ಪ್ರಧಾನಿಗೆ ರಾಖಿ ಕಟ್ಟಲಿರುವ ತಲಾಖ್ ಹೋರಾಟಗಾರ್ತಿ
Team Udayavani, Aug 15, 2019, 5:00 AM IST
ಹೊಸದಿಲ್ಲಿ: ತ್ರಿವಳಿ ತಲಾಖ್ ವಿರುದ್ಧ ಹೋರಾಟದ ಮುಂಚೂಣಿಯಲ್ಲಿದ್ದ ಇಶ್ರತ್ ಜಹಾನ್ ಆ. 15ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖೀ ಕಟ್ಟಲಿದ್ದಾರೆ. ಅದಕ್ಕಾಗಿ ಅವರು ಈಗಾಗಲೇ ಹೊಸದಿಲ್ಲಿ ತಲುಪಿದ್ದಾರೆ. ಈ ಬಗ್ಗೆ ಖುಷಿಯಿಂದ ಪ್ರತಿಕ್ರಿಯೆ ನೀಡಿದ ಅವರು ‘ಪ್ರಧಾನಮಂತ್ರಿಯವರಿಗೆ ರಾಖೀ ಕಟ್ಟುವ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯನ್ನೇ ಮಾಡಿರಲಿಲ್ಲ. ಬಿಜೆಪಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಈ ಬಗ್ಗೆ ಫೋನ್ ಮಾಡಿ ಮಾಹಿತಿ ನೀಡಿದಾಗ ಅಚ್ಚರಿ ಉಂಟಾಯಿತು’ ಎಂದಿದ್ದಾರೆ. ಈ ಬಾರಿ ರಕ್ಷಾ ಬಂಧನ ಮತ್ತು ಸ್ವಾತಂತ್ರ್ಯ ದಿನ ಒಂದೇ ದಿನ ಆಚರಿಸಲಾಗುತ್ತಿದೆ. ಪ್ರಧಾನಿಗೆ ಉಡುಗೊರೆಯಾಗಿ ಇಶ್ರತ್ ಜಹಾನ್ ರಸಗುಲ್ಲಾಗಳನ್ನು ನೀಡಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