ಕರಾವಳಿಯಾದ್ಯಂತ ಹೈ ಅಲರ್ಟ್ ; ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ತೀವ್ರ ನಿಗಾ
Team Udayavani, Aug 16, 2019, 9:33 PM IST
ಮಂಗಳೂರು/ಉಡುಪಿ: ಕರ್ನಾಟಕ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಸ್ಥಿತಿ ಘೋಷಣೆ ಮಾಡಿದೆ. ಅದರಂತೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವ ಕರಾವಳಿ ಭಾಗದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಅದರಂತೆ ಮಂಗಳೂರು ಬಂದರು ಪ್ರದೇಶ, ಬಜ್ಪೆ ವಿಮಾನ ನಿಲ್ದಾಣ, ಇನ್ಫೋಸಿಸ್ ಕ್ಯಾಂಪಸ್, ಕೆ.ಎಸ್. ಹೆಗ್ಡೆ ಮೆಡಿಕಲ್ ಆಸ್ಪತ್ರೆ, ಯನಪೋಯಾ ಆಸ್ಪತ್ರೆ, ಸೋಮೇಶ್ವರ ದೇವಸ್ಥಾನ, ಉಳ್ಳಾಲ ಮಸೀದಿ ಸೇರಿದಂತೆ ಕರಾವಳಿ ಭಾಗದ ಪ್ರಮುಖ ಕಟ್ಟಡಗಳು, ಪ್ರಾರ್ಥಾನಾ ಮಂದಿರಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.
ನಗರದಲ್ಲಿರುವ ಮುಡಿಪು ಇನ್ಫೋಸಿಸ್, ಮಂಗಳ ಗಂಗೋತ್ರಿ ಸೂರ್ಯ ಇನ್ಫೋಟೆಕ್, ಕ್ಷೇಮ ಆಸ್ಪತ್ರೆ, ನಿಟ್ಟೆ ಆಸ್ಪತ್ರೆ, ಕಟೀಲು ದೇವಸ್ಥಾನ, ಎಂ.ಎಸ್.ಇ.ಝಡ್., ಬಜ್ಪೆ ವಿಮಾನ ನಿಲ್ದಾಣ ಸೇರಿದಂತೆ ಹಲವು ಕಡೆಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಆಗಮಿಸಿ ಪರಿಶೀಲನೆ ನಡೆಸಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಕಡಲ ತೀರದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ದೋಣಿ ಅಥವಾ ಇನ್ಯಾವುದೇ ವಸ್ತುಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 100ನ್ನು ಸಂಪರ್ಕಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮೀನುಗಾರ ಸಮುದಾಯದವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮೈ ಬೀಟ್ ಮೈ ಪ್ರೈಡ್ ಅಭಿಯಾನದ ಅಡಿಯಲ್ಲಿ ಈ ತಪಾಸಣೆ ನಡೆಯುತ್ತಿದೆ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