ಲಕ್ಷ್ಮಣತೀರ್ಥ ಪ್ರವಾಹಕ್ಕೆ ಗಾವಡಗೆರೆ ಹೋಬಳಿ ತತ್ತರ


Team Udayavani, Aug 17, 2019, 3:00 AM IST

lakshmana

ಹುಣಸೂರು: ಪ್ರವಾಹದಿಂದ ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಬ್ಯಾರನ್‌, ವಾಸದ ಮನೆಗಳು ಕುಸಿದು ಬಿದ್ದು, ತಂಬಾಕು ಬೆಳೆ ಕೊಳೆಯುವುದರೊಂದಿಗೆ ಅಪಾರ ಪ್ರಮಾಣದ ಹಾನಿಯಾಗಿದೆ.

ಹರೀಕ್ಯಾತನಹಳ್ಳಿಯಲ್ಲಿ ನಾಗೇಗೌಡರ‌ ತಂಬಾಕು ಬ್ಯಾರನ್‌ ಗೋಡೆ ಕುಸಿದಿದೆ. ಪಾಪನಾಯ್ಕರ ವಾಸದ ಮನೆ ಬಾಗಶಃ ಬಿದ್ದು ಹೋಗಿದ್ದರೆ, ಈ ಭಾಗದಲ್ಲಿ ಹೆಚ್ಚು ತಂಬಾಕು ಬೆಳೆಯುವ ರೈತರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಮೀನಿನಲ್ಲಿ ತೇವಾಂಶ ಹೆಚ್ಚಾಗಿ ಬೆಳೆ ಕೊಳೆಯುವ ಭೀತಿ ಇದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ತಂಬಾಕು ಎಲೆ ಮುರಿಯುವ ಕೆಲಸಕ್ಕೂ ಕಲ್ಲು ಬಿದ್ದಂತಾಗಿದ್ದು, ಕಳೆದ ವರ್ಷ ಈ ಭಾಗದಲ್ಲಿ ಬರ, ಇದೀಗ ಪ್ರವಾಹದಿಂದ ಭಾರೀ ಹಾನಿ ಸಂಭವಿಸಿದೆ.

ಇದೇ ಭಾಗದ ವಿವಿಧ ಗ್ರಾಮಗಳಲ್ಲಿ ಬೆಳೆದಿದ್ದ ಹೂಕೋಸು, ಶುಂಠಿ, ಬಾಳೆ, ಅವರೆ, ಕಲ್ಲಂಗಡಿ ಹೊಲಗಳಲ್ಲಿ ನೀರು ತುಂಬಿ ಅಪಾರ ನಷ್ಟ ಉಂಟಾಗಿದೆ. ಜೊತೆಗೆ ಜಾನುವಾರುಗಳನ್ನು ತಮ್ಮ ಕೊಟ್ಟಿಗೆಯಲ್ಲೇ ಕಟ್ಟಿರುವುದರಿಂದ ಮೇವು ಇಲ್ಲದಂತಾಗಿದೆ. ಇನ್ನು ಮೇಕೆ ಕುರಿಗಳಿಗೂ ಇದೇ ಸ್ಥಿತಿ ಇದೆ.

ಉಕ್ಕಿದ ಅಣೆಕಟ್ಟೆ: ಸಮೀಪದ ಕಟ್ಟೆಮಳಲವಾಡಿಯಲ್ಲಿ ಲಕ್ಷ್ಮಣ ತೀರ್ಥ ಅಣೆಕಟ್ಟೆ ಮೇಲೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಇದನ್ನು ನೋಡಲು ಸುತ್ತಮುತ್ತಲ ಗ್ರಾಮಸ್ಥರು ಧಾವಿಸುತ್ತಿದ್ದಾರೆ. ಯುವಕರು ಸೆಲ್ಫಿಗೆ ಮುಗಿಬೀಳುತ್ತಿದ್ದಾರೆ. ಅಣೆಕಟ್ಟೆಗೆ ಪ್ರವಾಹದಲ್ಲಿ ತೇಲಿ ಬಂದಿರುವ ದೊಡ್ಡ ಗಾತ್ರದ ಮೀನು ಹಿಡಿಯುತ್ತಿರುವ ಬೆಸ್ತರು ಭಾರೀ ವ್ಯಾಪಾರ ನಡೆಸುತ್ತಿದ್ದಾರೆ.

ಹಲವರು ಪೊಲೀಸ್‌ ಕಣ್ಗಾವಲು ತಪ್ಪಿಸಿ ನದಿಯಲ್ಲಿ ತೇಲಿಬರುವ ಬೃಹತ್‌ ಗಾತ್ರದ ಮರದ ದಿಮ್ಮಿಗಳು ತೆಂಗಿನಕಾಯಿಗಳನ್ನು ತೆಗೆದುಕೊಳ್ಳಲು ಹರ ಸಾಹಸಪಟ್ಟರು. ಇನ್ನು ತೊಂಡಾಳು, ಅಗ್ರಹಾರ ಸುತ್ತಮುತ್ತಲಿನ ಗ್ರಾಮದ ಹೊಳೆಯಂಚಿನ ರೈತರ ಜಮೀನಿಗೆ ಭಾರೀ ಗಾತ್ರದ ಮರಗಳು ಪ್ರವಾಹದಲ್ಲಿ ತೇಲಿ ಬಂದಿವೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.