ಎಲ್ಲರೂ ಒಗ್ಗೂಡಿ ದೇಶ ಕಟ್ಟೋಣ

•73ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಡಿಸಿ ಶರತ್‌ ಬಿ. ಕರೆ •ದೇಶಭಕ್ತಿ ಬಿಂಬಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ

Team Udayavani, Aug 16, 2019, 11:06 AM IST

16-Agust-9

ರಾಯಚೂರು: ನಗರದ ಡಿಎಆರ್‌ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಜಿಲ್ಲಾಧಿಕಾರಿ ಶರತ್‌ ಬಿ. ಮಾತನಾಡಿದರು.

ರಾಯಚೂರು: ನಗರ ಸೇರಿದಂತೆ ಜಿಲ್ಲಾದ್ಯಂತ 73ನೇ ಸ್ವಾತಂತ್ರ್ಯ ದಿನವನ್ನು ಗುರುವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು, ವಿವಿಧ ಪಕ್ಷಗಳು ಸೇರಿದಂತೆ ಎಲ್ಲ ಕಡೆ ತಿರಂಗ ಧ್ವಜ ರಾರಾಜಿಸಿತು.

ಜಿಲ್ಲಾಡಳಿತದಿಂದ ನಗರದ ಡಿಎಆರ್‌ ಪೊಲೀಸ್‌ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್‌ ಬಿ. ಧ್ವಜಾರೋಹಣ ನೆರವೇರಿಸಿದರು. ನಂತರ ಪದಾತಿ ದಳ, ಸ್ಕೌಟ್ಸ್‌, ಗೈಡ್ಸ್‌ ಮತ್ತು ವಿವಿಧ ಶಾಲಾ ಕಾಲೇಜುಗಳ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಬಿ. ಶರತ್‌, ಭಾರತ ವಿಶ್ವಮಟ್ಟದಲ್ಲಿ ದೊಡ್ಡ ರಾಷ್ಟ್ರವಾಗಿ ಗುರುತಿಸಿಕೊಂಡಿದ್ದು, ದೇಶದೊಳಗೂ ಸಮಾನತೆ, ಪ್ರತಿಯೊಬ್ಬರಿಗೂ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ದೇಶ ಕಟ್ಟುವ ಕೆಲಸಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ಮಹನೀಯರು ತಮ್ಮ ಜೀವವನ್ನೆ ಪಣಕ್ಕಿಟ್ಟಿದ್ದು, ಅವರ ಕೊಡುಗೆಯನ್ನು ಎಲ್ಲರೂ ಸ್ಮರಿಸುವ ಅಗತ್ಯವಿದೆ ಎಂದರು.

ಈ ವರ್ಷ ಜಿಲ್ಲೆಯ ಎರಡು ನದಿಗಳಿಗೆ ನೆರೆ ಅಪ್ಪಳಿಸಿ ಸಾಕಷ್ಟು ಹಾನಿಯಾಗಿದೆ. ಕೃಷ್ಣಾ, ತುಂಗಭದ್ರಾ ನದಿಗಳ ಪ್ರವಾಹದಿಂದ ಸಮಸ್ಯೆಯಾಗಿದೆ. ಆದರೆ, ಇಂಥ ಕ್ಲಿಷ್ಟ ಸನ್ನಿವೇಶದಲ್ಲೂ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡು ಜನ ಮತ್ತು ಜಾನುವಾರು ರಕ್ಷಿಸಿದೆ. ಹಾನಿಗೊಳಗಾದ ರಾಯಚೂರು, ದೇವದುರ್ಗ ಮತ್ತು ಲಿಂಗಸುಗೂರು ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಸರ್ಕಾರ ಘೋಷಿಸಿವೆ ಎಂದರು.

