ವಿದ್ಯಾರ್ಥಿ ಸಂಖ್ಯೆ ಹೆಚ್ಚಳಕ್ಕೆ ಸರ್ವ ಶಿಕ್ಷಾ ಅಭಿಯಾನ ಪಣ

ದ.ಕ. ಜಿಲ್ಲೆಯಲ್ಲಿ 1-10 ತರಗತಿ ದಾಖಲಾತಿಯಲ್ಲಿ ಶೇ. 95.37 ಗುರಿ ಸಾಧನೆ; ಸುಳ್ಯ ಪ್ರಥಮ

Team Udayavani, Aug 20, 2019, 5:17 AM IST

w-34

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಕ್ಕೆ ಸರ್ವ ಶಿಕ್ಷಾ ಅಭಿಯಾನವು ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಟ್ಟು 3,06,864 ವಿದ್ಯಾರ್ಥಿಗಳಿದ್ದು, ಶೇ. 95.37 ಗುರಿ ಸಾಧನೆಯಾಗಿದೆ.

ಮಕ್ಕಳಿಗೆ ಶಿಕ್ಷಣದ ಹಕ್ಕು ಕಡ್ಡಾಯ. ಯಾವುದೇ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾರಣಕ್ಕಾಗಿ ಸರ್ವ ಶಿಕ್ಷಾ ಅಭಿಯಾನ ಪ್ರಯತ್ನ ನಡೆಸುತ್ತಿದ್ದು, ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಯತ್ತ ಕರೆತರಲು ಮಕ್ಕಳ ಮನೆ ಬಾಗಿಲಿಗೇ ತೆರಳಿ ಕ್ರಮ ವಹಿಸಲಾಗುತ್ತಿದೆ. ಅದಕ್ಕಾಗಿಯೇ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಗುರಿ ನಿಗದಿಪಡಿಸಿ ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

ಕಳೆದ ವರ್ಷ ಜಿಲ್ಲೆಯ ಸರಕಾರಿ, ಅನುದಾನಿತ, ಅನುದಾನರಹಿತ, ಖಾಸಗಿ, ಸಿಬಿಎಸ್ಸಿಇ ಶಾಲೆಗಳ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ 3,21,757 ಆಗಿತ್ತು. ಅದೇ ಸಂಖ್ಯೆಯನ್ನು ಗುರಿಯಾಗಿರಿಸಿಕೊಂಡು ಈ ಬಾರಿ ಪ್ರಯತ್ನ ನಡೆಸಲಾಗಿದ್ದು, ಹೊಸ ದಾಖಲಾತಿಗಳೂ ಸೇರಿ ಒಟ್ಟು ಸಂಖ್ಯೆ 3,06864 ಆಗಿದೆ.

ಬಂಟ್ವಾಳ ಶೇ. 98.32
ಬಂಟ್ವಾಳದಲ್ಲಿ ಒಟ್ಟು ಗುರಿ 59,148 ಆಗಿದ್ದು, ಪ್ರಸ್ತುತ 58,156 ಮಕ್ಕಳಿದ್ದು, ಶೇ. 98.32 ಗುರಿ ಸಾಧಿಸಲಾಗಿದೆ. ಬೆಳ್ತಂಗಡಿಯಲ್ಲಿ 40,051 ಒಟ್ಟು ಗುರಿಯಾಗಿದ್ದು, 38,785 ಮಕ್ಕಳಿದ್ದು, ಶೇ. 96.84 ಗುರಿ ಸಾಧಿಸಲಾಗಿದೆ. ಮಂಗಳೂರು ಉತ್ತರದಲ್ಲಿ 66,465 ಒಟ್ಟು ಗುರಿಯಾಗಿದ್ದು, ಪ್ರಸ್ತುತ 63,017 ಮಕ್ಕಳಿದ್ದು, ಶೇ. 94.81 ಗುರಿ, ಮಂಗಳೂರು ದಕ್ಷಿಣದಲ್ಲಿ 68917 ಒಟ್ಟು ಗುರಿಯಾದರೆ, 62,950 ಮಕ್ಕಳು ಪ್ರಸ್ತುತ ಇದ್ದು, ಶೇ. 91.34 ಗುರಿ ಸಾಧನೆಯಾಗಿದೆ.

