ಎಲ್ಲಾ ಶಾಲೆಯಂತಲ್ಲ ಮತ್ತಿಘಟ್ಟದ ಸರ್ಕಾರಿ ಶಾಲೆ

ಮಕ್ಕಳಿಗೆ ಪರಿಸರ ಸಂರಕ್ಷಣೆ, ನೀರಿನ ಅರಿವು • ಶಾಲಾ ಆವರಣದಲ್ಲಿವೆ ಹಲವು ರೀತಿ ಮರಗಿಡಗಳು

Team Udayavani, Aug 19, 2019, 4:18 PM IST

mandya-tdy-1

ಕೆ.ಆರ್‌.ಪೇಟೆ ತಾಲೂಕಿನ ಮತ್ತಿಘಟ್ಟ ಸರ್ಕಾರಿ ಶಾಲಾ ಆವರಣದಲ್ಲಿ ಮಕ್ಕಳು ಸ್ವಚ್ಛತೆ ಕಾರ್ಯಮಾಡುತ್ತಿರುವುದು.

ಕೆ.ಆರ್‌.ಪೇಟೆ: ಮನೆ ಚಿಕ್ಕದಾಗಿದ್ದರೂ ಮನಸ್ಸು ದೊಡ್ಡದಾಗಿರಬೇಕು ಎಂಬ ಮಾತಿನಂತೆ ಶಾಲೆ, ಶಾಲೆಯ ಆವರಣ ಚಿಕ್ಕದಾಗಿದ್ದರೂ ಸಹ ಮಕ್ಕಳಿಗೆ ಮಾತ್ರ ಆಧುನಿಕ ಶಿಕ್ಷಣ ನೀಡುವ ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆ ಅರಿವಿನ ಮೂಲಕ ಮತ್ತಿಘಟ್ಟದ ಸರ್ಕಾರಿ ಶಾಲೆ ಎಲ್ಲರಿಗೂ ಮಾದರಿಯಾಗಿದೆ.

ಮತ್ತಿಘಟ್ಟ ಶಾಲೆಗೆ ಎ.ಬಿ.ಮಹೇಶ್‌ ಮುಖ್ಯ ಶಿಕ್ಷಕರಾಗಿ ನೇಮಕವಾದ ದಿನವೇ ಇಲ್ಲಿನ ಮುಖ್ಯ ಶಿಕ್ಷಕರು ಎರಡು ಟೀಕ್‌ ಮರ ಸಸಿ ನೆಡುವ ಮೂಲಕ ಶಾಲೆಯನ್ನು ಹಸಿರೀಕರಣ ಮಾಡುವುದಕ್ಕೆ ಚಾಲನೆ ನೀಡಿದರು. ನಂತರ ಹತ್ತಾರು ವಿವಿಧ ಬಗೆಯ ಸಸಿ ನೆಡುವುದರ ಜೊತೆಗೆ ಮಕ್ಕಳಿಗೂ ಪರಿಸರ ಸಂರಕ್ಷಣೆ ಹೇಳಿಕೊಡುತ್ತಿದ್ದಾರೆ.

ವಾರಕ್ಕೆ ಒಂದುದಿನ ಹೆಚ್ಚುವರಿಯಾಗಿ ಬೆಳೆಯುವ ಸಸಿಗಳನ್ನು ಸಮವಾಗಿ ಕತ್ತರಿಸಿ ಸಸಿಗಳ ಬುಡ ಸ್ವಚ್ಛಮಾಡಿ ನೆಲಕ್ಕೆ ಉದುರುವ ಎಲೆಗಳನ್ನು ಬುಡಕ್ಕೆ ಹಾಕುವ ಮೂಲಕ ಅವುಗಳಿಂದಲೇ ಸಾವಯವ ಗೊಬ್ಬರ ತಯಾರು ಮಾಡುತ್ತಿದ್ದಾರೆ. ಅಲ್ಲದೇ, ಮಕ್ಕಳಿಗೂ ಸಸಿ ಬೆಳೆಸುವುದು ಮತ್ತು ಸಾವಯವ ಗೊಬ್ಬರ ತಯಾರು ಮಾಡುವ ಬಗ್ಗೆ ಶಾಲೆಯಲ್ಲಿ ಕಲಿಸಲಾಗುತ್ತಿದೆ.

ನಲಿಕಲಿ ಜೊತೆಗೆ ಆಧುನಿಕ ಶಿಕ್ಷಣ: ಸರ್ಕಾರಿ ಶಾಲೆ ಎಂದರೆ ಗುಣಮಟ್ಟದ ಶಿಕ್ಷಣ ಸಿಗುವುದಿಲ್ಲ ಎಂದು ಕೆಲವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲು ಮಾಡಿಸುವುದನ್ನು ಕಾಣುತ್ತಿದ್ದೇವೆ. ಆದರೆ, ಈ ಶಾಲೆಯಲ್ಲಿ ಮಕ್ಕಳಿಗೆ ಸರಳವಾಗಿ ನಲಿಕಲಿ ಪದ್ಧತಿಯಲ್ಲಿ ಪಾಠ ಕಲಿಸುವ ಜೊತೆಗೆ ಮುಖ್ಯ ಶಿಕ್ಷಕರ ಮನವಿ ಮೇರೆಗೆ ಇನ್ಫೋಸಿಸ್‌ ಅವರು ಕೊಡುಗೆಯಾಗಿ ನೀಡಿರುವ ಕಂಪ್ಯೂಟರ್‌ಗಳನ್ನು ಬಳಸಿಕೊಂಡು ಮಕ್ಕಳಿಗೆ ಆಧುನಿಕವಾಗಿ ಪಾಠವನ್ನು ಹೇಳಿಕೊಡುತ್ತಿದ್ದಾರೆ.

ನೀರು ಮರುಬಳಕೆ ಮತ್ತು ಸ್ವಚ್ಛತೆಗೆ ಆದ್ಯತೆ: ಶಾಲೆ ಹೊರಭಾಗದ ಆವರಣದ ತುಂಬೆಲ್ಲಾ ಮರಗಿಡಗಳು ಬೆಳೆದಿವೆ. ಎಲೆಗಳು ಉದುರು ವುದು ಸಾಮಾನ್ಯವಾಗಿದ್ದರೂ ಪ್ರತಿದಿನ ಶಾಲೆ ಆವರಣವನ್ನು ಸ್ವಚ್ಛಗೊಳಿಸುವುದರಿಂದ ಸುಂದರ ಮತ್ತು ಸ್ವಚ್ಛ ಪರಿಸರ ನಿರ್ಮಾಣ ವಾಗಿದೆ. ಇದರ ಜೊತೆಗೆ ಶಾಲಾ ಕೊಠಡಿ ಒಳಭಾಗದಲ್ಲಿಯೂ ಸ್ವಚ್ಛತೆ ಕಾಪಾಡಿಕೊಂಡಿ ದ್ದು ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಿದ್ದಾರೆ. ಜೊತೆಗೆ ಮಕ್ಕಳು ಮಧ್ಯಾಹ್ನ ಬಿಸಿಯೂಟ ಮಾಡಿದ ನಂತರ ಕೈ ಮತ್ತು ತಟ್ಟೆಗಳನ್ನು ತೊಳೆದ ನೀರು ನೇರವಾಗಿ ಮರಗಳು ಮತ್ತು ಹೂವಿನ ಸಸಿಗಳ ಬೇರು ಸೇರುವಂತೆ ಮಾಡಲಾಗಿದೆ.

ಅವಧಿಗೂ ಮುನ್ನ ಶಾಲೆಗೆ ಹಾಜರು: ಮತ್ತಿಘಟ್ಟ ಗ್ರಾಮಸ್ಥರು ಹೇಳುವ ಪ್ರಕಾರ ಈ ಶಾಲೆಯ ಮುಖ್ಯ ಶಿಕ್ಷಕರು ಶಾಲಾ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಶಾಲೆಗೆ ಪ್ರತಿದಿನ ಬಂದು ಸಸಿಗಳಿಗೆ ನೀರು ಹಾಕುವ ಕೆಲಸ ಮಾಡುತ್ತಾರೆ. ಮತ್ತೂರ್ವ ಶಿಕ್ಷಕಿ ಎಚ್.ಎನ್‌.ಸುರೇಖಾ ಕೂಡಾ ಸಮಯಕ್ಕೆ ಸರಿಯಾಗಿ ಶಾಲೆಗೆ ಆಗಮಿಸಿ ಕೆಲಸಗಳಲ್ಲಿ ತೊಡಗಿಕೊಳ್ಳುವುದು ಶಾಲೆಗೆ ಮತ್ತೂಂದು ವಿಶೇಷವಾಗಿದೆ.

 

•ಎಚ್.ಬಿ.ಮಂಜುನಾಥ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.