ನಿಷ್ಪಕ್ಷಪಾತ ತನಿಖೆ ನಡೆಯಲಿ

ರಾಜಕೀಯ ಸಂಚಲನ ಮೂಡಿಸಿದ ಕದ್ದಾಲಿಕೆ

Team Udayavani, Aug 20, 2019, 5:55 AM IST

w-48

ಹಿಂದೆ ರಾಮಕೃಷ್ಣ ಹೆಗಡೆ ಮತ್ತು ಎಚ್ ಡಿ ದೇವೇಗೌಡರ ನಡುವಿನ ರಾಜಕೀಯ ಗುದ್ದಾಟಕ್ಕೆ ಫೋನ್‌ ಕದ್ದಾಲಿಕೆ ಕಾರಣವಾಗಿತ್ತು. ಈಗ ದೇವೇಗೌಡರ ಪುತ್ರ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ನಡುವೆ ಸಮರಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ದೂರವಾಣಿ ಕದ್ದಾಲಿಕೆ ಪ್ರಕರಣ ದೊಡ್ಡದಾಗಿಯೇ ಸದ್ದು ಮಾಡುತ್ತಿದೆ. ಹಿಂದೆ ರಾಜ್ಯದಲ್ಲಿ ಮೊದಲ ಬಾರಿಗೆ 1988ರಲ್ಲಿ ಜನತಾ ಪಕ್ಷದ ಸರ್ಕಾರ ಇದ್ದಾಗ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದಾಗ ಇಂಥದ್ದೊಂದು ಆರೋಪ ಕೇಳಿಬಂದಿತ್ತು. ಇಡೀ ರಾಷ್ಟ್ರದಲ್ಲಿ ಇದು ಸಂಚಲನ ಮೂಡಿಸಿತ್ತು. ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಯಿತು. ಆಗ ರಾಮಕೃಷ್ಣ ಹೆಗಡೆ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದವರಲ್ಲಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಎಚ್.ಡಿ.ದೇವೇಗೌಡರು ಸೇರಿದ್ದರು.

ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ಜನತಾಪಕ್ಷದ ಒಂದು ಗುಂಪು ವಿ.ಪಿ.ಸಿಂಗ್‌ ಆವರ ಜನತಾ ಮೋರ್ಚಾದಲ್ಲಿ ವಿಲೀನವಾಗಿತ್ತು. ಆದರೆ, ಎಚ್.ಡಿ.ದೇವೇಗೌಡರು ಜನತಾಪಕ್ಷದಲ್ಲೇ ಅಜಿತ್‌ ಸಿಂಗ್‌ ಅವರ ಜತೆಯೇ ಉಳಿದುಕೊಂಡಿದ್ದರು. ಆಗ, ದೇವೇಗೌಡರು ಹಾಗೂ ಅಜಿತ್‌ಸಿಂಗ್‌ ನಡುವೆ ಲ್ಯಾಂಡ್‌ಲೈನ್‌ (ಸ್ಥಿರ) ದೂರವಾಣಿ ಮೂಲಕ ನಡೆದ ಮಾತುಕತೆ ಟ್ಯಾಪಿಂಗ್‌ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.

ಆ ವಿಚಾರ ಲೋಕಸಭೆಯಲ್ಲೂ ಪ್ರತಿಧ್ವನಿಸಿ ಆಗಿನ ದೂರಸಂಪರ್ಕ ಸಚಿವರು, ಕೆಲವೊಂದು ಸಮಾಜಘಾತುಕ ಶಕ್ತಿಗಳ ಚಲನವಲನಗಳ ಮೇಲೆ ನಿಗಾ ಇರಿಸಲು ಕರ್ನಾಟಕ ಗುಪ್ತದಳ (ಡಿಐಜಿ)ಗೆ ಅನುಮತಿ ನೀಡಲಾಗಿತ್ತು. 50 ಮಂದಿ ರಾಜಕಾರಣಿಗಳ ದೂರವಾಣಿ ಸಂಭಾಷಣೆ ಸಹ ಟ್ಯಾಪಿಂಗ್‌ ಮಾಡಲಾಗಿದೆ ಎಂದು ಸಂಸತ್‌ನಲ್ಲಿ ಹೇಳಿಕೆ ನೀಡಿದ್ದರು. ಇದು ತೀವ್ರ ಸಂಚಲನ ಮೂಡಿಸಿ ರಾಮಕೃಷ್ಣ ಹೆಗಡೆ ಅವರು ದೆಹಲಿಗೆ ಹೋಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಆ ನಂತರ ಆ ಪ್ರಕರಣದ ಬಗ್ಗೆ ಯಾವುದೇ ತನಿಖೆ ನಡೆದಿರಲಿಲ್ಲ.

ಇದೀಗ ಎಚ್.ಡಿ.ದೇವೇಗೌಡರ ಪುತ್ರ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ ಎಂಬ ಆರೋಪ ಎದುರಾಗಿದೆ. ಆರೋಪ ಮಾಡಿರುವವರಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಸೇರಿದ್ದಾರೆ. ಜೆಡಿಎಸ್‌ ಜತೆ ಸೇರಿ ಸರ್ಕಾರ ರಚನೆ ಮಾಡಿದಾಗಲೇ ಇಂತದ್ದೊಂದು ಆರೋಪ ಕೇಳಿಬಂದಿದೆ. ಇದೀಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.

ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಂಡಿದೆ. ಈ ಹಂತದಲ್ಲಿ ಸಿಬಿಐ ತನಿಖೆಯಿಂದ ಮುಂದೇನಾಗಬಹುದು ಎಂಬ ಪ್ರಶ್ನೆ ಮೂಡಿದೆ. ರಾಜಕೀಯವಾಗಿ ಕುಮಾರಸ್ವಾಮಿಯವರನ್ನು ಹಣಿಯಲು ಈ ಪ್ರಕರಣ ಬಳಕೆ ಮಾಡಬಹುದೇ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಮಧ್ಯೆ, ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ರಾಜಕಾರಣಿಗಳಿಗಿಂತ ಕೆಲವು ಪೊಲೀಸ್‌ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಲಿದೆ. ಯಾಕೆಂದರೆ ದೂರವಾಣಿ ಕದ್ದಾಲಿಕೆ ಮಾಡಿರುವುದು ಬಹಿರಂಗಗೊಂಡಿರುವುದು ಅಧಿಕಾರಿಗಳ ನಡುವಿನ ಆಂತರಿಕ ಸಂಘರ್ಷದಿಂದ. ಹೀಗಾಗಿ, ಮೊದಲಿಗೆ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿಗಳ ನೆತ್ತಿ ಮೇಲೆಯೇ ತೂಗುಕತ್ತಿಯಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಆ ನಂತರದ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ನಡೆದಿರುವ ಕದ್ದಾಲಿಕೆಗಳೂ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆಪರೇಷನ್‌ ಕಮಲ ಕಾರ್ಯಾಚರಣೆ ಬಗ್ಗೆಯೂ ಸಿಬಿಐ ತನಿಖೆಯಾಗಲಿ ಎಂದು ಆಗ್ರಹವನ್ನೂ ಮಾಡಿದ್ದಾರೆ.

ಆದರೆ, ಈಗ ರಾಜ್ಯ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ನಡೆದ ದೂರವಾಣಿ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿದೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಹೊರಬರಲಿ ಎನ್ನುವುದು ಎಲ್ಲರ ಆಶಯ.

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.