ದತ್ತ ಪೀಠದಲ್ಲಿ ತ್ರಿವರ್ಣ ಧ್ವಜಾರೋಹಣ
ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಸ್ವಾತಂತ್ರ್ಯ ದಿನಾಚರಣೆ
Team Udayavani, Aug 15, 2019, 9:24 PM IST
ಚಿಕ್ಕಮಗಳೂರು: ವಿವಾದಿತ ದತ್ತಪೀಠ ಪರಿಸರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಇಂದು ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ವಿವಾದಿತ ಪ್ರದೇಶದಲ್ಲಿ ಸ್ವಾತಂತ್ರ್ಯದಿನದ ಸಂಭ್ರಮವನ್ನು ಆಚರಿಸಿಕೊಂಡಿದ್ದಾರೆ.
ಹುಣ್ಣಿಮೆ ಪೂಜೆ ಅಂಗವಾಗಿ ದತ್ತಪೀಠಕ್ಕೆ ಆಗಮಿಸಿದ್ದ ಹಿಂದೂ ಪರ ಸಂಘಟನೆಗಳ ಈ ಕಾರ್ಯಕರ್ತರು ದತ್ತ ಪೀಠ ಗುಹೆಯ ಪ್ರವೇಶ ದ್ವಾರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಭಕ್ತಿಯ ಘೋಷಣೆಗಳನ್ನು ಕೂಗಿದರು.
ಹಿಂದೂ ಪರ ಸಂಘಟನೆಗಳ ಮುಖಂಡರಾದ ರಘು ಸಕಲೇಶಪುರ, ತುಡಕೂರು ಮಂಜು ಹಾಗೂ ಇತರರು ಧ್ವಜಾರೋಹಣ ಕಾರ್ಯಕರ್ಮದಲ್ಲಿ ಭಾಗಿಯಾಗಿದ್ದರು.
ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಾಷ್ಟ್ರಧ್ವಜಾರೋಹಣಕ್ಕೆ ಜಿಲ್ಲಾಡಳಿತದ ಅನುಮತಿಯನ್ನು ಕೇಳಿದ್ದರು, ಆದರೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ವಿವಾದಿತ ಪ್ರದೇಶವಾಗಿರುವ ದತ್ತ ಪೀಠ, ಬಾಬಾಬುಡನ್ ಗಿರಿ ದರ್ಗಾದ ಪರಿಸರದಲ್ಲಿ ಕಾರ್ಯಕರ್ತರು ರಾಷ್ಟ್ರಧ್ವಜನ್ನು ಹಾರಿಸಿಲ್ಲ. ಬದಲಾಗಿ ಅವರು ರಾಷ್ಟ್ರಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಅಲ್ಲಿಗೆ ತೆರಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಎಲ್ಲರಿಗೂ ಹಕ್ಕಿದೆ ಎಂದು ಘಟನೆಯ ಕುರಿತಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್