ಎಡದಂಡೆ ಕಾಲುವೆಗೆ ನೀರು ಬಿಡಲು ಒತ್ತಾಯ


Team Udayavani, Aug 18, 2019, 1:40 PM IST

kopala-tady-2

ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಮುನಿರಾಬಾದ್‌ ಬಸ್‌ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.

ಕೊಪ್ಪಳ: ತುಂಗಭದ್ರಾ ಗೇಟ್ ದುರಸ್ತಿ ಹಿನ್ನೆಲೆಯಲ್ಲಿ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಿಲ್ಲ. ಕೂಡಲೇ ಲಕ್ಷಾಂತರ ರೈತರ ಭತ್ತ ಉಳಿಸಲು ಕಾಲುವೆಗೆ ನೀರು ಹರಿಸಬೇಕೆಂದು ಒತ್ತಾಯಿಸಿ ತಾಲೂಕಿನ ಮುನಿರಾಬಾದ್‌ ಬಸ್‌ ನಿಲ್ದಾಣದಲ್ಲಿ ಕಾಂಗ್ರೆಸ್‌ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ವೇಳೆ ಮಾಜಿ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಸರ್ಕಾರ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ರೈತರೊಂದಿಗೆ ಆಟವಾಡುತ್ತಿದ್ದಾರೆ. ವಾರದ ಹಿಂದಷ್ಟೆ ಎಡದಂಡೆ ನಾಲೆಗೆ ಬೋಂಗಾ ಬಿದ್ದು, ನೀರು ಬರುವುದು ತಡವಾಗಿದೆ. ಸದ್ಯ ಮೇಲ್ಮಟ್ಟದ ಕಾಲುವೆ ಗೇಟ್ ರಿಪೇರಿ ವೇಳೆ ಮುಖ್ಯ ಕಾಲುವೆಗೆ ಧಕ್ಕೆಯಾಗಿ ನೀರು ನಿಲ್ಲಿಸಲಾಗಿದೆ. ಇದರಿಂದ ನಮ್ಮ ರೈತರಿಗೆ ತೊಂದರೆಯಾಗಿದೆ ಎಂದು ಆರೋಪಿಸಿದರು.

ಸಿ.ಎಂ. ಯಡಿಯೂರಪ್ಪ ಅವರು ಕೆಆರ್‌ಎಸ್‌ ಜಲಾಶಯಕ್ಕೆ ಸಣ್ಣ ಧಕ್ಕೆಯಾದರೆ ತಕ್ಷಣ ಸ್ಪಂದಿಸಿ ಸಮಸ್ಯೆ ಬಗೆಹರಿಸುತ್ತಾರೆ. ಆದರೆ ತುಂಗಭದ್ರಾ ಜಲಾಶಯದ ವಿಷಯದಲ್ಲಿ ಮಲತಾಯಿ ಧೋರಣೆ ತಾಳುತ್ತಾರೆ. ಈ ವರ್ತನೆ ಸರಿಯಲ್ಲ. ಈ ಭಾಗದಲ್ಲಿ ಜಲಾಶಯದ ನೀರನ್ನೇ ನಂಬಿ ಲಕ್ಷಾಂತರ ರೈತರು ಜೀವನ ನಡೆಸುತ್ತಿದ್ದಾರೆ. ಸಿಎಂ ರೈತರ ಜೀವನದೊಂದಿಗೆ ಆಟವಾಡುತ್ತಿದ್ದಾರೆ. ಗೇಟ್ ಮುರಿದು ನಾಲ್ಕು ದಿನ ಗತಿಸಿದರೂ ಸಕಾಲಕ್ಕೆ ಗೇಟ್ ದುರಸ್ತಿ ಮಾಡಲಾಗಲಿಲ್ಲ. ಡ್ಯಾಂ ವಿಷಯದಲ್ಲಿ ಒಂದೇ ದಿನದಲ್ಲಿ ದುರಸ್ತಿ ಕಾರ್ಯ ನಡೆಯಬೇಕು. ಏನಾದರೂ ಹೆಚ್ಚು ಕಡಿಮೆಯದರೆ ಅದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದರು.

ಡ್ಯಾಂನಲ್ಲಿದ್ದ ನೀರನ್ನು ರೈತರಿಗೆ ಬಳಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಗೇಟ್ ಕಿತ್ತ ಕಾರಣ ಎಡ ದಂಡೆ ಭಾಗದ ರೈತರಿಗೆ ನೀರು ಹರಿ ಬಿಟ್ಟಿಲ್ಲ. ತಕ್ಷಣವೇ ಗೇಟ್ ದುರಸ್ತಿ ಮಾಡಿಸುವುದನ್ನು ಬಿಟ್ಟು ಸಿಎಂ ಸಚಿವ ಸಂಪುಟದಲ್ಲಿ ಬ್ಯೂಸಿಯಾಗಿದ್ದಾರೆ. ವಾರದಿಂದ ನಮ್ಮ ರೈತರು ಕಷ್ಟ ಅನುಭವಿಸಿದರೂ ಚಕಾರ ಎತ್ತುತ್ತಿಲ್ಲ. ಎಡ ಭಾಗದ ಶಾಸಕರು, ಸಂಸದರು ಸುಮ್ಮನೇ ಭೇಟಿ ನೀಡುತ್ತಿದ್ದು, ಸರ್ಕಾರವನ್ನು ಒತ್ತಾಯಿಸುತ್ತಿಲ್ಲ ಎಂದು ಆರೋಪಿಸಿದರು.

ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ತುಂಗಭದ್ರಾ ಮಂಡಳಿ ಎಡ ಭಾಗದ ರೈತರನ್ನು ಕಡೆಗಣಿಸಿದೆ. ಅಲ್ಲಿನ ಅಧಿಕಾರಿಗಳು ಆಂಧ್ರಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಮೊದಲಿನಿಂದಲೂ ಎಡ ಭಾಗವನ್ನು ನಿರ್ಲಕ್ಷಿಸುತ್ತಿರುವುದು ಸರಿಯಲ್ಲ ಎಂದು ಗುಡಗಿದರು. ಕಾಲುವೆ ರಿಪೇರಿ ಮಾಡಿ ನೀರು ಬಿಡಬೇಕು. ಯಾವಾಗ ನೀರು ಬಿಡಲಾಗುತ್ತದೆ ಎಂದು ಭರವಸೆ ನೀಡಿದ ಮೇಲೆ ಪ್ರತಿಭಟನೆ ಕೈ ಬಿಡಲಾಗುವುದು ಎಂದು ರೈತರು ಪಟ್ಟು ಹಿಡಿದರು.

ಎಸಿ ಸಿ.ಡಿ. ಗೀತಾ ಹಾಗೂ ಟಿಬಿಪಿ ಸಿಇ ಎಸ್‌.ಎಚ್. ಮಂಜಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯ ವೇಳೆ ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ, ಜಿಪಂ ಸದಸ್ಯರಾದ ರಾಜಶೇಖರ್‌ ಹಿಟ್ನಾಳ್‌, ಅಮರೇಶ ಗೋನಾಳ, ತಾಪಂ ಅಧ್ಯಕ್ಷ ಬಾಲಚಂದ್ರನ್‌, ಮುಖಂಡರಾದ ರಡ್ಡಿ ಶ್ರೀನಿವಾಸ, ಬಸವರಾಜಸ್ವಾಮಿ ಮಳಿಮಠ, ರಾಜು ನಾಯಕ್‌, ಜನಾರ್ದನ ಹುಲಿಗಿ ಸೇರಿ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.