ನೆರೆ ಸಂತ್ರಸ್ತರಿಗೆ ನೆರವಾಗಿ ಮಾದರಿಯಾದ ಹೆಸಕುತ್ತೂರು ಸರಕಾರಿ ಶಾಲೆ
ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ
Team Udayavani, Aug 15, 2019, 5:33 PM IST
ತೆಕ್ಕಟ್ಟೆ: ರಾಜ್ಯದಲ್ಲಿ ಭಾರೀ ಪ್ರವಾಹ, ಭೂಕುಸಿತಗಳಿಂದ ಅಪಾರ ಹಾನಿ ಸಂಭವಿಸಿದ್ದು, ಪ್ರವಾಹ ಸಂತ್ರಸ್ತರಿಗಾಗಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿಯ ವಿದ್ಯಾರ್ಥಿ ಪೋಷಕರು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿ ಸಿಹಿ ತಿಂಡಿಗಳನ್ನು ಹಂಚುವ ಬದಲಿಗೆ ನೆರೆ ಸಂತ್ರಸ್ತರಿಗಾಗಿ ವಸ್ತುರೂಪದ ಕೊಡುಗೆಗಳನ್ನು ಸಂಗ್ರಹಿಸುವ ಮಹತ್ವದ ಕಾರ್ಯವನ್ನು ಹಮ್ಮಿಕೊಂಡು ಮಾನವೀಯತೆ ಮೆರೆದಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಎನ್ನುವುದು ಬರೀ ಭಾಷಣಕ್ಕೆ ಮಾತ್ರ ಸೀಮಿತವಾಗದೆ , ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣರಾಗಿರುವ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಯಾವುದೇ ಪ್ರಚಾರ ಬಯಸದೆ ತಮ್ಮ ಒಂದು ದಿನದ ವೇತನವನ್ನು ನೆರೆ ಸಂತ್ರಸ್ತರಿಗೆ ನೀಡಿ ಮಾನವೀಯವಾಗಿ ಸ್ಪಂದಿಸಿದ್ದಾರೆ.
ಈ ಸಂದರ್ಭ ನಿವೃತ್ತ ಯೋಧ ಕಂದಾವರ ಸಂತೋಷ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು