ರಸ್ತೆ ಅವ್ಯವಸ್ಥೆ: ನಿಲ್ಲದ ನಾಗರಿಕರ ಪರದಾಟ

ಯುಜಿಡಿ, ಪೈಪ್‌ಲೈನ್‌ ಕಾಮಗಾರಿ ಅವಾಂತರ | ನಗರಸಭೆ ಅಧಿಕಾರಿಗಳು, ಶಾಸಕರ ಮೌನ

Team Udayavani, Aug 19, 2019, 4:51 PM IST

tk-tdy-01

ಯುಜಿಡಿ ಕಾಮಗಾರಿಯಿಂದ ಕೆಸರು ಗದ್ದೆಯಂತಾಗಿರುವ ರಸ್ತೆಗಳು.

ತಿಪಟೂರು: ನಗರ ಅಭಿವೃದ್ಧಿಯತ್ತ ಸಾಗುತ್ತಿದ್ದರೂ ಮೂಲಸೌಲಭ್ಯಗಳಲ್ಲಿ ಒಂದಾದ ರಸ್ತೆಗಳ ಅಭಿವೃದ್ಧಿ ಆಮೆವೇಗದಲ್ಲಿ ಸಾಗುತ್ತಿದ್ದು, ಇದರಿಂದ ನಗರದ ಬೆಳವಣಿಗೆಗೆ ಕಪ್ಪುಚುಕ್ಕೆ ಇಟ್ಟಂತಾಗಿದೆ. ತಿಪಟೂರು ಜಿಲ್ಲೆಯಾಗುವ ಎಲ್ಲಾ ಲಕ್ಷಣಗಳಿದ್ದರೂ ನಗರದ ಯಾವ ಬಡಾವಣೆಗಳಲ್ಲೂ ಉತ್ತಮ ರಸ್ತೆಗಳಿಲ್ಲದೆ ನಾಗರಿಕರು ಪರದಾಡುವ ಪರಿಸ್ಥಿತಿ ಇದೆ.

ನಗರದ ಎಲ್ಲಾ ಬಡಾವಣೆಗಳ ರಸ್ತೆಗಳನ್ನು ಯುಜಿಡಿ ಕಾಮಗಾರಿ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್‌ಗಳಿಗೆ ಮನಸೋ ಇಚ್ಛೆ ಅಗೆದು ಕಾಮಗಾರಿ ಮಾಡಿರುವುದರಿಂದ ಸಾಕಷ್ಟು ಗುಂಡಿಗಳು ಬಿದ್ದಿದ್ದು, ಪ್ರತಿನಿತ್ಯ ಒಂದಲ್ಲೊಂದು ಅವಘಡಗಳು ಸಂಭವಿಸುತ್ತಿವೆ. ನಗರದ ಎಲ್ಲ ಬಡಾವಣೆಯ ರಸ್ತೆಗಳೂ ಸರಿಯಾಗಿಲ್ಲದಿರುವುದರಿಂದ ವಾಹನ ಸವಾರರಂತೂ ಸರ್ಕಸ್‌ ಮಾಡಿಕೊಂಡು ಸಂಚರಿಸುವಂತಾಗಿದೆ. ಈ ಬಗ್ಗೆ ತಾಲೂಕು ಆಡಳಿತ, ನಗರಸಭೆ ಕ್ಯಾರೇ ಎನ್ನದೆ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ.

ಹಾಳಾಗಿರುವ ರಸ್ತೆಗಳು: ನಗರದಲ್ಲಿ ಕಳೆದ ಒಂದೆಡರಡು ವರ್ಷದಿಂದ ಯುಜಿಡಿ ಕಾಮಗಾರಿ ನಡೆಯುತ್ತಿದ್ದು, ಕೆಲವೆಡೆ ಮುಗಿದಿದ್ದರೂ ರಸ್ತೆಗಳು ಮಾತ್ರ ಕೊಚ್ಚೆ ಗುಂಡಿಯಾಗಿವೆ. ರಸ್ತೆ ಮಧ್ಯ ಪೈಪ್‌ ಹೂಳಲು ಮತ್ತು ಮ್ಯಾನ್‌ ಹೋಲ್ ಮಾಡಲು ರಸ್ತೆ ಅಗೆದು ಹಾಳು ಮಾಡಲಾಗಿದೆ. ಹೀಗೆ ಅಗೆದಿರುವ ರಸ್ತೆ ಹಾಗೇ ಬಿಟ್ಟಿರುವುದರಿಂದ ಮಳೆ ನೀರು ನಿಂತು ರಸ್ತೆ ಯಾವುದು ಗುಂಡಿ ಯಾವುದೆಂದು ಗೊತ್ತಾಗದ ಪರಿಸ್ಥಿತಿ ಇದೆ. ಕೆಲವೊಮ್ಮೆ ಬಿದ್ದು ಗಾಯಗೊಂಡಿರುವ ನಿದರ್ಶನವಿದೆ. ನಗರದ ವಿದ್ಯಾನಗರ, ಕಂಚಾಘಟ್ಟ, ಸ್ಟೆಲ್ಲಾ ಮೇರೀಸ್‌ ರಸ್ತೆ, ಹೈಟೆನ್ಷನ್‌ಲೈನ್‌ ರಸ್ತೆ, ಗೋವಿನಪುರ, ಹಳೇಪಾಳ್ಯ, ಗಾಂಧೀನಗರ, ಎಪಿಎಂಸಿ ರಸ್ತೆ, ಚಾಮುಂಡೇಶ್ವರಿ ಬಡಾವಣೆ ಸೇರಿ ನಗರದ ಎಲ್ಲಾ ಬಡಾವಣೆಗಳಲ್ಲಿಯೂ ಇದೇ ಗೋಳಾಗಿದ್ದು, ರಸ್ತೆಗಳು ಮಳೆಗೆ ಕೆಸರು ಗದ್ದೆಯಂತಾಗಿವೆ. ರಸ್ತೆಗಳು ಸಮತಟ್ಟಾಗಿಲ್ಲದ ಕಾರಣ ಹಗಲೇ ಓಡಾಡಲು ಸಾಧ್ಯವಾಗುತ್ತಿಲ್ಲ. ಇನ್ನು ರಾತ್ರಿ ರಸ್ತೆ ಯಾವುದು, ಗುಂಡಿ ಯಾವುದು ಎಂಬುದೇ ಗೊತ್ತಾಗದಂತಾಗಿದೆ. ಇನ್ನು ಅಗೆದಿರುವ ಮಣ್ಣು ಒಂದು ರೀತಿಯ ಜೇಡಿಮಣ್ಣಿನಂತಿದ್ದು ಸೋನೆ ಮಳೆ ಬಂದರೂ ವಾಹನಗಳ ಚಕ್ರಕ್ಕೆ ಸುತ್ತಿಕೊಂಡು ಜಾರುತ್ತಿರುವುದರಿಂದ ಸಾಕಷ್ಟು ಜನರು ಗಂಭೀರ ಗಾಯಗೊಂಡಿದ್ದಾರೆ. ನಡೆದುಕೊಂಡು ಹೋಗಲೂ ಕಷ್ಟವಾಗಿದ್ದು, ಜನರ ಗೋಳು ಕೇಳುವವರಿಲ್ಲದಂತಾಗಿದೆ.

ಎಚ್ಚೆತ್ತುಕೊಳ್ಳದ ಅಧಿಕಾರಿಗಳು: ರಸ್ತೆ ದುರಸ್ತಿ ಮಾಡಿಸಿ ಎಂದು ಜನರು ಪ್ರತಿಭಟನೆ, ಹೋರಾಟ ಮಾಡಿದರೂ ಎಚ್ಚೆತ್ತುಕೊಳ್ಳದ ನಗರಸಭೆ ಹಾಗೂ ಯುಜಿಡಿ ಅಧಿಕಾರಿಗಳು ಅಧಿಕಾರಿಗಳು ಮನವಿ ಕಸದಬುಟ್ಟಿಗೆ ಬಿಸಾಕಿ, ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಒಟ್ಟಾರೆ ಸರ್ಕಾರ ರಸ್ತೆ ದುರಸ್ತಿಗೆ ನೂರಾರು ಕೋಟಿ ರೂ. ಬಿಡುಗಡೆ ಮಾಡಿದ್ದರೂ, ಜನಸಮಾನ್ಯರು ಕೋಟ್ಯಂತರ ರೂ. ತೆರಿಗೆ ಕಟ್ಟಿದ್ದರೂ ನಗರದಲ್ಲಿ ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸುವಲ್ಲಿ ಅಧಿಕಾರಿಗಳು ವಿಫ‌ಲರಾಗಿದ್ದಾರೆ. ಈಗಾಲಾದರೂ ನಗರಸಭೆ ಯುಜಿಡಿ ಕಾಮಗಾರಿಯಿಂದ ಹಾಳಾಗಿರುವ ರಸ್ತೆ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು.

 

● ಬಿ. ರಂಗಸ್ವಾಮಿ, ತಿಪಟೂರು

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.