ತಲಾಖ್ ಕೊಟ್ಟ ಪತಿ ವಿರುದ್ಧ ದೂರು ನೀಡಿದ ಪತ್ನಿಯನ್ನು ಬೆಂಕಿಹಚ್ಚಿ ಕೊಂದ ಗಂಡ


Team Udayavani, Aug 19, 2019, 3:25 PM IST

Complaint

ಶ್ರಾವಸ್ತಿ(ಉತ್ತರಪ್ರದೇಶ): ತಲಾಖ್ ಮೂಲಕ ವಿಚ್ಛೇದನ ನೀಡಿದ್ದ ಗಂಡನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮುಂದಾಗಿದ್ದ ಪತ್ನಿ(22ವರ್ಷ)ಯನ್ನು ಗಂಡ ಹಾಗೂ ಮಾವ ಜೀವಂತವಾಗಿ ಸುಟ್ಟುಹಾಕಿರುವ ಹೃದಯವಿದ್ರಾವಕ ಘಟನೆ ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ.

ಮುಸ್ಲಿಂ ಮಹಿಳೆ(ವಿವಾಹ ರಕ್ಷಣಾ ಹಕ್ಕುಗಳ ಕಾಯ್ದೆ) ಕಾಯ್ದೆ 2019 ಜುಲೈ 25ರಂದು ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿತ್ತು. ಈ ಮಸೂದೆ ಪ್ರಕಾರ, ಬರವಣಿಗೆ ಮೂಲಕವಾಗಲಿ, ಮೌಖಿಕವಾಗಿ ಹಾಗೂ ವಿದ್ಯುನ್ಮಾನ ಸಂಪರ್ಕದ ಮೂಲಕ ತ್ರಿವಳಿ ತಲಾಖ್ ನೀಡುವುದು ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ತ್ರಿವಳಿ ತಲಾಖ್ ಆರೋಪ ಸಾಬೀತಾದಲ್ಲಿ ಮೂರು ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಮೊಬೈಲ್ ಕರೆ ಮಾಡಿ ತಲಾಖ್ ಕೊಟ್ಟಿದ್ದ ಪತಿ:

ಸಂತ್ರಸ್ತೆಯ ತಂದೆಯ ದೂರಿನ ಪ್ರಕಾರ, ಆಗಸ್ಟ್ 6ರಂದು ಮುಂಬೈನಲ್ಲಿ ಉದ್ಯೋಗದಲ್ಲಿರುವ ಗಂಡ ನಫೀಸ್ ಹೆಂಡತಿಗೆ(ಸಯೀದಾ) ಮೊಬೈಲ್ ಕರೆ ಮಾಡಿ ತಲಾಖ್ ನೀಡಿದ್ದ. ಈ ಹಿನ್ನೆಲೆಯಲ್ಲಿ ಮಗಳು ಸಯೀದಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ತೆರಳಿದ್ದಳು. ಆದರೆ ಪೊಲೀಸರು ಪತಿ ಮುಂಬೈಯಿಂದ ಬರಲಿ ಇತ್ಯರ್ಥಪಡಿಸುವ ಭರವಸೆ ನೀಡಿ ಸಯೀದಾಳನ್ನು ವಾಪಸ್ ಕಳುಹಿಸಿಕೊಟ್ಟಿರುವುದಾಗಿ ತಂದೆ ತಿಳಿಸಿದ್ದಾರೆ.

ಪತಿ ತನಗೆ ನಿರಂತರವಾಗಿ ಹೊಡೆಯುತ್ತಿದ್ದರು. ಆದರೆ ಯಾವತ್ತೂ ನಾನು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಈಗ ತಲಾಖ್ ನೀಡಿದ್ದಾರೆ ಎಂದು ಸಯೀದಾ ಮತ್ತು ಪತಿ ನಫೀಸ್ ನನ್ನು ಠಾಣೆಗೆ ಕರೆಯಿಸಿದ್ದಾಗ ಆರೋಪಿಸಿದ್ದಳು. ಕೊನೆಗೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಮಾಡಿಸಿದ್ದರು. ತನಗೆ ಮತ್ತೊಂದು ಅವಕಾಶ ಕೊಡಿ ಎಂದು ಪತಿ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದ ಎಂದು ಸಯೀದಾ ತಂದೆ ರಮ್ಜಾನ್ ಅಲಿ ಖಾನ್ ವಿವರಿಸಿದ್ದಾರೆ.

ಕಳೆದ ವಾರ ದಂಪತಿಯನ್ನು ಠಾಣೆಗೆ ಕರೆಯಿಸಿ, ನಫೀಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮುನ್ನ, ನೀವಿಬ್ಬರೂ ಒಟ್ಟಿಗೆ ಇರಿ ಎಂದು ಸಲಹೆ ನೀಡಿ ಕಳುಹಿಸಿಕೊಟ್ಟಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಪತಿ, ಪತ್ನಿ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಗಂಡ ಮತ್ತು ಮಾವ ಆಕೆಯನ್ನು ಹೊರಗೆ ತಳ್ಳಿ, ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿರುವುದಾಗಿ ವರದಿ ತಿಳಿಸಿದೆ. ಈ ಘಟನೆಗೆ ಸಯೀದಾಳ ಅಪ್ರಾಪ್ತ ವಯಸ್ಸಿನ ಮಗಳು ಪ್ರತ್ಯಕ್ಷ ಸಾಕ್ಷಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೂರನ್ನು ದಾಖಲಿಸಿಕೊಂಡಿರುವ ಪೊಲೀಸರು ನಫೀಸ್ ಹಾಗೂ ತಂದೆಯನ್ನು ಬಂಧಿಸಿದ್ದು, ಉಳಿದವರನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೂರಿನಲ್ಲಿ ಎಂಟು ಮಂದಿಯ ಹೆಸರನ್ನು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಉಳಿದವರನ್ನು ಬಂಧಿಸಲು ಕಾರ್ಯಪ್ರವೃತ್ತರಾಗಿರುವುದಾಗಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಬಿಎಸ್ ದುಬೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.