ಪುತ್ತೂರಿನಲ್ಲಿ ಪ್ರವಾಹ ಸಂತ್ರಸ್ತರಿಗೆ ದೇಣಿಗೆ ಸಂಗ್ರಹ

ಜನಪ್ರತಿನಿಧಿಗಳು, ತಾಲೂಕು ಆಡಳಿತದ ಪ್ರಯತ್ನಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ

Team Udayavani, Aug 17, 2019, 5:00 AM IST

p-36

ಪುತ್ತೂರು: ಭೀಕರ ಮಳೆಯಿಂದ ಉಂಟಾಗಿರುವ ಪ್ರಾಕೃತಿಕ ವಿಕೋಪದಲ್ಲಿ ಸಂತ್ರಸ್ತರಾದವರಿಗೆ ನೆರವಾಗುವ ನಿಟ್ಟಿನಲ್ಲಿ ತಾಲೂಕು ಆಡಳಿತ, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶುಕ್ರವಾರ ಪುತ್ತೂರು ನಗರದಲ್ಲಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡಲಾಯಿತು.

ದೇಣಿಗೆ ಸಂಗ್ರಹ ಅಭಿಯಾನಕ್ಕೆ ದರ್ಬೆ ವೃತ್ತದ ಬಳಿ ಬೆಳಗ್ಗೆ ಚಾಲನೆ ನೀಡಲಾಯಿತು. ನಗರದ ಮುಖ್ಯ ರಸ್ತೆಯ ಅಂಗಡಿ ಮುಂಗಟ್ಟುಗಳು, ಉದ್ಯಮಗಳು, ಸಾರ್ವಜನಿಕರಲ್ಲಿ ದೇಣಿಗೆ ಸಂಗ್ರಹಿಸಲಾಯಿತು.

ಪ್ರೀತಿಯಿಂದ ನೀಡಿ
ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ ಮಾತನಾಡಿ, ಪ್ರವಾಹ ಹಾಗೂ ಪ್ರಾಕೃತಿಕ ವಿಕೋಪದಿಂದ ರಾಜ್ಯಾದ್ಯಂತ ನೊಂದವರು, ಬೆಂದವರು ನಮ್ಮಂತೆ ಇರುವವರು. ಅವರ ನೋವು ನಮ್ಮ ನೋವು ಕೂಡ ಎಂಬುದನ್ನು ಅರಿತುಕೊಂಡು ಇಚ್ಛಾನುಶಕ್ತಿ ಮತ್ತು ಪ್ರೀತಿಯಿಂದ ನೆರವು ನೀಡಬೇಕು ಎಂದು ವಿನಂತಿಸಿದರು.

ನಮ್ಮ ಜವಾಬ್ದಾರಿ
ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಎಲ್ಲವನ್ನೂ ಕಳೆದುಕೊಂಡು ಅನಾಥರಾದವರ ಕಣ್ಣೀರು ಒರೆಸಿ ಪುನರ್ವಸತಿ ಕಲ್ಪಿಸಿಕೊಡುವುದು ನಮ್ಮ ಜವಾಬ್ದಾರಿ. ನೆರವಾಗುವ ಮನಸ್ಥಿತಿ ನಮ್ಮದಾಗಬೇಕು. ಪೂರ್ಣ ಮನಸ್ಸಿನಿಂದ 1 ರೂ. ನೀಡಿದರೂ ಅಸಹಾಯಕರಿಗೆ ನೆರವಾಗುತ್ತದೆ. ಅದು ಮುಖ್ಯಮಂತ್ರಿ ಪರಿಹಾರ ನಿಧಿಯ ಮೂಲಕ ಸಂತ್ರಸ್ತರಿಗೆ ಸೇರುತ್ತದೆ ಎಂದು ಹೇಳಿದರು.

