ಮೀನುಗಾರಿಕೆ; 15 ದಿನಗಳಲ್ಲಿ 20 ಕೋ.ರೂ. ನಷ್ಟ

ಹವಾಮಾನ ವೈಪರೀತ್ಯ, ಸಮುದ್ರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ

Team Udayavani, Aug 17, 2019, 5:01 AM IST

p-38

ಮಹಾನಗರ: ತೂಫಾನ್‌, ಸಮುದ್ರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಹಾಗೂ ಹವಾಮಾನ ವೈಪರೀತ್ಯದಿಂದ ಮೀನುಗಾರಿಕ ಕ್ಷೇತ್ರ ಈ ವರ್ಷದ ಆರಂಭದಲ್ಲೇ ಭಾರಿ ಆಘಾತವನ್ನು ಅನುಭವಿಸಿದ್ದು, ಮೀನುಗಾರಿಕಾ ಋತು ಆರಂಭವಾಗಿ 15 ದಿನಗಳಲ್ಲೇ 20 ಕೋ.ರೂ.ಗೂ ಅಧಿಕ ನಷ್ಟ ಅನುಭವಿಸಿದೆ.

60 ದಿನಗಳ ರಜೆಯ ಬಳಿಕ ಬಹುನಿರೀಕ್ಷೆಯೊಂದಿಗೆ ಆ. 1ರಂದು ಸಮುದ್ರಕ್ಕೆ ತೆರಳಿದ್ದ ಬೋಟುಗಳು ತೂಫಾನ್‌ನಿಂದಾಗಿ ಮೀನುಗಾರಿಕೆ ನಡೆಸಲು ಸಾಧ್ಯವಾಗದೆ ಮರಳಿ ದಡ ಸೇರಿವೆ. ಪರಿಣಾಮ ಮೀನುಗಾರಿಕೆ, ಇದಕ್ಕೆ ಹೊಂದಿಕೊಂಡಿರುವ ಮಂಜುಗಡ್ಡೆ, ಮೀನು ಮಾರಾಟಗಾರರು, ಸಾಗಾಟಗಾರರು ಸಹಿತ ಇತರ ಕ್ಷೇತ್ರಗಳು ಭಾರಿ ಹಿನ್ನಡೆ ಅನುಭವಿಸಿವೆ. ಮೀನುಗಾರಿಕೆಯೊಂದೇ ಸುಮಾರು 20 ಕೋ.ರೂ. ಗೂ ಅಧಿಕ ನಷ್ಟ ಅನುಭವಿಸಿದೆ ಎಂದು ಮೀನುಗಾರಿಕೆ ಇಲಾಖೆ ಅಂದಾಜಿಸಿದೆ.

ಮಂಗಳೂರು ಮೀನುಗಾರಿಕಾ ದಕ್ಕೆಯ ಮೂಲಕ ಸುಮಾರು 850 ಟ್ರಾಲ್ ಬೋಟುಗಳು, 90 ಪರ್ಸಿನ್‌ ಬೋಟು ಆಗಸ್ಟ್‌ 1ರಿಂದ ಮೀನುಗಾರಿಕೆ ಆರಂಭಿಸಿದ್ದವು. ಪ್ರತಿಯೊಂದು ಬೋಟ್ನ್ನು ಮೀನುಗಾರಿಕೆಗೆ ಅಣಿಗೊಳಿಸಿ ಸಮುದ್ರಕ್ಕಿಳಿಸಲು ಆರಂಭದಲ್ಲಿ ಲಕ್ಷಾಂತರ ರೂ. ವಿನಿಯೋಗಿಸಬೇಕಾಗುತ್ತದೆ. ಮೀನುಗಾರಿಕೆಗೆ ತೆರಳಿದ ಬಳಿಕ ಟ್ರಾಲ್ಬೋಟು ಸುಮಾರು 8ರಿಂದ 10 ದಿನಗಳವರೆಗೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿ ಹಿಂದಿರುಗುತ್ತವೆ. ಸುಮಾರು 5,000 ಲೀಟರ್‌ ಡೀಸಿಲ್ ತುಂಬಿಸಬೇಕಾಗುತ್ತದೆ. ಒಂದು ಬಾರಿ ಮೀನುಗಾರಿಕೆ ನಡೆಸಿ ಹಿಂದಿರುಗುವಾಗ ಅಂದಾಜು 6 ಲಕ್ಷ ರೂ.ಮೌಲ್ಯದ ಮೀನು ದೊರೆತರೆ ಮಾತ್ರ ವೆಚ್ಚವನ್ನು ಸರಿದೂಗಿಸಲು ಸಾಧ್ಯವಾಗುತ್ತದೆ ಎಂದು ಮೀನುಗಾರರು ತಿಳಿಸುತ್ತಾರೆ.

