ಕೃಷಿ ಸಮ್ಮಾನ್‌: ಹಣ ಹೊಂದಿಸಲು ಲೆಕ್ಕಾಚಾರ


Team Udayavani, Aug 16, 2019, 3:08 AM IST

krushi-summ

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಪೂರಕವಾಗಿ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಹೆಚ್ಚುವರಿ 4000 ಸಾವಿರ ರೂ. ಪ್ರೋತ್ಸಾಹ ನೀಡುವ ಯೋಜನೆಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಹೊಸ ಲೆಕ್ಕಾಚಾರಕ್ಕೆ ಮುಂದಾಗಿದೆ.

ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಘೋಷಣೆ ಮಾಡಿರುವ ಯೋಜನೆಗೆ ತಕ್ಷಣ ಹಣ ಹೊಂದಿಸುವುದು ಅತಿ ದೊಡ್ಡ ಸವಾಲಾಗಿದ್ದು, ಈ ಯೋಜನೆಗಾಗಿ ಹೊಸ ಸರ್ಕಾರ ಯಾವುದೇ ಬಜೆಟ್‌ನಲ್ಲಿ ಹಣ ಮೀಸಲಿಡದೇ ಇರುವುದರಿಂದ ಈಗ ಜಾರಿಯಲ್ಲಿರುವ ಯೋಜನೆಗಳಲ್ಲಿ ಹಣ ಹೊಂದಾಣಿಕೆ ಮಾಡಲು ಸಾಧ್ಯವಿದೆಯೇ ಎನ್ನುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಪೂರಕವಾಗಿ ರಾಜ್ಯ ಸರ್ಕಾರದಿಂದಲೂ 4 ಸಾವಿರ ರೂ. ನೀಡುವ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಯಡಿಯೂರಪ್ಪ ರೈತರಿಗೆ ಎರಡು ಕಂತುಗಳಲ್ಲಿ 4000ರೂ ಹಣ ನೀಡಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಮೊದಲ ಕಂತಿನ 2000 ರೂ. ಮೊತ್ತವನ್ನು ಯೋಜನೆಗೆ ನೋಂದಾಯಿಸಿಕೊಂಡ 1 ಲಕ್ಷ ರೈತರಿಗೆ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕಿಸಾನ್‌ ಸಮ್ಮಾನ್‌ ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರಕ್ಕೆ 2200 ಕೋಟಿ ರೂ ಅನುದಾನದ ಅಗತ್ಯವಿದೆ. ಮೊದಲ ಕಂತಿನ ಹಣ ಪಾವತಿಗೆ 1100 ಕೋಟಿ ರೂ ಹಾಗೂ ಎರಡನೇ ಕಂತಿಗೆ ಇಷ್ಟೇ ಮೊತ್ತದ ಹಣದ ಅಗತ್ಯವಿದೆ. ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಗೊಳಿಸಲು ಆರ್ಥಿಕ ವರ್ಷದ ಮಧ್ಯಂತರ ಅವಧಿಯಲ್ಲಿ ಕಷ್ಟ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಕೆಲವು ಯೋಜನೆಗಳಲ್ಲಿ ಹಣ ಹೊಂದಾಣಿಕೆ ಮಾಡುವ ಮೂಲಕ ಕಿಸಾನ್‌ ಸಮ್ಮಾನ್‌ ಯೋಜನೆಗೆ ಹಣಕಾಸಿನ ಸಮಸ್ಯೆ ನಿವಾರಿಸಬಹುದು ಎಂಬ ಸಲಹೆಯನ್ನೂ ಆರ್ಥಿಕ ಇಲಾಖೆ ಅಧಿಕಾರಿಗಳು ನೀಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ಸರ್ಕಾರ ಘೋಷಿಸಿದ ಯೋಜನೆ ಜಾರಿಗೊಳಿಸಬೇಕಾದರೆ ಚಾಲ್ತಿಯಲ್ಲಿರುವ ಯೋಜನೆಗಳನ್ನು ಹಾಗೂ ಹೊಸದಾಗಿ ಘೋಷಿಸಲ್ಪಟ್ಟು ಅನುಷ್ಠಾನಗೊಳಿಸದೆ ಇರುವ ಕೆಲವು ಯೋಜನೆಗಳ ಅನುದಾನವನ್ನು ಹೊಂದಾಣಿಕೆ ಮಾಡಿ, ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಅನುದಾನ ಒದಗಿಸಬೇಕಾದರೆ ಕೆಲ ಬದಲಾವಣೆಗಳು ಅಗತ್ಯ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ಯೋಜನಾವಾರು ಅನುದಾನದ ಅಂಕಿ ಅಂಶಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಯೋಜನಾ ವೆಚ್ಚ ಕಡಿತಕ್ಕೂ ಚಿಂತನೆ
-ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ಪ್ರತಿ ಯುನಿಟ…ಗೆ 5 ಕೆ.ಜಿ. ಅಕ್ಕಿಯನ್ನು ಪ್ರತಿ ಕೆಜಿಗೆ 3 ರೂ.ನಂತೆ ನೀಡುತ್ತಿದ್ದು ಹೆಚ್ಚುವರಿಯಾಗಿ ರಾಜ್ಯ ಸರ್ಕಾರ 2 ಕೆಜಿ ಸೇರಿಸಿ 7 ಕೆಜಿ ಅಕ್ಕಿ ವಿತರಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಅಷ್ಟೂ ಅಕ್ಕಿಯನ್ನು ಉಚಿತವಾಗಿ ಫ‌ಲಾನುಭವಿಗಳಿಗೆ ನೀಡುತ್ತಿದ್ದು, ಅದರ ವೆಚ್ಚ ರಾಜ್ಯದ ಬೊಕ್ಕಸದಿಂದಲೇ ಭರಿಸಲಾಗುತ್ತಿದೆ. ಹೆಚ್ಚುವರಿ ನೀಡಲಾಗುವ 2 ಕೆಜಿ ಅಕ್ಕಿಗೆ ವಾರ್ಷಿಕ 2,850 ಕೋಟಿ ರೂ. ವೆಚ್ಚವಾಗುತ್ತಿತ್ತು. ಅದೇ ರೀತಿ 1 ಕೆಜಿ ತೊಗರಿ ಬೇಳೆ ನೀಡಲು 576 ಕೋಟಿ ರೂ ವೆಚ್ಚವಾಗುತ್ತಿದೆ. ಹೆಚ್ಚುವರಿ 2 ಕೆಜಿ ಅಕ್ಕಿ ಹಾಗೂ 1 ಕೆಜಿ ತೊಗರಿ ಬೇಳೆ ಹಂಚಿಕೆಗೆ 500 ಕೋಟಿ ರೂ.ನೀಡಲಾಗುತ್ತಿದೆ. ಹೆಚ್ಚುವರಿ ಅಕ್ಕಿಯ ವೆಚ್ಚವನ್ನು ಕಿಸಾನ್‌ ಸಮ್ಮಾನ್‌ಗೆ ಬಳಸಬಹುದೇ ಎಂಬುದು ಒಂದು ಲೆಕ್ಕಾಚಾರ.

-ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಘೋಷಿಸಿದ್ದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಆವರ್ತ ನಿಧಿಗೆ ನಿಗದಿ ಮಾಡಿದ್ದ 500 ಕೋಟಿ ರೂ. ಗಳನ್ನು ಬಳಸಿಕೊಳ್ಳಬಹುದು. ಅಲ್ಲದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಘೋಷಿಸಿ, ಮೀಸಲಿಟ್ಟಿದ್ದ 134 ಕೋಟಿ ರೂ. ಮತ್ತು ವಿಜಯಪುರ ಜಿಲ್ಲೆಯ ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಾರರಿಗಾಗಿ ಘೋಷಿಸಿದ್ದ 150 ಕೋಟಿ ರೂ. ವಿಶೇಷ ಪ್ಯಾಕೇಜ್ ಮತ್ತು ಕೃಷಿ ಉತ್ಪನ್ನ ಸಂಸ್ಕರಣಾ ಘಟಕಗಳಿಗಾಗಿ ಘೋಷಿಸಿದ್ದ 150 ಕೋಟಿ ರೂ.ಗಳ ಪ್ಯಾಕೆಜ್‌ಗಳನ್ನು ಬಳಸಿಕೊಂಡರೆ 1434 ಕೋಟಿ ರೂ.ದೊರೆಯಲಿದೆ ಎಂಬುದು ಇನ್ನೊಂದು ಲೆಕ್ಕಾಚಾರ.

-ಇತರ ಯೋಜನೆಗಳಲ್ಲಿ ಯೋಜನಾ ವೆಚ್ಚ ಕಡಿತ ಮಾಡುವ ಸಾಧ್ಯತೆ ಬಗ್ಗೆಯೂ ಚಿಂತನೆ

* ಶಂಕರ ಪಾಗೋಜಿ

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.