ಮೂಡಬಿದಿರೆಯಲ್ಲಿ 19,159 ಒಟ್ಟು ಗುರಿಯಾದರೆ, 18,238 ಮಕ್ಕಳು ಪ್ರಸ್ತುತ ಇದ್ದು, ಶೇ. 95.19 ಗುರಿ ಸಾಧನೆಯಾಗಿದೆ. ಪುತ್ತೂರಿನಲ್ಲಿ 47,791 ಒಟ್ಟು ಮಕ್ಕಳ ಗುರಿಯಾಗಿದ್ದರೆ, 45,690 ಮಕ್ಕಳು ಪ್ರಸ್ತುತ ಇದ್ದು, ಶೇ. 95.60 ಗುರಿ ಸಾಧನೆಯಾಗಿದೆ.

1ನೇ ತರಗತಿಗೆ 32,832 ಮಕ್ಕಳು
ಖಾಸಗಿ ಶಾಲೆಗಳತ್ತ ವಿದ್ಯಾರ್ಥಿಗಳು ಹೆಚ್ಚು ಬಂದರೂ ಸರಕಾರಿ ಶಾಲೆಗಳತ್ತ ಮಕ್ಕಳನ್ನು ಸೆಳೆಯುವುದು ಇಲಾಖೆಗೂ ಸವಾಲು. ಆದರೆ ಈ ವರ್ಷ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಆರಂಭಿಸಿರುವುದು, ಆಯ್ದ ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಿರುವುದು ಮತ್ತು ನಲಿಕಲಿಯಲ್ಲಿಯೂ ಪರಿಣಾಮಕಾರಿ ಆಂಗ್ಲ ಶಿಕ್ಷಣ ಬೋಧನೆಗೆ ಸರಕಾರ ಕ್ರಮ ಕೈಗೊಂಡಿರುವುದು ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಒಂದನೇ ತರಗತಿಗೆ ಇಲ್ಲಿವರೆಗೆ ಒಟ್ಟು 32,832 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ವಿಶೇಷ ದಾಖಲಾತಿ
ವಿಶೇಷ ದಾಖಲಾತಿ ಆಂದೋಲನದಡಿ ಸಿಆರ್‌ಪಿ, ಬಿಆರ್‌ಪಿಯವರು ಮನೆಮನೆಗೆ ತೆರಳಿ ಮಕ್ಕಳನ್ನು ಶಾಲೆಗೆ ದಾಖಲು ಮಾಡಲು ಅರಿವು ಮೂಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29 ಮಂದಿ ದಾಖಲಾತಿ ಪಡೆದುಕೊಂಡಿದ್ದಾರೆ.

ಶೇ. 100ರಷ್ಟು ತಲುಪಲು ಪ್ರಯತ್ನ

ಮಕ್ಕಳ ವಿಶೇಷ ದಾಖಲಾತಿ ಆಂದೋಲನದೊಂದಿಗೆ, ಈ ಬಾರಿ ಕರ್ನಾಟಕ ಪಬ್ಲಿಕ್‌ ಸ್ಕೂಲ್, ಆಂಗ್ಲ ಮಾಧ್ಯಮ ತರಗತಿ ಆರಂಭ ಮುಂತಾದವು ಮಕ್ಕಳ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಇದರೊಂದಿಗೆ ಸರಕಾರಿ ಶಾಲೆಗಳಿಗೆ ಮಕ್ಕಳು ಬರಲು ದಾನಿಗಳು ಬಸ್‌ ವ್ಯವಸ್ಥೆ ಮಾಡಿರುವುದು, ಅವಶ್ಯ ಸಾಮಗ್ರಿಗಳನ್ನು ನೀಡಿರುವುದರಿಂದ ಮಕ್ಕಳಿಗೆ ಸುಲಭವಾಯಿತು. ಇನ್ನೂ ಶೇ.5ರಷ್ಟು ಮಕ್ಕಳ ದಾಖಲಾತಿ ಬಾಕಿಯಿದ್ದು, ಶೇ.100ಕ್ಕೆ ನಿರಂತರ ಪ್ರಯತ್ನಿಸಲಾಗುವುದು.
– ಲೋಕೇಶ್‌, ಜಿಲ್ಲಾ ಉಪ ಯೋಜನ ಸಮನ್ವಯಾಧಿಕಾರಿ, ಸರ್ವ ಶಿಕ್ಷಾ ಅಭಿಯಾನ, ದ.ಕ.
– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.