ಅಭಿಯಂತರ ನಾಗಭೂಷಣ ಅಮಾನತಿಗೆ ಸಮಿತಿ ಆಗ್ರಹ


Team Udayavani, Aug 16, 2019, 12:58 PM IST

kopala-tdy-3

ಗಂಗಾವತಿ: ಗೇಟ್ ಒಡೆದ ಸ್ಥಳಕ್ಕೆ ತುಂಗಭದ್ರಾ ಆಂದೋಲನ ಸಮಿತಿ ಸದಸ್ಯರು ಭೇಟಿ ನೀಡಿದ್ದರು.

ಗಂಗಾವತಿ: ತುಂಗಭದ್ರಾ ಜಲಾಶಯದ ಮೇಲ್ಮಟ್ಟದ ಕಾಲುವೆ ಗೇಟ್ ಮುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರ ನಾಗಭೂಷಣ ಅವರನ್ನು ಕೂಡಲೇ ಅಮಾನತು ಮಾಡುವಂತೆ ತುಂಗಭದ್ರಾ ಉಳಿಸಿ ಆಂದೋಲನ ಸಮಿತಿ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಸಮಿತಿ ಸದಸ್ಯರು ಗುರುವಾರ ಮುನಿರಾಬಾದ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರಕ್ಕೆ ಸಮಗ್ರ ವರದಿ ನೀಡಿ ಅಧಿಕಾರಿಗಳ ಕರ್ತವ್ಯನಿರ್ಲಕ್ಷ್ಯದ ಬಗ್ಗೆ ತಿಳಿಸಲಾಗುತ್ತದೆ ಎಂದು ಸಮಿತಿಯ ಜೆ. ಭಾರದ್ವಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷ ಬೇಸಿಗೆಯಲ್ಲಿ ಜಲಾಶಯದಲ್ಲಿ ನೀರಿಲ್ಲದ್ದಿದಾಗ (ಏಪ್ರೀಲ್-ಮೇ ತಿಂಗಳಲ್ಲಿ) ಗ್ರೀಸಿಂಗ್‌, ಪೆಂಟಿಂಗ್‌ ಹಾಗೂ ಇತ್ಯಾದಿ ನಿರ್ವಹಣೆ ಮಾಡಲಾಗುತ್ತಿತ್ತು. ಆದರೆ ಐದಾರು ವರ್ಷಗಳಿಂದ ಈ ರೀತಿಯ ನಿರ್ವಹಣೆ ಮಾಡಲಾಗಿಲ್ಲ. ಆದರೆ ಪ್ರತಿ ವರ್ಷ ನಿರ್ವಯಹಣೆಯ ಬಿಲ್ ಎತ್ತಲಾಗಿದೆ. ಈ ಕಾಲುವೆಯ ನಿರ್ವಹಣೆಯ ಹೊಣೆ ತುಂಗಭದ್ರಾ ಜಲಾಶಯದ ನಂಬರ್‌-1 ವಿಭಾಗದ ಕಾರ್ಯಪಾಲಕ ಅಭಿಯಂತರರದ್ದು, ಕಳೆದ ಐದು ವರ್ಷಗಳಿಂದ ಈ ವಿಭಾಗಕ್ಕೆ ಕಾರ್ಯಪಾಲಕ ಅಭಿಯಂತರ ನಾಗಭೂಷಣ ಅವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಈ ಅನಾಹುತಕ್ಕೆ ಕಾರಣವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಎಡದಂಡೆ ಮೇಲ್ಮಟ್ಟದ ಕಾಲುವೆಯ ಹೆಚ್ಚುವರಿ ನೀರು ಹೋಗಲು ಕಾಲುವೆಯ ಒಂದನೇ ಕಿ.ಮೀನಲ್ಲಿ ಎಸ್ಕೇಪ್‌ ಹಳ್ಳ ತೋಡಲಾಗಿದೆ. ಈ ಹಳ್ಳವು ಹರಿದು ಎಡದಂಡೆ ಮುಖ್ಯಕಾಲುವೆ (ರಾಯಚೂರಿಗೆ ಹರಿಯುವ ಕಾಲುವೆ) ಒಂದನೇ ಕಿ.ಮೀ. ಬಳಿ ಅಂಡರ್‌ಪಾಸ್‌ (ಮುಖ್ಯ ಕಾಲುವೆ ಕೆಳಭಾಗದಿಂದ) ಹರಿದು ಹೊಳೆ ಮುದ್ಲಪುರ ಸೀಮಾದ ಮೂಲಕ ಜಲಾಶಯದ ಮುಂಭಾಗದ ತುಂಗಭದ್ರಾ ನದಿ ಸೇರುತ್ತದೆ. ಈಗ ಈ ಕಾಲುವೆಯ ನಿರ್ವಹಣೆ ಇಲ್ಲದೇ ಮುಖ್ಯ ಗೇಟ್ ಕಿತ್ತು ಹೋಗಿರುವುದರಿಂದ 36 ಕ್ಯೂಸೆಕ್‌ ಹರಿಯಬೇಕಾದ ಕಾಲುವೆಯಲ್ಲಿ ಈಗ 250ರಿಂದ 300 ಕ್ಯೂಸೆಕ್‌ ನೀರು ಹರಿಯುತ್ತಿದೆ. ರಾಜ್ಯದ ಹೆಸರಾಂತ ಜಪಾನ್‌ ಮಾದರಿಯ ಪಂಪಾವನ ಶೇ. 80ರಷ್ಟು ಮುಳುಗಡೆಯಾಗಿದ್ದು, ಅಲ್ಲಿಯ ನರ್ಸರಿಯ ಲಕ್ಷಾಂತರ ಸಸಿಗಳು, ಹುಲ್ಲು ಹಾಸು, ಪಗೋಡಗಳು, ಔಷಧೀಯ ಸಸ್ಯಗಳು ಹಾಳಾಗಿವೆ. ಅಲ್ಲದೇ ಸಾವಿರಾರು ಪಕ್ಷಿಗಳು ನೆಲೆಯಾಗಿದ್ದ ಪಂಪಾವನ ಜಲಾವೃತ್ತದಿಂದ ನೆಲೆ ಕಳೆದುಕೊಂಡು ಪರಿತಪಿಸುತ್ತಿವೆ. ಕಾಲುವೆಯಲ್ಲಿ 250 ಕ್ಯೂಸೆಕ್‌ಗೂ ಅಧಿಕ ನೀರು ಬಂದಿದ್ದರಿಂದ ರಸ್ತೆಯ ಕೆಳಭಾಗದ ಪೈಪ್‌ ಔಟ್ಲೆಟ್‌ನಲ್ಲಿ ಅಷ್ಟೂ ಪ್ರಮಾಣದ ನೀರು ಹೊರ ಹೋಗದೇ ಪಂಪಾವನ ಜಲಾವೃತ್ತವಾಗಿದೆ. ಇದರ ವರದಿ ಸರಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಡಿ.ಎಚ್. ಪೂಜಾರ, ಶಿವಪ್ರಸಾದ ಚಲಸಾನಿ, ವಿಶ್ವನಾಥ ರಾಜ್‌, ಆನಂದ್‌ ಭಂಡಾರಿ, ಚಂದ್ರಪ್ಪ, ವೀರಭದ್ರಯ್ಯ ಭೂಸನೂರಮಠ, ಖಾಜಾವಲಿ, ಜನಾರ್ದನ್‌, ಸುದರ್ಶನ ವರ್ಮಾ, ಎಚ್.ಎನ್‌. ಬಡಿಗೇರ ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.