ಆಗಸ್ಟ್‌ ತಿಂಗಳಿನಲ್ಲಿ ಮೀನುಗಾರರಿಗೆ ಹೆಚ್ಚು ಲಾಭ ತರುವ ಕಪ್ಪ ಬಂಡಾಸ್‌, ಮದಿಮಲ್ ಮೀನು ಲಭ್ಯವಾಗುತ್ತವೆ. ಆದರೆ ಈ ಬಾರಿ ಹವಾಮಾನ ವೈಪ ರೀತ್ಯದಿಂದ ಈ ಮೀನುಗಳ ಲಭ್ಯತೆ ಕೂಡ ಕುಸಿದಿದೆ. ಸಮುದ್ರ ಶಾಂತವಾಗಿದ್ದ ಸಂದರ್ಭದಲ್ಲೂ ಮೀನುಗಾರಿಕೆಗೆ ತೆರಳಿದ ಬೋಟ್‌ಗಳು ನಿರೀಕ್ಷಿತ ಮಟ್ಟದಲ್ಲಿ ಮೀನು ಲಭ್ಯವಾಗದೆ ನಷ್ಟ ಅನುಭವಿಸಿದೆ.

ಮೀನುಗಾರಿಕೆ ಆರಂಭಗೊಂಡಿರುವುದರಿಂದ ಇನ್ನು ಯಥೇಚ್ಛವಾಗಿ ಕಡಿಮೆ ದರದಲ್ಲಿ ಮೀನು ಲಭ್ಯವಾಗಬಹುದು ಎಂಬ ನಿರೀಕ್ಷೆ ಮೀನುಪ್ರಿಯರಲ್ಲಿ ಮೂಡಿಸಿತ್ತು. ಇದೀಗ ಅವರಲ್ಲಿ ನಿರಾಸೆ ಮೂಡಿಸಿದೆ. ಕಳೆದ ಮೀನುಗಾರಿಕಾ ಋತುವಿನಲ್ಲಿ ಮೀನುಕ್ಷಾಮದ ಜತೆಗೆ ಚಂಡಮಾರುತದಿಂದಾಗಿ ಪದೇ ಪದೇ ಸಮುದ್ರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣಗೊಂಡು ಮೀನುಗಾರರು ಸಂಕಷ್ಟ ಎದುರಿಸಿದ್ದರು. ಆರಂಭದಲ್ಲೇ ಮತ್ತೆ ಇದೇ ಪರಿಸ್ಥಿತಿ ಎದುರಾಗಿರುವುದು ಮೀನುಗಾರರನ್ನು ಆತಂಕದಲ್ಲಿ ಸಿಲುಕಿಸಿದೆ.

ಮೀನುಗಾರರಿಗೆ ನಿರಾಸೆ
ಸಮುದ್ರದಲ್ಲಿ ಚಂಡಮಾರುತದಿಂದಾಗಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಗಳು ಹಿಂದಿರುಗಿವೆ. ಇದರಿಂದ ಮೀನುಗಾರರಿಗೆ ನಿರಾಸೆಯಾಗಿದೆ.
ಮೀನುಗಾರಿಕಾ ಕ್ಷೇತ್ರಕ್ಕೆ ನಷ್ಟ
ಚಂಡಮಾರುತದಿಂದಾಗಿ ಆಗಸ್ಟ್‌ ಆರಂಭದಲ್ಲೇ ಬೋಟ್‌ಗಳಿಗೆ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಲು ಸಾಧ್ಯವಾಗದೆ ದಕ್ಕೆಯಲ್ಲೇ ಲಂಗರು ಹಾಕಿದ್ದವು. ಇದರಿಂದ ಒಟ್ಟು ಮೀನುಗಾರಿಕಾ ಕ್ಷೇತ್ರ ಹೆಚ್ಚಿನ ನಷ್ಟ ಅನುಭವಿಸಿದೆ. ಇನ್ನೆರಡು ದಿನಗಳಲ್ಲಿ ಬೋಟುಗಳು ಸಮುದ್ರಕ್ಕೆ ಇಳಿಯುವ ಸಾಧ್ಯತೆ ಇದೆ.
– ತಿಪ್ಪೇಸ್ವಾಮಿ, ಮೀನುಗಾರಿಕಾ ಉಪ ನಿರ್ದೇಶಕರು

•ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.