4 ತಿಂಗಳಿಂದ ಪ್ರೌಢಶಾಲೆ ಶಿಕ್ಷಕರಿಗೆ ಸಂಬಳ ಕೊಟ್ಟಿಲ್ಲ

ಡಿಡಿಪಿಐ ಕಚೇರಿ ಮುಂದೆ ಧರಣಿ • ವೇತನ ಬಿಡುಗಡೆಗೆ ಆಗ್ರಹ

Team Udayavani, Aug 19, 2019, 4:09 PM IST

kolar-tdy-03

ಢಶಾಲಾ ಶಿಕ್ಷಕರಿಗೆ ಜೂನ್‌ ಮುಗಿಯುತ್ತಾ ಬಂದರೂ ಇನ್ನೂ ಮೇ ತಿಂಗಳ ಸಂಬಳವೇ ಆಗದಿರುವ ಕುರಿತು ಕ್ರಮಕ್ಕೆ ಆಗ್ರಹಿಸಿ ಶಿಕ್ಷಕ ಸಂಘಟನೆಗಳ ಮುಖಂಡರು ಬಿಇಒಗೆ ಮನವಿ ಸಲ್ಲಿಸಿದರು.

ಕೋಲಾರ: ಜಿಲ್ಲೆಯ ವಿವಿಧ ತಾಲೂಕುಗಳ ಪ್ರೌಢಶಾಲಾ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳಿಂದ ಸಂಬಳ ಬಂದಿಲ್ಲ, ಕುಟುಂಬ ನಿರ್ವಹಣೆಗೆ ಹೆಣಗಾಡುತ್ತಿರುವ ಪರಿಸ್ಥಿತಿ ತಲೆದೋರಿದ್ದು, ಕೂಡಲೇ ವೇತನ ಅನುದಾನ ಬಿಡುಗಡೆಗೆ ಆಗ್ರಹಿಸಿ ಡಿಡಿಪಿಐ ಕಚೇರಿ ಮುಂದೆ ಶಿಕ್ಷಕರು ಧರಣಿ ನಡೆಸಿದರು.

ಜಿಲ್ಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮುರಳಿ ಮೋಹನ್‌ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ವೇತನವನ್ನೇ ನಂಬಿರುವ ಶಿಕ್ಷಕರ ಬದುಕು ಸಂಕಷ್ಟದಲ್ಲಿದೆ. ಈ ಸಂಬಂಧ ಡಿಡಿಪಿಐ, ಬಿಇಒಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಅನ್ಯಾಯ: ಕೋಲಾರ, ಶ್ರೀನಿವಾಸಪುರ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಶಿಕ್ಷಕರಿಗೆ ವೇತನವಾಗಿಲ್ಲ, ರಾಷ್ಟ್ರೀಯ ಮಾಧ್ಯಮ ಶಿಕ್ಷಣ ಅಭಿಯಾನದಡಿ ನೇಮಕಗೊಂಡ ಶಿಕ್ಷಕರಿಗೂ ವೇತನ ನೀಡದೇ ಇಲಾಖೆ ಅನ್ಯಾಯ ಎಸಗಿದೆ ಎಂದು ದೂರಿದರು.

ಸಾಧನೆಗೆ ನೀಡಿದ ಕೊಡುಗೆ: ಶಾಲಾ ಅವಧಿಗೆ ಮುನ್ನಾ, ಅವಧಿಯ ನಂತರವೂ ಕೆಲಸ ಮಾಡುವ ಶಿಕ್ಷಕರು ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವಲ್ಲಿ ಅವಿಶ್ರಾಂತ ಶ್ರಮಿಸುತ್ತಿದ್ದಾರೆ. ಜಿಲ್ಲೆಗೆ 7ನೇ ಸ್ಥಾನ ತಂದುಕೊಟ್ಟು ಘನತೆ ಉಳಿಸಿದ ಶಿಕ್ಷಕರಿಗೆ ಕಳೆದ 4 ತಿಂಗಳಿಂದ ವೇತನ ನೀಡದೇ ಇರುವುದೇ ಸಾಧನೆಗೆ ನೀಡಿದ ಕೊಡುಗೆಯಾಗಿದೆ ಎಂದು ವ್ಯಂಗ್ಯವಾಡಿದರು. ಮೇ ತಿಂಗಳಿಂದ ಸಂಬಳ ಬಟವಾಡೆಯಾಗದ ಕಾರಣ ಶಿಕ್ಷಕರು ಜೀವನ ಮುನ್ನಡೆಸಲು ಸಂಕಷ್ಟ ಅನುಭವಿಸು ವಂತಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಕೂಡಲೇ ಬಿಡುಗಡೆ ಮಾಡಿ: ಸಹಶಿಕ್ಷಕರ ಸಂಘದ ಅಧ್ಯಕ್ಷ ಎನ್‌.ಎಲ್.ಶಂಕರಪ್ಪ, ಸರ್ಕಾರದ ಆದೇಶದಂತೆ ಪ್ರತಿ ತಿಂಗಳ 5ನೇ ತಾರೀಖೀನೊಳಗೆ ಶಿಕ್ಷಕರಿಗೆ ವೇತನ ಬಟವಾಡೆ ಮಾಡಬೇಕು, ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೂ ಬಾಕಿ ಇರುವ 4 ತಿಂಗಳ ವೇತನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಗೊಂದಲ ನಿವಾರಿಸಿ: ವೈದ್ಯಕೀಯ ವೆಚ್ಚಕ್ಕೆ ಸಂಬಂಧಿಸಿದಂತೆ ಬಿಇಒ ಕಚೇರಿಯಲ್ಲಿ ಬಾಕಿ ಇರುವ ಬಿಲ್ಲುಗಳನ್ನು ಕೂಡಲೇ ವಿಲೇವಾರಿ ಮಾಡಬೇಕು, ವರ್ಗಾವಣೆಯಲ್ಲಾಗಿರುವ ಗೊಂದಲಗಳನ್ನು ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿದರು.

ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಸಹಶಿಕ್ಷಕರ ಸಂಘದ ರಾಜ್ಯ ಸಹಕಾರ್ಯದರ್ಶಿ ದಾಸಪ್ಪ, ಜಿಲ್ಲಾ ಪದಾಧಿಕಾರಿಗಳಾದ ಮೋಹಾನಾಚಾರಿ, ಶರಣಪ್ಪ, ರಾಧಾಮಣಿ, ಗಂಗಾಧರಮೂರ್ತಿ, ಪಿ.ಲೀಲಾ, ಜಿಲ್ಲಾ ಪ್ರೌಢಶಾಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್‌, ಪದಾಧಿಕಾರಿಗಳಾದ ಶ್ರೀರಾಮರೆಡ್ಡಿ, ಮುರಳಿ, ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಸುಬ್ರಮಣಿ, ನರಸಿಂಹಮೂರ್ತಿ, ಮುಕುಂದಾ ವೆಂಕಟೇಶಗೌಡ, ಶಿಕ್ಷಕರಾದ ವಿಜಯಲಕ್ಷ್ಮೀ, ಪದ್ಮಾವತಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.