ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಂದ ರಾಷ್ಟ್ರ ಧ್ವಜಾರೋಹಣ
Team Udayavani, Aug 15, 2019, 10:32 AM IST
ಚಿಕ್ಕಮಗಳೂರು: 73ನೇ ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ರಾಷ್ಟ್ರ ಧ್ವಜಾರೋಹಣ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ, ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಜಿ.ಪಂ. ಅಧ್ಯಕ್ಷೆ ಸುಜಾತಕೃಷ್ಣಪ್ಪ, ಸಿಇಒ ಎಸ್.ಅಶ್ವತಿ, ಎಸ್ಪಿ ಹರೀಶ್ ಪಾಂಡೆ, ಎಡಿಸಿ ಡಾ.ಕುಮಾರ್ ಉಪಸ್ಥಿತರಿದ್ದರು.