುದ್ದೀನ್‌(40) ಅವರಿಗೆ ಗುಂಡೆಸೆದ ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಪ್ರಸ್ತುತ ಎರ್ನಾಕುಳಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿರಾಜುದ್ದೀನ್‌ನಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಕಾರಿನಿಂದ ಇಳಿದು ಅಂಗಡಿಯೊಂದಕ್ಕೆ ಪ್ರವೇಶಿಸುತ್ತಿದ್ದಂತೆ ಗುಂಡು ತಗಲಿದೆ ಎಂದೂ, ಆದರೆ ಅದು ಎಲ್ಲಿ ಎಂಬುವುದು ನೆನಪಿಲ್ಲವೆಂದು ಸಿರಾಜುದ್ದೀನ್‌ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮೀಯಪದವು ಅಡ್ಕತ್ತಗುರಿ ನಿವಾಸಿ ಅಬ್ದುಲ್‌ ರಹ್ಮಾನ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಅಬ್ದುಲ್‌ ರಹ್ಮಾನ್‌ನ ಮನೆಗೆ ಆ.8 ರಂದು ರಾತ್ರಿ ಮಂಜೇಶ್ವರ ಪೊಲೀಸರು ದಾಳಿ ನಡೆಸಿದ್ದು, ಮನೆಯ ಬೆಡ್‌ ರೂಂನ ಮಂಚದಡಿ ಬಚ್ಚಿಡಲಾಗಿದ್ದ 20 ಗುಂಡುಗಳನ್ನು ಹಾಗು 14 ಗುಂಡುಗಳ ಖಾಲಿ ಕವಚವನ್ನು ವಶಪಡಿಸಿಕೊಂಡಿದ್ದರು. ಆದರೆ ರಿವಾಲ್ವರ್‌ ಪತ್ತೆಯಾಗಿರಲಿಲ್ಲ.

ಗಾಂಜಾ ಸೇದುತ್ತಿದ್ದ ಇಬ್ಬರ ಬಂಧನ
ಮಂಜೇಶ್ವರ: ಗಾಂಜಾ ಸೇದುತ್ತಿದ್ದ ಪತ್ವಾಡಿಯ ಕಲಂದರ್‌ ಮಂಜಿಲ್‌ನ ಕಲಂದರ್‌ ಮೊಹಮ್ಮದ್‌ ಶಾ(34) ಮತ್ತು ಉಪ್ಪಳ ಸಫೀನ ಮಂಜಿಲ್‌ನ ಮೊಹಮ್ಮದ್‌ ಯು.ಐ(42)ನನ್ನು ಮಂಜೇಶ್ವರ ಪೊಲೀಸರು ಹಿದಾಯತ್‌ನಗರದ ಬಸ್‌ ನಿಲ್ದಾಣ ಪರಿಸರದಿಂದ ಬಂಧಿಸಿದ್ದಾರೆ.

ಲೈಂಗಿಕ ಕಿರುಕುಳ ಯತ್ನ: ವೃದ್ಧ ತಪ್ಪಿತಸ್ಥ
ಕಾಸರಗೋಡು: ಎಂಟು ವರ್ಷದ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಡಿ ಕಿಳಕ್ಕೆಮೂಲೆ ಹೌಸ್‌ನ ಕುಂಞಿಕಣ್ಣ ಪೂಜಾರಿ (79) ತಪ್ಪಿತಸ್ಥನೆಂದು ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ (1) ತೀರ್ಪು ನೀಡಿದೆ. 2015ರ ಅ. 21 ಮತ್ತು 22ರಂದು ಮೂರನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದಾಗಿ ವಿದ್ಯಾನಗರ ಪೊಲೀಸರು ವೃದ್ಧನ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಕೇಸು ದಾಖಲಿಸಿದ್ದರು.

 

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.