ನಳನಳಿಸುತ್ತಿವೆ ಮಳೆಯಾಶ್ರಿತ ಬೆಳೆಗಳು

ನದಿ ತೀರ ಹೊರತುಪಡಿಸಿ ಉಳಿದೆಡೆ ನೆರೆ ಹಾನಿ ಇಲ್ಲ

Team Udayavani, Aug 19, 2019, 10:43 AM IST

19-Agust-7

ಹೊನ್ನಾಳಿ: ತಾಲೂಕಿನ ಗ್ರಾಮವೊಂದರ ಜಮೀನಿನಲ್ಲಿ ರೈತರು ಸಂತಸದಿಂದ ಎಡೆಕುಂಟೆ ಹೊಡೆಯುವ ದೃಶ್ಯ.

ಹೊನ್ನಾಳಿ: ಈಚೆಗೆ 8-10 ದಿನ ಸುರಿದ ಹದ ಮಳೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಾದ್ಯಂತ ಬೆಳೆಗಳು ನಳನಳಿಸುತ್ತಿವೆ.

ಕೇವಲ 10 ದಿನಗಳ ಹಿಂದೆ ಮಳೆ ಕೊರತೆಯಿಂದ ಮೊಣಕಾಲು ಉದ್ದ ಬೆಳೆದಿದ್ದ ಮೆಕ್ಕೆಜೋಳ, ಊಟದಜೋಳ, ಸೂರ್ಯಕಾಂತಿ, ಹತ್ತಿ, ಚೋಟುದ್ದ ಬೆಳೆದಿದ್ದ ಶೇಂಗಾ, ರಾಗಿ, ಹುರುಳಿ ಬೆಳೆಗಳು ಒಣಗಲು ಪ್ರಾರಂಭವಾಗಿದ್ದವು. ಆದರೆ ವರುಣನ ಕೃಪೆಯಾಗಿ ಸತತ ಒಂದು ವಾರ ಮಳೆ ಸುರಿದು ಎಲ್ಲಾ ಬೆಳೆಗಳಿಗೆ ಜೀವಕಳೆ ಬಂದು ಈಗ ಹಚ್ಚಹಸಿರಿನಿಂದ ಕಂಗೊಳಿಸುತ್ತಿವೆ.

ಹೊನ್ನಾಳಿ ತಾಲೂಕಿನ ಮಳೆಯಾಶ್ರಿತ ಕತ್ತಿಗೆ, ಮಾರಿಕೊಪ್ಪ, ಹರಳಹಳ್ಳೆ, ದಿಡಗೂರು, ಬಳ್ಳೇಶ್ವರ, ಸೇರಿದಂತೆ ಇತರ ಗ್ರಾಮಗಳ ಜಮೀನುಗಳು ಹಾಗೂ ನ್ಯಾಮತಿ ತಾಲೂಕಿನ ನ್ಯಾಮತಿ, ಸುರಹೊನ್ನೆ, ಸೌಳಂಗ, ಚಿನ್ನಿಕಟ್ಟೆ, ಜೋಗ, ಆರುಂಡಿ, ಕೆಂಚಿಕೊಪ್ಪ ಗ್ರಾಮಗಳ ಮಳೆಯಾಶ್ರಿತ ಜಮೀನುಗಳು ನಳನಳಿಸುತ್ತಿವೆ.

ರೈತರು ಬೆಳೆಗಳ ಮಧ್ಯೆ ಬೆಳೆದಿರುವ ಕಳೆ ತೆಗೆಯಲು ಎಡೆಕುಂಟಿ ಹೊಡೆಯುವುದು, ಕ್ರಿಮಿನಾಶಕ ಸಿಂಪಡಿಸುವ ಕಾರ್ಯ ಶುರು ಮಾಡಿದ್ದಾರೆ. ಉತ್ತಮ ಮಳೆಯಿಂದ ಬೆಳೆ ಮೇಲೆ ಬಂದಿರುವ ಕಾರಣ ರೈತರು ನಗು ಮುಖದಿಂದಲೇ ಜಮೀನುಗಳ ಕೆಲಸ ಮಾಡುತ್ತಿದ್ದಾರೆ. ಇನ್ನೊಂದು ವಾರ ಬಿಸಿಲು ಬಿದ್ದು ನಂತರ ಬೆಳೆಗಳು ಕಾಳು ಕಟ್ಟುವ ಸಮಯದಲ್ಲಿ ಮಳೆಯಾದರೆ ನಾವು ಗೆದ್ದಂತೆ ಎಂದು ರೈತರು ಹೇಳುತ್ತಾರೆ.

ಮುಂದಿನ ದಿನಗಳಲ್ಲಿ ಕೈಕೊಡದೆ ಮಳೆ ಬಂದರೆ ಪ್ರಸ್ತುತ ವರ್ಷದ ಎರಡು ಬೆಳೆಗಳನ್ನು ಬೆಳೆಯಲು ಅವಕಾಶವಿದೆ. ಚಳಿಗಾಲದಲ್ಲಿ ಬಿಳಿಜೋಳ, ಗೋಧಿ, ನೆಲಗಡಲೆ ಸೇರಿದಂತೆ ಇತರ ಚಳಿಗಾಲದ ಬೆಳೆಗಳನ್ನು ಬೆಳೆಯಬಹುದಾಗಿದೆ ಎಂದು ರೈತರು ಹೇಳುತ್ತಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.