ತಿಂಗಳ ವೇತನ ಘೋಷಣೆ

ಶಾಸಕ ಸಂಜೀವ ಮಠಂದೂರು ಹಾಗೂ ದ.ಕ.ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ತಮ್ಮ ಒಂದು ತಿಂಗಳ ಸಂಬಳವನ್ನು ಸಂತ್ರಸ್ತರ ನಿಧಿಗೆ ನೀಡುವುದಾಗಿ ಘೋಷಿಸಿದರು. ಉದ್ಯಮಿ ವಾಮನ ಪೈ 5 ಸಾವಿರ ರೂ. ಚೆಕ್‌ ನೀಡಿ ಚಾಲನೆ ನೀಡಿದರು. ಒಂದು ನಿಮಿಷದಲ್ಲಿ ಸುಮಾರು 25 ಸಾವಿರ ರೂ. ಸಂಗ್ರಹವಾಯಿತು. ಸ್ವತಃ ಸಹಾಯಕ ಆಯುಕ್ತರು, ಶಾಸಕರು, ಜನಪ್ರತಿನಿಧಿಗಳು ದೇಣಿಗೆ ನೀಡಿ, ಅಂಗಡಿ ಮುಂಗಟ್ಟುಗಳಿಗೆ ತೆರಳಿ ದೇಣಿಗೆ ನೀಡಲು ವಿನಂತಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ರೋಟರಿ, ಜೆಸಿಐ, ಲಯನ್ಸ್‌ ಸಹಿತ ಸಂಘ ಸಂಸ್ಥೆಗಳ ಪದಾಧಿಕಾರಿಗಳು ದೇಣಿಗೆ ಸಂಗ್ರಹದಲ್ಲಿ ಪಾಲ್ಗೊಂಡರು.

ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌, ತಹಶೀಲ್ದಾರ್‌ ಅನಂತ ಶಂಕರ್‌, ತಾ.ಪಂ. ಇಒ ನವೀನ್‌ ಭಂಡಾರಿ, ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್‌ ಜೈನ್‌, ಗೋಪಾಲಕೃಷ್ಣ ಹೇರಳೆ, ಚಂದ್ರಶೇಖರ್‌ ಬಪ್ಪಳಿಗೆ, ರಾಮದಾಸ್‌ ಹಾರಾಡಿ, ಆರ್‌.ಸಿ. ನಾರಾಯಣ, ಜನಪ್ರತಿನಿಧಿಗಳು ಹಾಗೂ ಪ್ರಮುಖರಾದ ಸಾಜ ರಾಧಾಕೃಷ್ಣ ಆಳ್ವ, ಗೌರಿ ಬನ್ನೂರು, ಶಯನಾ ಜಯಾನಂದ, ಮಮತಾ ರಂಜನ್‌, ದೀಕ್ಷಾ ಪೈ, ರಾಜೇಶ್‌ ಬನ್ನೂರು, ಅಧಿಕಾರಿಗಳಾದ ಅರುಣ್‌ ಕುಮಾರ್‌, ಶ್ವೇತಾ ಕಿರಣ್‌, ರೇಖಾ, ಎಂ. ಮಾಮಚ್ಚನ್‌, ಪ್ರಮೋದ್‌ ಕುಮಾರ್‌ ಪಾಲ್ಗೊಂಡರು.

3.28 ಲಕ್ಷ ರೂ. ಸಂಗ್ರಹ
ಪ್ರಾಕೃತಿಕ ವಿಕೋಪದಲ್ಲಿ ಸಂತ್ರಸ್ತರಾದವರಿಗೆ ನೆರವಾಗುವ ನಿಟ್ಟಿನಲ್ಲಿ ತಾಲೂಕು ಆಡಳಿತ, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶುಕ್ರವಾರ ಪುತ್ತೂರು ನಗರದಲ್ಲಿ ನಡೆಸಲಾದ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಒಟ್ಟು 3,28,135 ರೂ. ಸಂಗ್ರಹವಾಗಿದೆ. ಒಟ್ಟು 1,45,130 ರೂ. ನಗದು ಹಾಗೂ 1,83,005 ರೂ. ಚೆಕ್‌ ಮೂಲಕ ಸಂಗ್ರಹವಾಗಿದೆ. ಸಂಗ್ರಹವಾದ ದೇಣಿಗೆಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು. ದೇಣಿಗೆ ನೀಡಿದ ಎಲ್ಲ ಸಾರ್ವಜನಿಕರಿಗೆ ಧನ್ಯವಾದ ಸಲ್ಲಿಸುವುದಾಗಿ ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.