ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೂ ಬಿಡದ ಪ್ರವಾಹ
Team Udayavani, Aug 16, 2019, 10:22 AM IST
ಬಾಗಲಕೋಟೆ: ಜಮಖಂಡಿ ತಾಲೂಕಿನ ಕುಂಬಾರಹಳ್ಳ ಸರ್ಕಾರಿ ಶಾಲೆ ಜಲಾವೃತಗೊಂಡಿದೆ.
ಬಾಗಲಕೋಟೆ: ಪ್ರವಾಹ ಸಹಿತ ಯಾವುದೇ ತುರ್ತು ಸಂದರ್ಭದಲ್ಲಿ ನಗರ-ಪಟ್ಟಣ ಹಾಗೂ ಗ್ರಾಮೀಣ ಜನರಿಗೆ ತಕ್ಷಣಕ್ಕೆ ಆಶ್ರಯ ಕಲ್ಪಿಸಲು ನೆರವಾಗುವುದೇ ಸರ್ಕಾರಿ ಶಾಲೆಗಳು. ಆದರೆ, ಪ್ರವಾಹದಿಂದ ಜಿಲ್ಲೆಯ 138 ಶಾಲೆಗಳೇ ಈಗ ಆಸರೆಗಾಗಿ ಕಾಯುತ್ತಿವೆ.
ಹೌದು, ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ಪ್ರವಾಹದಿಂದ ಜಿಲ್ಲೆಯ 138 ಶಾಲೆಗಳು ಸಂಪೂರ್ಣ ನೀರಿನಲ್ಲಿ ನಿಂತಿವೆ. ಅದರಲ್ಲೂ ಶಾಲಾ ಮತ್ತು ಬಿಸಿಯೂಟ ತಯಾರಿಸುವ ಅಡುಗೆ ಕೊಡಿಗಳು ಸೇರಿ ಒಟ್ಟು 1,925 ಶಾಲಾ ಕೊಠಡಿಗಳು ಹಾನಿಯಾಗಿವೆ. ಅವುಗಳ ದುರಸ್ತಿ, ಪುನರ್ ನಿರ್ಮಾಣದ ಬಳಿಕ ಶಾಲೆಗಳು ಪುನಃ ಮೊದಲಿದ್ದ ಸ್ಥಿತಿಗೆ ಬರಲು ಬಹು ದಿನಗಳೇ ಬೇಕಾಗುತ್ತದೆ.
15 ದಿನದಿಂದ ನೀರಿನಲ್ಲಿ: ಮಲಪ್ರಭಾ ಮತ್ತು ಘಟಪ್ರಭಾ ನದಿ ಪ್ರವಾಹದಿಂದ ಮುಧೋಳ, ಬಾದಾಮಿ, ಹುನಗುಂದ, ಬಾಗಲಕೋಟೆ (ಕಲಾದಗಿ ಹೋಬಳಿ) ಬೀಳಗಿ ತಾಲೂಕಿನ ಕೆಲವೆಡೆ ಶಾಲೆಗಳು ನಾಲ್ಕು ದಿನಗಳ ಕಾಲ ಮಾತ್ರ ನೀರಿನಲ್ಲಿ ನಿಂತಿದ್ದರೆ, ಕೃಷ್ಣಾ ನದಿ ಪ್ರವಾಹದಿಂದ ಬಾಗಲಕೋಟೆ ತಾಲೂಕಿನ ದೇವನಾಳ ಸಹಿತ ಜಮಖಂಡಿ, ಬೀಳಗಿ ತಾಲೂಕಿನ ಹಲವು ಶಾಲೆಗಳು ಕಳೆದ ಆ.1ರಿಂದ ನೀರಿನಲ್ಲಿವೆ. ಇಂದಿಗೂ ಜಲಾವೃತಗೊಂಡ ಶಾಲೆಗಳ ಸುತ್ತಲಿನ ನೀರು ತಗ್ಗಿಲ್ಲ. ಹೀಗಾಗಿ ಶತಮಾನ ಕಂಡ ಶಾಲೆಗಳ ಸ್ಥಿತಿಯಂತೂ ಅಯೋಮಯವಾಗಿದೆ. ಈ ಶಾಲೆಗಳು ಯಾವಾಗ ಬೀಳುತ್ತವೆ ಎಂಬ ಆತಂಕ ಎದುರಾಗಿದೆ.
53 ಶಾಲೆಗಳಲ್ಲಿ ಇಲ್ಲ ಸಂಭ್ರಮ: ದೇಶದೆಲ್ಲೆಡೆ ಆ.15ರಂದು 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ. ಆದರೆ, ನೀರಿನಲ್ಲಿ ನಿಂತ ಜಿಲ್ಲೆಯ 53 ಶಾಲೆಗಳಲ್ಲಿ ಸ್ವಾತಂತ್ರ್ಯ ಸಂಭ್ರಮ ಆಚರಣೆಗೂ ಅವಕಾಶ ಸಿಗಲಿಲ್ಲ. ಶಾಲೆಗಳು ನೀರಿನಲ್ಲಿ ನಿಂತಿದ್ದು, ಅವುಗಳತ್ತ ತೆರಳಲೂ ಆಗದೇ, ಪರಿಹಾರ ಕೇಂದ್ರ, ಕೆಲವೆಡೆ ಗ್ರಾಪಂ ಕಚೇರಿಗಳ ಎದುರೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
•ಶ್ರೀಶೈಲ ಕೆ. ಬಿರಾದಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