ಮಳೆಗೆ ಮರುಗಿದ “ರಡ್ಡ್ ಎಕ್ರೆ”
Team Udayavani, Aug 15, 2019, 5:45 AM IST
ಭಾರೀ ಮಳೆಯ ಕಾರಣದಿಂದ ಕೋಸ್ಟಲ್ವುಡ್ ಕೂಡ ಮರುಗಿದ್ದು, ತುಳು ಸಿನೆಮಾದ ಆಡಿಯೋ ರಿಲೀಸ್ ಅನ್ನು ಮುಂದೂಡಿದೆ. ರಾಜ್ಯದಲ್ಲಿ ಹಾಗೂ ದ.ಕ. ಜಿಲ್ಲೆಯ ವಿವಿಧೆಡೆ ನೆರೆ ನೀರು ವ್ಯಾಪಿಸಿ ನೂರಾರು ಜನರು ಸಂಕಷ್ಟ ಅನುಭವಿಸುವ ದೃಶ್ಯದಿಂದ ಬೇಸರಗೊಂಡ ಸಿನೆಮಾ ತಂಡ ಆಡಿಯೋ ರಿಲೀಸ್ ದಿನಾಂಕವನ್ನೇ ಮುಂದೂಡಿದೆ. ಜಿಲ್ಲೆಯಲ್ಲಿ ಮಳೆ ಹಾನಿಯ ನೋವು ಇರುವಾಗ ನಾವು ಸಂಭ್ರಮಿಸುವುದು ಸರಿಯಲ್ಲ ಎಂಬ ಕಾರಣದಿಂದ ಆಡಿಯೋ ರಿಲೀಸ್ ದಿನಾಂಕವನ್ನು ಆ.26ಕ್ಕೆ ಮುಂದೂಡಿದೆ.ವಿಸ್ಮಯ ವಿನಾಯಕ್ ಚೊಚ್ಚಲ ನಿರ್ದೇಶನದ ಈ ಸಿನೆಮಾ ಕೋಸ್ಟಲ್ವುಡ್ನಲ್ಲಿ ಭಾರೀ ಸದ್ದು ಮಾಡುತ್ತಿದೆ. ‘ಜಾಗೆ ರಡ್ಡ್ ಎಕ್ರೆ.. ಬೈದೆರ್ ಲಪ್ಪೆರೆ.. ಜಾಗೆದಕುಲು ಬನ್ನಗ ಮಾತ ಒತ್ತರೆ’ ಎಂಬ ಟೈಟಲ್ ಸಾಂಗ್ ಮೂಲಕ ಆರಂಭವಾಗಲಿರುವ ಈ ಸಿನೆಮಾದ ಬಗ್ಗೆ ಕೋಸ್ಟಲ್ವುಡ್ ಅಂಗಳದಲ್ಲಿ ಭಾರೀ ನಿರೀಕ್ಷೆಯೂ ಶುರುವಾಗಿದೆ. ಶಶಿರಾಜ್ ರಾವ್ ಕಾವೂರು ಬರೆದಿರುವ ‘ಪಗೆಲ್ ಕರೀಂಡ್… ಮುಗಲ್ ಕಬೀಂಡ್..’ ಹಾಗೂ ‘ಇನಿ ದಾನೆ ಕುಸ್ಕೊಂದುಂಡು’ ಹಾಡುಗಳ ರಿಲೀಸ್ ನಾಡಿದ್ದು ನಡೆಯಲಿದೆ. ಇದೇ ಮೊದಲ ಬಾರಿಗೆ ಪೃಥ್ವಿ ಅಂಬರ್ ಈ ಸಿನೆಮಾದಲ್ಲಿ ಹಾಡಿದ್ದಾರೆ. ದೀಪಕ್ ಕೋಡಿಕಲ್ ಕೂಡ ಸ್ವರ ನೀಡಿದ್ದಾರೆ. ಕಿಶೋರ್ ಕುಮಾರ್ ಶೆಟ್ಟಿ ಸಂಗೀತ ಒದಗಿಸಿದ್ದಾರೆ. ಅರವಿಂದ ಬೋಳಾರ್, ಉಮೇಶ್ ಮಿಜಾರ್, ದೀಪಕ್ ರೈ ಪಾಣಾಜೆ, ಮಂಜು ರೈ ಮೂಳೂರು ಸೇರಿದಂತೆ ಹಲವು ಖ್ಯಾತನಾಮರು ಈ ಸಿನೆಮಾದಲ್ಲಿದ್ದಾರೆ. ತುಳುನಾಡಿನ ಇತರ ಕಲಾವಿದರನ್ನು ಇಟ್ಟುಕೊಂಡು ಮಾಡಿರುವ ಈ ಸಿನೆಮಾ ಕೆಲವೇ ದಿನಗಳಲ್ಲಿ ರಿಲೀಸ್ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು