ಸಾಂಕ್ರಾಮಿಕ ರೋಗ ಭೀತಿ


Team Udayavani, Aug 15, 2019, 10:58 AM IST

15-Agust-7

ವಿಜಯಪುರ: ಪ್ರವಾಹ ಬಾಧಿತ ನದಿ ತೀರದ ಹಳ್ಳಿಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆಯಾಗಿ ಗ್ರಾಪಂ ಅಧಿಕಾರಿಗಳು ಧೂಮೀಕರಣಕ್ಕೆ ಕ್ರಮ ಕೈಗೊಂಡಿದ್ದಾರೆ.

ಜಿ.ಎಸ್‌. ಕಮತರ
ವಿಜಯಪುರ:
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಬಾಧಿಸಿದ ಕೃಷ್ಣಾ ಹಾಗೂ ಭೀಮಾ ನದಿಗಳ ತೀರಗಳ ಪ್ರವಾಹ ಬಾಧಿತ ಹಳ್ಳಿಗಳಲ್ಲಿ ನೆರೆಯ ಅಬ್ಬದ ಕುಗ್ಗಿದೆ. ಆದರೆ ಇದೀಗ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡುವಿಕೆ ಭಯ ಹಾಗೂ ವಿಷ ಜಂತುಗಳ ಹಾವಳಿ ಹೆಚ್ಚ ತೊಡಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಸೃಷ್ಟಿಯಾಗದಂತೆ ಆರೋಗ್ಯ ಇಲಾಖೆ ಬಾಧಿತ ಗ್ರಾಮ ಪಂಚಾಯತ್‌ಗಳ ಮೂಲಕ ಹಲವು ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಿದೆ.

ವಿಜಯಪುರ ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾ ನದಿ ತೀರದಲ್ಲಿ ಈವರೆಗೆ ಸುಮಾರು 75 ಹಳ್ಳಿಗಳ ಜಮೀನಿಗೆ ನೀರು ನುಗ್ಗಿದೆ. ಕೃಷ್ಣಾ ನದಿ ಪಾತ್ರದ 12 ಹಳ್ಳಿಗಳ ಜನರನ್ನು ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಲಾಗಿದೆ. ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿನ ಬಬಲೇಶ್ವರ ತಾಲೂಕಿನ 4, ನಿಡಗುಂದಿ ತಾಲೂಕಿನ 7, ಮುದ್ದೇಬಿಹಾಳ ತಾಲೂಕಿನ ಸುಮಾರು 25 ಹಳ್ಳಿಗಳು ಹಾಗೂ ಭೀಮಾ ನದಿ ಪಾತ್ರದ ಚಡಚಣ 15 ಇಂಡಿ 12 ಹಾಗೂ ಆಲಮೇಲ-ಸಿಂದಗಿ 10 ಹಳ್ಳಿಗಳು ಸೇರಿ ಸುಮಾರು 75 ಹಳ್ಳಿಗಳ ಜಮೀನು ಹಾಗೂ ಹಲವು ಗ್ರಾಮಗಳ ಮನೆಗಳಿಗೆ ಪ್ರವಾಹ ನೀರು ಬಾಧಿಸಿದೆ.

ಜಿಲ್ಲೆಯ ಈ ಎರಡೂ ಜೀವನದಿಗಳು ವಾರದಿಂದ ಬಾಧಿಸಿದ ಪ್ರವಾಹ ಕುಗ್ಗುವ ಮುನ್ಸೂಚನೆ ನೀಡಿರುವ ಬೆನ್ನಲ್ಲೇ ಪ್ರವಾಹ ಬಾಧಿತ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹಾಗೂ ವಿಷ ಜಂತುಗಳ ಹಾವಳಿಯಿಂದ ಜನರಲ್ಲಿ ಭೀತಿ ಉಂಟಾಗಿದೆ. ಜಿಲ್ಲೆ ಬಬಲೇಶ್ವರ ತಾಲೂಕಿನ ಜಂಬಗಿ, ಮುದ್ದೇಬಿಹಾಳ ತಾಲೂಕಿನ ಮುದೂರ ಹಾಗೂ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮಗಳಲ್ಲಿ ಹಾವು ಕಚ್ಚಿದ ಪ್ರಕರಣ ವರದಿಯಾಗಿದೆ.

ಇದರಲ್ಲಿ ಗುಬ್ಬೇವಾಡದ ಹಾವು ಕಚ್ಚಿದ ಮಹಿಳೆ ಮೃತಪಟ್ಟಿದ್ದಾಳೆ. ಹೀಗಾಗಿ ಇದೀಗ ಪ್ರವಾಹ ಬಾಧಿತ ಪ್ರದೇಶಗಳ ಪುನರ್ವಸತಿ ಕೇಂದ್ರಗಳು ಹಾಗೂ ತಾಲೂಕಾಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾವು ಸೇರಿದಂತೆ ವಿಷ ಜಂತುಗಳ ಕಡಿತಕ್ಕೆ ಅಗತ್ಯ ಔಷಧಿ ಸೇರಿದಂತೆ ಎಲ್ಲ ರೀತಿಯ ಔಷಧಿಗಳನ್ನು ಸಂಗ್ರಹಿಸಿ ಇರಿಸಲಾಗಿದೆ.

ಪ್ರವಾಹ ಬಾಧಿತರ ಪುನರ್ವಸತಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಯಾವುದೇ ರೀತಿ ರೋಗಗಳು ಹರಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಸಕಲ ರೀತಿಯಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಪುನರ್ವಸತಿ ಕೇಂದ್ರಗಳಲ್ಲಿ ಹಗಲು-ರಾತ್ರಿ ನಿರಂತರ ವೈದ್ಯಕೀಯ ಸೇವೆಗಾಗಿ ಪ್ರತಿ ಕೇಂದ್ರಕ್ಕೆ ಹಗಲು-ರಾತ್ರಿ ಪಾಳೆಗೆ ಇಬ್ಬರು ವೈದ್ಯರು, ನಾಲ್ವರು ದಾದಿಯರನ್ನು ಕರ್ತವ್ಯಕ್ಕೆ ನಿಯೋಜಿಸಿದೆ.

ತುರ್ತು ಸೇವೆಗಾಗಿ ರೋಗಿಗಳನ್ನು ತಾಲೂಕು-ಜಿಲ್ಲಾ ಆಸ್ಪತ್ರೆಗಳಿಗೆ ಸಾಗಿಸುವುದಕ್ಕಾಗಿ ಬಬಲೇಶ್ವರ ತಾಲೂಕ ಕೇಂದ್ರದಲ್ಲಿ 1, ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಮುದ್ದೇಬಿಹಾಳ, ಮಸೂತಿ, ನೇಬಗೇರಿ ಪುನರ್ವಸತಿ ಕೇಂದ್ರಗಳಲ್ಲಿ ತಲಾ ಒಂದರಂತೆ 4 ಹಾಗೂ ಎರಡು ಸಂಚಾರಿ ಅರೋಗ್ಯ ಸೇವೆಗೆ ಸೇರಿದಂತೆ ಆರು ಆಂಬ್ಯುಲೆನ್ಸ್‌, ನಿಡಗುಂದಿ ತಾಲೂಕಿನ ಆರಳದಿನ್ನಿ ಗ್ರಾಮದಲ್ಲಿ ಒಂದು ಆಂಬ್ಯುಲೆನ್ಸ್‌ ಸೇವೆಯನ್ನು ಕಲ್ಪಿಸಲಾಗಿದೆ. ಇದಲ್ಲದೇ ಭೀಮಾ ತೀರದ ಇಂಡಿ ಭಾಗದಲ್ಲಿ ಹೊರ್ತಿ, ಇಂಡಿ, ಚಡಚಣ, ತಡವಲಗಾ ಅಂಬ್ಯುಲೆನ್ಸ್‌ ಸೇವೆ ನೀಡಲಾಗಿದೆ. ಇದಲ್ಲದೇ ಈ ಭಾಗದಲ್ಲಿ ಆರೋಗ್ಯ ಇಲಾಖೆ 108 ಸೇವೆಯ ಒಂದು ಆಂಬ್ಯುಲೆನ್ಸ್‌ನ ನೆರವನ್ನೂ ಪಡೆದಿದೆ.

ಇದರ ಹೊರತಾಗಿ ಇದೀಗ ಪ್ರವಾಹ ಬಾಧಿತ ಹಳ್ಳಿಗಳಲ್ಲಿ ಕೊಳಚೆ ನೀರು ಸಂಗ್ರಹವಾಗಿ ಡೆಂಘೀ, ಮಲೇರಿಯಾ, ಚಿಕೂನ್‌ಗುನ್ಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳು ಸೃಷ್ಟಿಯಾಗದಂತೆ ಪ್ರತಿ ದಿನಗೂ ಫಾಗಿಂಗ್‌ ಮಾಡಲಾಗುತ್ತಿದೆ. ಇದಲ್ಲದೇ ಪ್ರವಾಹದ ನೀರು ತಗ್ಗು ಪ್ರದೇಶಗಳಲ್ಲಿ ಸಂಗ್ರಹವಾಗಿ ಕೊಳಚೆ ನಿರ್ಮಾಣವಾದ ಸ್ಥಳಗಳಲ್ಲಿ ಹಾಗೂ ಕಟ್ಟಿಕೊಂಡ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಕೆಸರಿನ ಪ್ರದೇಶಗಳಲ್ಲಿ ಮೆಲಾಥಿಯಾನ್‌, ಬಿಎಚ್‌ಡಿ ಪೌಡರ್‌ ಸಿಂಪರಣೆ ಮಾಡುವಂತೆ ತಾಲೂಕು ಆರೋಗ್ಯಾಧಿಕಾರಿಗಳ ಮೂಲಕ ಪಿಡಿಒಗಳಿಗೆ 3-4 ಬಾರಿ ಪತ್ರಗಳನ್ನೂ ರವಾನಿಸಿದೆ.

ಇದಲ್ಲದೇ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಶುದ್ಧೀಕರಿಸಿದ ನೀರಿನ ಕೊರತೆ ಕಾಡುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಹಳ್ಳಿಗರು ನೀರನ್ನು ಸಂಪೂರ್ಣ ಕುದಿಸಿ ಕುಡಿಯುವಂತೆ ಸಲಹೆ ನೀಡಿದ್ದಾರೆ. ಇದರಿಂದ ವಾಂತಿ-ಬೇಧಿ ಸಹಿತ ಕಾಲರಾ ಪ್ರಕರಣಗಳನ್ನು ಮುನ್ನೆಚ್ಚರಿಕೆಯಾಗಿ ನಿಯಂತ್ರಿಸಲು ಸಲಹೆ ನೀಡಿದೆ. ಸದರಿ ವಿಷಯದಲ್ಲಿ ಗ್ರಾಪಂ ಅಧಿಕಾರಿಗಳು ನಿರ್ಲಕ್ಷಿಸಿದರೆ ತಮ್ಮ ಗಮನಕ್ಕೆ ತರುವಂತೆ ಜಿಪಂ ಸಿಇಒ ಅವರು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹಾಗೂ ಜಿಪಂ ಸಿಇಒ ವಿಕಾಸ ಸುರಳಕರ, ಎಸ್ಪಿ ಪ್ರಕಾಶ ನಿಕ್ಕಂ ಅವರು ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳೊಂದಿಗೆ ಸಂಭಾವ್ಯ ಪ್ರವಾಹದ ಮುನ್ನೆಚ್ಚರಿಕೆಯಾಗಿ ನದಿ ತೀರದ ಹಳ್ಳಿಗಳಲ್ಲಿ ಸಮನ್ವಯ ಅಧಿಕಾರಿಗಳ ತಂಡಗಳನ್ನು ಕಟ್ಟಿಕೊಂಡು ಸೇವೆಗೆ ನಿಂತರು. ಕೌಟುಂಬಿಕ ಗಂಭೀರ ಸಮಸ್ಯೆಗಳಿದ್ದರೂ ರಜೆ ರಹಿತವಾಗಿ ಕರ್ತವ್ಯ ಮಾಡತೊಡಗಿದರು. ಪ್ರವಾಹ ಹಾಗೂ ಎಲ್ಲ ರೀತಿಯ ಪರಿಹಾರ ಹಾಗೂ ಆರೋಗ್ಯ ಸೇವೆಗಳ ಕುರಿತು ಖುದ್ದು ಉಸ್ತುವಾರಿ ನೋಡಿಕೊಂಡ ಕಾರಣ ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲೂ ಒಂದೇ ಒಂದು ಸಾವು ಸಂಭವಿಸಿಲ್ಲ. ಅಧಿಕಾರಿಗಳು ಸಮನ್ವಯದಿಂದ ಹಾಗೂ ಬದ್ಧತೆಯಿಂದ ಸೇವೆ ಮಾಡಿದಲ್ಲಿ ಎಂಥ ಗಂಭೀರ ಹಾಗೂ ಸಂಕಷ್ಟದ ಪರಿಸ್ಥಿತಿಯನ್ನೂ ಸಮರ್ಥವಾಗಿ ಎದುರಿಸಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಟಾಪ್ ನ್ಯೂಸ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.