ಇನ್ನು ಉದ್ಯೋಗ ಖಾತ್ರಿಯಡಿ 73.73 ಲಕ್ಷ ಮಾನವ ದಿನಗಳನ್ನು ಸೃಜಿಸಿ, 168.75 ಕೋಟಿ ರೂ. ಕೂಲಿ ನೀಡಲಾಗಿದೆ. ವೈಯಕ್ತಿಕ ಕಾಮಗಾರಿಗಳ ಪೈಕಿ 254 ದನದ ಕೊಟ್ಟಿಗೆಗಳನ್ನು, 672 ಕೃಷಿ ಹೊಂಡಗಳು ಮತ್ತು 298 ಜಮೀನು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಸಮುದಾಯ ಕಾಮಗಾರಿಗಳ ಪೈಕಿ 125 ಚೆಕ್‌ ಡ್ಯಾಂಗಳನ್ನು ನಿರ್ಮಿಸಲಾಗಿದೆ. ನರೇಗಾ ಯೋಜನೆ ಅನುಷ್ಠಾನದಲ್ಲಿ ಕಳೆದ ಸಾಲಿನಲ್ಲಿ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿರುವುದು ಹೆಮ್ಮೆ ಎಂದರು.

ಎಚ್ಕೆಆರ್‌ಡಿಬಿ ಮೈಕ್ರೋ ಯೋಜನೆಯಡಿ 161 ಕೋಟಿ ರೂ. ಹಾಗೂ ಮ್ಯಾಕ್ರೋ ಯೋಜನೆಯಡಿ 70 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಜಿಲ್ಲೆಗೆ 1,946 ಕುಡಿಯುವ ನೀರಿನ ಕಾಮಗಾರಿಗಳು ಮಂಜೂರಾಗಿದ್ದು, 1,341 ಮುಗಿದಿದ್ದು, 126 ಪ್ರಗತಿಯಲ್ಲಿರುತ್ತವೆ. ಅದಕ್ಕಾಗಿ 34.60 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, 16.35 ಕೋಟಿ ರೂ. ಖರ್ಚಾಗಿದೆ. ಜಿಲ್ಲೆಯಲ್ಲಿ 34 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿದ್ದು, ಅವುಗಳಲ್ಲಿ 21 ಪೂರ್ಣಗೊಂಡಿವೆ. 7 ಯೋಜನೆಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿರುತ್ತವೆ ಎಂದು ಹೇಳಿದರು.

ಅಭಿವೃದ್ಧಿ ಸಾಧ್ಯತೆಗಳ ಹಲವಾರು ಮಜಲು ಹೊಂದಿರುವ ಜಿಲ್ಲೆಯಾಗಿ ಮಾರ್ಪಟ್ಟಿದೆ. ಕೃಷಿಯಲ್ಲಿ ಸಮೃದ್ಧಿ, ತೋಟಗಾರಿಕೆಗೆ ಅವಕಾಶ, ಹೊಸ ಉದ್ದಿಮೆಗಳನ್ನು ಆಕರ್ಷಿಸುವ ಶಕ್ತಿ ಜಿಲ್ಲೆಗಿದೆ. ಜಿಲ್ಲಾಡಳಿತವು ಜನರ ಆಶೋತ್ತರಗಳಿಗೆ ಮಿಡಿಯುತ್ತ, ಅಭಿವೃದ್ಧಿ ಪರ ಚಿಂತನೆ ನಡೆಸುತ್ತಾ ಸಾಗಿದೆ. ಸರ್ಕಾರದ ಈ ಯತ್ನಕ್ಕೆ ಸಾರ್ವಜನಿಕರು ಕೈಗೂಡಿಸಿದಾಗ ಮಾತ್ರ ಆಶಯ ಕಾಣುವುದು ಸಾಧ್ಯ ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ, ಎಂಎಲ್ಸಿಗಳಾದ ಎನ್‌.ಎಸ್‌.ಬೋಸರಾಜ್‌, ಬಸವರಾಜ ಪಾಟೀಲ ಇಟಗಿ, ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ, ಎಸ್‌ಪಿ ಡಾ| ಸಿ.ಬಿ.ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೇರಿ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.