ಅತಿವೃಷ್ಟಿ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡ


Team Udayavani, Aug 17, 2019, 3:09 AM IST

ativrushti

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ನಷ್ಟದ ಅಂದಾಜು ಮಾಡಲು ಕೇಂದ್ರ ಸರ್ಕಾರದ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಪ್ರಧಾನಿಯವರನ್ನು ನಿಯೋಗದಲ್ಲಿ ಭೇಟಿಯಾದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನಿಯವರು ಯಡಿಯೂರಪ್ಪ ನೇತೃತ್ವದ ನಿಯೋಗದೊಂದಿಗೆ ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿದರು. ರಾಜ್ಯದಲ್ಲಿ ಪ್ರವಾಹ, ಭೂಕುಸಿತದಿಂದಾಗಿ ಹಿಂದೆಂದೂ ಕಂಡರಿಯದ ನಷ್ಟ ಸಂಭವಿಸಿದೆ. ಮೂಲಸೌಕರ್ಯ ಪುನರ್‌ ನಿರ್ಮಾಣ ಹಾಗೂ ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಅನುದಾನದ ಅಗತ್ಯವಿದೆ. ಹಾಗಾಗಿ, ರಾಜ್ಯದಲ್ಲಿ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಿಗೆ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಪ್ರಧಾನಿ ಕೂಡಲೇ ಕೇಂದ್ರದ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸುವ ಭರವಸೆ ನೀಡಿದ್ದಾರೆ.

ಪ್ರಧಾನಿ ಭೇಟಿ ಬಳಿಕ ಪ್ರತಿಕ್ರಿಯಿಸಿದ ಯಡಿಯೂರಪ್ಪ, ರಾಜ್ಯದಲ್ಲಿ ಪ್ರವಾಹಪೀಡಿತ ಪ್ರದೇಶಗಳಲ್ಲಿನ ಹಾನಿ ಬಗ್ಗೆ ಪ್ರಧಾನಿಯವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಅವರಿಗೆ ಮನವರಿಕೆಯಾಗಿದೆ. ತಕ್ಷಣವೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಅಲ್ಲದೆ, 50- 55 ಸಾವಿರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, 65ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ಸೇರಿದಂತೆ ಪ್ರವಾಹದ ಹಾನಿಯ ತೀವ್ರತೆಯನ್ನು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡಲಾಗಿದೆ.

ಬಳಿಕ ರೈಲ್ವೆ ಸಚಿವರು, ನಾಗರಿಕ ವಿಮಾನಯಾನ ರಾಜ್ಯ ಸಚಿವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಂಬಂಧಪಟ್ಟ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ಈವರೆಗಿನ ಮಾಹಿತಿ ಪ್ರಕಾರ 40,000 ಕೋಟಿ ರೂ. ನಷ್ಟ ಉಂಟಾಗಿದೆ ಎಂಬ ಅಂದಾಜು ಇದೆ. ಆದರೆ, ಎಷ್ಟು ಮೊತ್ತದ ಪರಿಹಾರ ಹಾಗೂ ಅನುದಾನಕ್ಕೆ ಮನವಿ ಮಾಡಲಾಗಿದೆ ಎಂಬುದನ್ನು ಮಾಧ್ಯಮಗಳ ಎದುರು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

10,000 ಕೋಟಿಗೆ ಮನವಿ?: ಭೀಕರ ಪ್ರವಾಹದಿಂದಾಗಿ ರಾಜ್ಯದಲ್ಲಿ 40,000 ಕೋಟಿ ರೂ.ಗಿಂತ ಹೆಚ್ಚು ನಷ್ಟ ಸಂಭವಿಸಿದ್ದು, 10,000 ಕೋಟಿ ರೂ.ಪರಿಹಾರ/ವಿಶೇಷ ಅನುದಾನ ನೀಡಬೇಕು. ತಕ್ಷಣದ ಪರಿಹಾರ ಕಾರ್ಯಕ್ಕೆ 1,500 ಕೋಟಿ ರೂ.ನಿಂದ 2000 ಕೋಟಿ ರೂ. ಪರಿಹಾರ ವಿತರಿಸುವಂತೆ ಪ್ರಧಾನಿಯವರಿಗೆ ನಿಯೋಗ ಮನವಿ ಮಾಡಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.